Homeಮುಖಪುಟಒಬ್ಬ ಶಿವಸೇನಾ ಶಾಸಕ ಹೇಳಿದರೂ ಇಂದೇ ರಾಜೀನಾಮೆ ನೀಡುತ್ತೇನೆ: ಉದ್ಧವ್ ಠಾಕ್ರೆ

ಒಬ್ಬ ಶಿವಸೇನಾ ಶಾಸಕ ಹೇಳಿದರೂ ಇಂದೇ ರಾಜೀನಾಮೆ ನೀಡುತ್ತೇನೆ: ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯ ಸಂಕಷ್ಟದ ಕುರಿತು ಮೊದಲ ಬಾರಿಗೆ ಮಹಾರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, “ನಾನು ಖುರ್ಚಿಗೆ ಆಸೆಪಟ್ಟವನಲ್ಲ, ಒಬ್ಬ ಶಿವಸೇನಾ ಶಾಸಕ ಹೇಳಿದರೂ ಇಂದೇ ರಾಜೀನಾಮೆ ನೀಡುತ್ತೇನೆ, ಆದರೆ ಮುಖಾಮುಖಿ ಹೇಳಬೇಕು. ಬನ್ನಿ ಇಂದೇ ನನ್ನ ರಾಜೀನಾಮೆ ಪತ್ರ ತೆಗೆದುಕೊಂಡು ಹೋಗಿ” ಎಂದಿದ್ದಾರೆ.

ಶಾಸಕರು ಹೇಳಿದರೆ ನಾನು ರಾಜೀನಾಮೆ ಕೊಡಲು ಸಿದ್ದನಿದ್ದೇನೆ. ಎಷ್ಟು ಜನ ನನ್ನ ಪರವಾಗಿದ್ದಾರೆ, ಎಷ್ಟು ಜನ ನನ್ನ ವಿರುದ್ಧವಾಗಿದ್ದಾರೆ ಎಂದು ನಾನು ನೋಡುವುದಿಲ್ಲ. ಒಬ್ಬ ಶಾಸಕ ಹೇಳಿದರೂ ರಾಜೀನಾಮೆ ಕೊಡುತ್ತೇನೆ. ನನ್ನ ವಿರುದ್ಧ ಒಬ್ಬ ಶಾಸಕ ಮಾತನಾಡಿದರೂ ಅದು ದೊಡ್ಡ ನಾಚಿಕೆ ನನಗೆ ಎಂದು ಅವರು ಹೇಳಿದ್ದಾರೆ.

ಈಗ ನಮ್ಮ ಶಾಸಕರಿಗೆ ಏನಾಗುತ್ತಿದೆ ಎಂಬುದು ತಿಳಿಯುತ್ತಿಲ್ಲ. ಅವರನ್ನು ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆ. ಈ ಕುರಿತು ಹಲವು ಶಾಸಕರು ನನಗೆ ಕರೆ ಮಾಡಿ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಉದ್ಧವ್ ಹೇಳಿದ್ದಾರೆ.

ಶರದ್ ಪವಾರ್ ಮತ್ತು ಕಮಲ್ ನಾಥ್ ಕರೆ ಮಾಡಿ ನನಗೆ ಬೆಂಬಲ ಸೂಚಿಸಿದ್ದಾರೆ. ನೀವು ಮುಂದುವರೆಯಿರಿ ಜೊತೆಗಿದ್ದೇವೆ ಎಂದಿದ್ದಾರೆ. ಅಲ್ಲದೆ ರಾಜ್ಯದ ಶಿವಸೈನಿಕರು ಸಹ ನನ್ನ ಜೊತೆಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಎಂ ಹುದ್ದೆ ಬರುತ್ತದೆ, ಹೋಗುತ್ತದೆ. ಆದರೆ ನನಗೆ ಜನರ ಪ್ರೀತಿ ಮುಖ್ಯ. ಈ ಎರಡು ವರ್ಷಗಳಲ್ಲಿ ನನಗೆ ಸಾಕಷ್ಟು ಪ್ರೀತಿ ಸಿಕ್ಕಿದೆ. ನನ್ನ ನಂತರ ಶಿವಸೈನಿಕರು ಮುಖ್ಯಮಂತ್ರಿಯಾದರೆ ನಾನು ಖುಷಿ ಪಡುತ್ತೇನೆ ಎಂದಿದ್ದಾರೆ.

ನಾನು ಬಾಳಾಸಾಹೇಬ್‌ರವರ ಮಗ. ಶಿವಸೇನೆ ಹಿಂದುತ್ವವನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ. ಇಂದಿಗೂ ನಮ್ಮ ಪ್ರಮುಖ ಅಜೆಂಡಾ ಅದೇ ಆಗಿದೆ. ಆದರೆ ಈ ಕುರಿತು ಆಕ್ಷೇಪಣೆಗಳಿದ್ದರೆ ನನ್ನ ಬಳಿ ಬರುವುದು ಬಿಟ್ಟು ಅವರು ಸೂರತ್‌ಗೆ ಏಕೆ ಹೋದರು? ಬಿಜೆಪಿಯ ಕುತಂತ್ರದಿಂದ ಕೆಲ ಶಾಸಕರನ್ನು ದಿಕ್ಕುತಪ್ಪಿಸಲಾಗುತ್ತಿದೆ ಎಂದು ಉದ್ಧವ್ ಹೇಳಿದ್ದಾರೆ.

ಇದನ್ನೂ ಓದಿ; ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ಶಾಸಕ ಏಕನಾಥ ಶಿಂಧೆ ಹೇಳುತ್ತಿದ್ದಾರಲ್ಲ, ರಾಜಿನಾಮೆ ಕೊಡಿ…

    ಊಸರವಳ್ಳಿಯನ್ನೂ ನಾಚಿಸುವ ನಾಯಕ..,

    ಅಧಿಕಾರ ಬೇಕೆಂದರೆ ರಾತ್ರೋರಾತ್ರಿ ಹಿಂದುತ್ವ ಹೋಗಿ ಜಾತ್ಯಾತೀತರಾಗುತ್ತಾನೆ.., ಅಧಿಕಾರ ಹೋಗುತ್ತೆ ಅಂದಾಗ ಮತ್ತೆ ಹಿಂದುತ್ವ 😡😡😡

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...