Homeಮುಖಪುಟಒಬ್ಬ ಶಿವಸೇನಾ ಶಾಸಕ ಹೇಳಿದರೂ ಇಂದೇ ರಾಜೀನಾಮೆ ನೀಡುತ್ತೇನೆ: ಉದ್ಧವ್ ಠಾಕ್ರೆ

ಒಬ್ಬ ಶಿವಸೇನಾ ಶಾಸಕ ಹೇಳಿದರೂ ಇಂದೇ ರಾಜೀನಾಮೆ ನೀಡುತ್ತೇನೆ: ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯ ಸಂಕಷ್ಟದ ಕುರಿತು ಮೊದಲ ಬಾರಿಗೆ ಮಹಾರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, “ನಾನು ಖುರ್ಚಿಗೆ ಆಸೆಪಟ್ಟವನಲ್ಲ, ಒಬ್ಬ ಶಿವಸೇನಾ ಶಾಸಕ ಹೇಳಿದರೂ ಇಂದೇ ರಾಜೀನಾಮೆ ನೀಡುತ್ತೇನೆ, ಆದರೆ ಮುಖಾಮುಖಿ ಹೇಳಬೇಕು. ಬನ್ನಿ ಇಂದೇ ನನ್ನ ರಾಜೀನಾಮೆ ಪತ್ರ ತೆಗೆದುಕೊಂಡು ಹೋಗಿ” ಎಂದಿದ್ದಾರೆ.

ಶಾಸಕರು ಹೇಳಿದರೆ ನಾನು ರಾಜೀನಾಮೆ ಕೊಡಲು ಸಿದ್ದನಿದ್ದೇನೆ. ಎಷ್ಟು ಜನ ನನ್ನ ಪರವಾಗಿದ್ದಾರೆ, ಎಷ್ಟು ಜನ ನನ್ನ ವಿರುದ್ಧವಾಗಿದ್ದಾರೆ ಎಂದು ನಾನು ನೋಡುವುದಿಲ್ಲ. ಒಬ್ಬ ಶಾಸಕ ಹೇಳಿದರೂ ರಾಜೀನಾಮೆ ಕೊಡುತ್ತೇನೆ. ನನ್ನ ವಿರುದ್ಧ ಒಬ್ಬ ಶಾಸಕ ಮಾತನಾಡಿದರೂ ಅದು ದೊಡ್ಡ ನಾಚಿಕೆ ನನಗೆ ಎಂದು ಅವರು ಹೇಳಿದ್ದಾರೆ.

ಈಗ ನಮ್ಮ ಶಾಸಕರಿಗೆ ಏನಾಗುತ್ತಿದೆ ಎಂಬುದು ತಿಳಿಯುತ್ತಿಲ್ಲ. ಅವರನ್ನು ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆ. ಈ ಕುರಿತು ಹಲವು ಶಾಸಕರು ನನಗೆ ಕರೆ ಮಾಡಿ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಉದ್ಧವ್ ಹೇಳಿದ್ದಾರೆ.

ಶರದ್ ಪವಾರ್ ಮತ್ತು ಕಮಲ್ ನಾಥ್ ಕರೆ ಮಾಡಿ ನನಗೆ ಬೆಂಬಲ ಸೂಚಿಸಿದ್ದಾರೆ. ನೀವು ಮುಂದುವರೆಯಿರಿ ಜೊತೆಗಿದ್ದೇವೆ ಎಂದಿದ್ದಾರೆ. ಅಲ್ಲದೆ ರಾಜ್ಯದ ಶಿವಸೈನಿಕರು ಸಹ ನನ್ನ ಜೊತೆಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಎಂ ಹುದ್ದೆ ಬರುತ್ತದೆ, ಹೋಗುತ್ತದೆ. ಆದರೆ ನನಗೆ ಜನರ ಪ್ರೀತಿ ಮುಖ್ಯ. ಈ ಎರಡು ವರ್ಷಗಳಲ್ಲಿ ನನಗೆ ಸಾಕಷ್ಟು ಪ್ರೀತಿ ಸಿಕ್ಕಿದೆ. ನನ್ನ ನಂತರ ಶಿವಸೈನಿಕರು ಮುಖ್ಯಮಂತ್ರಿಯಾದರೆ ನಾನು ಖುಷಿ ಪಡುತ್ತೇನೆ ಎಂದಿದ್ದಾರೆ.

ನಾನು ಬಾಳಾಸಾಹೇಬ್‌ರವರ ಮಗ. ಶಿವಸೇನೆ ಹಿಂದುತ್ವವನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ. ಇಂದಿಗೂ ನಮ್ಮ ಪ್ರಮುಖ ಅಜೆಂಡಾ ಅದೇ ಆಗಿದೆ. ಆದರೆ ಈ ಕುರಿತು ಆಕ್ಷೇಪಣೆಗಳಿದ್ದರೆ ನನ್ನ ಬಳಿ ಬರುವುದು ಬಿಟ್ಟು ಅವರು ಸೂರತ್‌ಗೆ ಏಕೆ ಹೋದರು? ಬಿಜೆಪಿಯ ಕುತಂತ್ರದಿಂದ ಕೆಲ ಶಾಸಕರನ್ನು ದಿಕ್ಕುತಪ್ಪಿಸಲಾಗುತ್ತಿದೆ ಎಂದು ಉದ್ಧವ್ ಹೇಳಿದ್ದಾರೆ.

ಇದನ್ನೂ ಓದಿ; ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ಶಾಸಕ ಏಕನಾಥ ಶಿಂಧೆ ಹೇಳುತ್ತಿದ್ದಾರಲ್ಲ, ರಾಜಿನಾಮೆ ಕೊಡಿ…

    ಊಸರವಳ್ಳಿಯನ್ನೂ ನಾಚಿಸುವ ನಾಯಕ..,

    ಅಧಿಕಾರ ಬೇಕೆಂದರೆ ರಾತ್ರೋರಾತ್ರಿ ಹಿಂದುತ್ವ ಹೋಗಿ ಜಾತ್ಯಾತೀತರಾಗುತ್ತಾನೆ.., ಅಧಿಕಾರ ಹೋಗುತ್ತೆ ಅಂದಾಗ ಮತ್ತೆ ಹಿಂದುತ್ವ 😡😡😡

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...