Homeಕರ್ನಾಟಕಮರಾಠ ಪ್ರಾಧಿಕಾರ ರಚನೆಯೇ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರೇರಣೆ: ಡಿ.ಕೆ. ಶಿವಕುಮಾರ್ ಆರೋಪ

ಮರಾಠ ಪ್ರಾಧಿಕಾರ ರಚನೆಯೇ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರೇರಣೆ: ಡಿ.ಕೆ. ಶಿವಕುಮಾರ್ ಆರೋಪ

"ರಾಜ್ಯದಲ್ಲಿನ ಮರಾಠಿಗರ ಅಭಿವೃದ್ಧಿಗೆ ಎಲ್ಲ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಮರಾಠ ಪ್ರಾಧಿಕಾರ ಅನಗತ್ಯವಾಗಿತ್ತು. ಇದರಿಂದ ಈ ವಿವಾದ ಎದ್ದಿದೆ. ಈ ಸರ್ಕಾರ ಧರ್ಮ, ಜಾತಿಗಳ ನಡುವೆ ವಿಷಬೀಜ ಬಿತ್ತಿ, ಆ ಭಾಗದ ಜನರಲ್ಲಿ ಗೊಂದಲ ಸೃಷ್ಟಿಸಿದೆ"

- Advertisement -
- Advertisement -

“ರಾಜ್ಯ ಸರ್ಕಾರ ಅನಗತ್ಯವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನಿಸಿದ್ದೇ, ಠಾಕ್ರೆ ಅವರ ಹೇಳಿಕೆಗೆ ಪ್ರೇರಣೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಕರ್ನಾಟಕ ಆಕ್ರಮಿಸಿಕೊಂಡಿರುವ ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇತ್ತೀಚೆಗೆ ಹೇಳಿದ್ದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, “ರಾಜ್ಯಗಳ ವಿಂಗಡನೆಯಾಗುವಾಗ ತೆಗೆದುಕೊಂಡ ಗಡಿ ತೀರ್ಮಾನ ಈಗ ಮುಗಿದ ಅಧ್ಯಾಯ. ಕರ್ನಾಟಕ ಭೂಪಟ ಸ್ಪಷ್ಟವಾಗಿದ್ದು, ನಮ್ಮ ಊರು, ಗ್ರಾಮಗಳೆಲ್ಲ ವಿಂಗಡಣೆ ಆಗಿವೆ. ನಾವು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ನಮ್ಮಿಂದ ಒಂದಿಂಚೂ ಅವರಿಗೆ ಹೋಗುವುದಿಲ್ಲ, ಅವರಿಂದಲೂ ಒಂದಿಂಚೂ ನಮಗೆ ಬರುವುದಿಲ್ಲ. ಗಡಿ ವಿಚಾರದಲ್ಲಿ ಮಹಾಜನ್ ವರದಿ ಇದೆ. ಎಲ್ಲ ಭಾಗದ ಗಡಿ ನಿಗದಿಯಾಗಿದೆ. ಗೊಂದಲ ಸೃಷ್ಟಿಸಲು, ರಾಜಕೀಯ ಉದ್ದೇಶದಿಂದ ಠಾಕ್ರೆ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಕರ್ನಾಟಕ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ನಿರ್ಧಾರ ಉದ್ಧವ್ ಠಾಕ್ರೆ ಅವರ ಹೇಳಿಕೆಗೆ ಪ್ರೇರಣೆ” ಎಂದು ಹೇಳಿದರು.

“ರಾಜ್ಯದಲ್ಲಿನ ಮರಾಠಿಗರ ಅಭಿವೃದ್ಧಿಗೆ ಎಲ್ಲ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಮರಾಠ ಪ್ರಾಧಿಕಾರ ಅನಗತ್ಯವಾಗಿತ್ತು. ಇದರಿಂದ ಈ ವಿವಾದ ಎದ್ದಿದೆ. ಈ ಸರ್ಕಾರ ಧರ್ಮ, ಜಾತಿಗಳ ನಡುವೆ ವಿಷಬೀಜ ಬಿತ್ತಿ, ಆ ಭಾಗದ ಜನರಲ್ಲಿ ಗೊಂದಲ ಸೃಷ್ಟಿಸಿದೆ. ವಿಭಿನ್ನ ಅಭಿಪ್ರಾಯ ಮೂಡುವಂತೆ ಬೀಜ ಬಿತ್ತಿರುವುದೇ ರಾಜ್ಯ ಬಿಜೆಪಿ ಸರ್ಕಾರ. ರಾಜ್ಯದಲ್ಲಿರುವ ಮರಾಠ ಭಾಷಿಗರು ನಮ್ಮವರೇ. ಹೀಗಾಗಿ ಎಲ್ಲರೂ ಶಾಂತಿಯುತವಾಗಿ ಸೌಹಾರ್ದತೆಯಿಂದ ಇರಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜೆ.ಪಿ. ನಡ್ಡಾ ಯಾರು, ಅವರಿಗೆ ನಾನ್ಯಾಕೆ ಉತ್ತರಿಸಲಿ: ರಾಹುಲ್ ಗಾಂಧಿ

ಮೂರು ಕರಾಳ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲವಾಗಿ, ರಾಜ್ಯದಲ್ಲಿ ಕೊರೋನಾ ಪರಿಹಾರ ಹಣ ನೀಡದಿರುವುದು ಹಾಗೂ ಬೆಲೆ ಏರಿಕೆ, ತೆರಿಗೆ ಏರಿಕೆಯಂತಹ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಜನರ ಧ್ವನಿಯನ್ನು ಎತ್ತಲು ನಾಳೆ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

“ನಾವು ರೈತರ ಪರವಾಗಿ ನಿಲ್ಲುತ್ತೇವೆ. ಕರಾಳ ಕಾಯ್ದೆಗಳನ್ನು ಕಿತ್ತುಹಾಕಬೇಕು ಎಂಬುದು ರೈತರ ಬೇಡಿಕೆ. ಅವರ ಬೇಡಿಕೆ ಈಡೇರುವವರೆಗೆ ನಾವು ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ. ಈ ಹಿನ್ನೆಲೆಯಲ್ಲಿ ಅವರಿಗೆ ಧ್ವನಿಯಾಗಲು ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಶಿಸ್ತಿನ ಪ್ರತಿಭಟನೆ ಮಾಡಬೇಕಿದ್ದು, ಎಲ್ಲ ವಾಹನಗಳು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಂದು, ಅಲ್ಲಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ಬರಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ” ಎಂದು ಹೇಳಿದರು.

“ಈ ಸರ್ಕಾರದಿಂದ ನೊಂದಿರುವ ರೈತರು, ಎಲ್ಲ ವರ್ಗದ ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.


ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...