Homeಮುಖಪುಟಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ...

ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಎನ್‌ಸಿಪಿಯ ಛಗನ್ ಭುಜ್ಬಾಲ್ ಜ್ಯೋತಿ ಬಾ ಫುಲೆ, ಶಾಹು ಮಹರಾಜ್‌, ಅಂಬೇಡ್ಕರ್‌ ಮತ್ತು ಸಾವಿತ್ರಿ ಬಾಯಿ ಫುಲೆಯ ಹೆಸರಿನಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -
- Advertisement -

ಉನ್ನತ ಅಧಿಕಾರದ ಹುದ್ದೆಗೇರಿದ ಠಾಕ್ರೆ ಕುಟುಂಬದ ಮೊದಲಿಗರಾದ ಉದ್ಧವ್‌ ಠಾಕ್ರೆ ಮಹಾರಾಷ್ಟ್ರದ 19ನೇ ಸಿಎಂ ಆಗಿ ಇಂದು ಸಂಜೆ 6.44ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಅಲ್ಲಿಗೆ ಇಂದಿನಿಂದ ಠಾಕ್ರೆ ಸರ್ಕಾರ್‌ ಶುರುವಾಗಲಿದ್ದು ಅವರ ಸಚಿವ ಸಂಪುಟದಲ್ಲಿ ಎನ್‌ಸಿಪಿ ಮುಖಂಡರಾದ ಛಗನ್ ಭುಜ್ಬಾಲ್, ಜಯಂತ್ ಪಾಟೀಲ್ ಶಿವಸೇನೆಯ ಏಕ್‌ನಾಥ್‌ ಸಿಂಧೆ ಮತ್ತು ಸುಭಾಶ್‌ ದೇಸಾಯಿ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಖ್ಯಸ್ಥ ಬಾಲಾಸಾಹೇಬ್ ಥೋರತ್, ಹಾಗೂ ನಿತಿನ್‌ ರಾವತ್‌ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರ ವಿಕಾಸ್ ಅಘಾಡಿ ಹೆಸರಿನಲ್ಲಿ ಸರ್ಕಾರ ರಚನೆಯಾಗಲಿದ್ದು ಉಪಮುಖ್ಯಮಂತ್ರಿಗಳು ಯಾರಾಗಲಿದ್ದಾರೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. 9000 ಚದರ ಅಡಿಗಳ ಬೃಹತ್‌ ವೇದಿಕೆ ನಿರ್ಮಿಸಲಾಗಿತ್ತು. ಅದೇ ಜಾಗದಲ್ಲಿ ದಿವಂಗತ ಬಾಳ್‌ ಠಾಕ್ರೆಯವರು 1966 ರಲ್ಲಿ ಶಿವಸೇನೆ ಸ್ಥಾಪಿಸಿದ್ದರು. ಮತ್ತು ಅವರ ಸಮಾಧಿ ಕೂಡ ಅಲ್ಲಿಯೇ ಇದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಕೂಡ ಸಮಾರಂಭರಲ್ಲಿ ಭಾಗವಹಿಸಿ ಉದ್ಧವ್‌ ಠಾಕ್ರೆಯ ಕೈಕುಲುಕಿ ಶುಭಾಶಯ ತಿಳಿಸಿದ್ದಾರೆ. ಇದು ಒಂದು ವಾರದಿಂದ ನಡೆದ ಕಹಿ ಘಟನೆಗಳನ್ನು ಒಂದಷ್ಟು ಕಡಿಮೆ ಮಾಡಿತ್ತು.

ಎನ್‌ಸಿಪಿಯ ಛಗನ್ ಭುಜ್ಬಾಲ್ ಜ್ಯೋತಿ ಬಾ ಫುಲೆ, ಶಾಹು ಮಹರಾಜ್‌, ಅಂಬೇಡ್ಕರ್‌ ಮತ್ತು ಸಾವಿತ್ರಿ ಬಾಯಿ ಫುಲೆಯ ಹೆಸರಿನಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್; ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್; ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಮತ್ತು ಮಧ್ಯಪ್ರದೇಶದ ಸಿಎಂ ಕಮಲ್‌ ನಾಥ್‌, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉದ್ಧವ್ ಠಾಕ್ರೆ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಕ್ಕಾಗಿ ರಾಹುಲ್ ಗಾಂಧಿ ಗುರುವಾರ ವಿಷಾದ ವ್ಯಕ್ತಪಡಿಸಿದ್ದಾರೆ. “ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಕಾರಣವಾದ ಘಟನೆಗಳು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಪೂರ್ವನಿದರ್ಶನವನ್ನು ನೀಡಿವೆ. ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಬಿಜೆಪಿಯ ಪ್ರಯತ್ನವನ್ನು ಸೋಲಿಸಲು ಮಹಾರಾಷ್ಟ್ರ ವಿಕಾಸ್ ಅಘಾಡಿ ಒಗ್ಗೂಡಿರುವುದಕ್ಕೆ ನನಗೆ ಸಂತೋಷವಾಗಿದೆ. ಮಹಾರಾಷ್ಟ್ರದ ಜನರು ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಮೈತ್ರಿ ಸರ್ಕಾರ ಅವರಿಗೆ ಸ್ಥಿರ, ಜಾತ್ಯತೀತ ಮತ್ತು ಬಡವರ ಪರವಾದ ಸರ್ಕಾರವನ್ನು ಒದಗಿಸುತ್ತದೆ ಎಂದು ನನಗೆ ವಿಶ್ವಾಸವಿದೆ ” ಎಂಬ ರಾಹುಲ್ ಗಾಂಧಿಯವರ ಪತ್ರವನ್ನು ಓದಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...