Homeಮುಖಪುಟಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ...

ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಎನ್‌ಸಿಪಿಯ ಛಗನ್ ಭುಜ್ಬಾಲ್ ಜ್ಯೋತಿ ಬಾ ಫುಲೆ, ಶಾಹು ಮಹರಾಜ್‌, ಅಂಬೇಡ್ಕರ್‌ ಮತ್ತು ಸಾವಿತ್ರಿ ಬಾಯಿ ಫುಲೆಯ ಹೆಸರಿನಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -
- Advertisement -

ಉನ್ನತ ಅಧಿಕಾರದ ಹುದ್ದೆಗೇರಿದ ಠಾಕ್ರೆ ಕುಟುಂಬದ ಮೊದಲಿಗರಾದ ಉದ್ಧವ್‌ ಠಾಕ್ರೆ ಮಹಾರಾಷ್ಟ್ರದ 19ನೇ ಸಿಎಂ ಆಗಿ ಇಂದು ಸಂಜೆ 6.44ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಅಲ್ಲಿಗೆ ಇಂದಿನಿಂದ ಠಾಕ್ರೆ ಸರ್ಕಾರ್‌ ಶುರುವಾಗಲಿದ್ದು ಅವರ ಸಚಿವ ಸಂಪುಟದಲ್ಲಿ ಎನ್‌ಸಿಪಿ ಮುಖಂಡರಾದ ಛಗನ್ ಭುಜ್ಬಾಲ್, ಜಯಂತ್ ಪಾಟೀಲ್ ಶಿವಸೇನೆಯ ಏಕ್‌ನಾಥ್‌ ಸಿಂಧೆ ಮತ್ತು ಸುಭಾಶ್‌ ದೇಸಾಯಿ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಖ್ಯಸ್ಥ ಬಾಲಾಸಾಹೇಬ್ ಥೋರತ್, ಹಾಗೂ ನಿತಿನ್‌ ರಾವತ್‌ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರ ವಿಕಾಸ್ ಅಘಾಡಿ ಹೆಸರಿನಲ್ಲಿ ಸರ್ಕಾರ ರಚನೆಯಾಗಲಿದ್ದು ಉಪಮುಖ್ಯಮಂತ್ರಿಗಳು ಯಾರಾಗಲಿದ್ದಾರೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. 9000 ಚದರ ಅಡಿಗಳ ಬೃಹತ್‌ ವೇದಿಕೆ ನಿರ್ಮಿಸಲಾಗಿತ್ತು. ಅದೇ ಜಾಗದಲ್ಲಿ ದಿವಂಗತ ಬಾಳ್‌ ಠಾಕ್ರೆಯವರು 1966 ರಲ್ಲಿ ಶಿವಸೇನೆ ಸ್ಥಾಪಿಸಿದ್ದರು. ಮತ್ತು ಅವರ ಸಮಾಧಿ ಕೂಡ ಅಲ್ಲಿಯೇ ಇದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಕೂಡ ಸಮಾರಂಭರಲ್ಲಿ ಭಾಗವಹಿಸಿ ಉದ್ಧವ್‌ ಠಾಕ್ರೆಯ ಕೈಕುಲುಕಿ ಶುಭಾಶಯ ತಿಳಿಸಿದ್ದಾರೆ. ಇದು ಒಂದು ವಾರದಿಂದ ನಡೆದ ಕಹಿ ಘಟನೆಗಳನ್ನು ಒಂದಷ್ಟು ಕಡಿಮೆ ಮಾಡಿತ್ತು.

ಎನ್‌ಸಿಪಿಯ ಛಗನ್ ಭುಜ್ಬಾಲ್ ಜ್ಯೋತಿ ಬಾ ಫುಲೆ, ಶಾಹು ಮಹರಾಜ್‌, ಅಂಬೇಡ್ಕರ್‌ ಮತ್ತು ಸಾವಿತ್ರಿ ಬಾಯಿ ಫುಲೆಯ ಹೆಸರಿನಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್; ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್; ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಮತ್ತು ಮಧ್ಯಪ್ರದೇಶದ ಸಿಎಂ ಕಮಲ್‌ ನಾಥ್‌, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉದ್ಧವ್ ಠಾಕ್ರೆ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಕ್ಕಾಗಿ ರಾಹುಲ್ ಗಾಂಧಿ ಗುರುವಾರ ವಿಷಾದ ವ್ಯಕ್ತಪಡಿಸಿದ್ದಾರೆ. “ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಕಾರಣವಾದ ಘಟನೆಗಳು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಪೂರ್ವನಿದರ್ಶನವನ್ನು ನೀಡಿವೆ. ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಬಿಜೆಪಿಯ ಪ್ರಯತ್ನವನ್ನು ಸೋಲಿಸಲು ಮಹಾರಾಷ್ಟ್ರ ವಿಕಾಸ್ ಅಘಾಡಿ ಒಗ್ಗೂಡಿರುವುದಕ್ಕೆ ನನಗೆ ಸಂತೋಷವಾಗಿದೆ. ಮಹಾರಾಷ್ಟ್ರದ ಜನರು ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಮೈತ್ರಿ ಸರ್ಕಾರ ಅವರಿಗೆ ಸ್ಥಿರ, ಜಾತ್ಯತೀತ ಮತ್ತು ಬಡವರ ಪರವಾದ ಸರ್ಕಾರವನ್ನು ಒದಗಿಸುತ್ತದೆ ಎಂದು ನನಗೆ ವಿಶ್ವಾಸವಿದೆ ” ಎಂಬ ರಾಹುಲ್ ಗಾಂಧಿಯವರ ಪತ್ರವನ್ನು ಓದಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....