Homeಕರ್ನಾಟಕಮರಾಠ ಪ್ರಾಧಿಕಾರ ರಚನೆಯೇ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರೇರಣೆ: ಡಿ.ಕೆ. ಶಿವಕುಮಾರ್ ಆರೋಪ

ಮರಾಠ ಪ್ರಾಧಿಕಾರ ರಚನೆಯೇ ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರೇರಣೆ: ಡಿ.ಕೆ. ಶಿವಕುಮಾರ್ ಆರೋಪ

"ರಾಜ್ಯದಲ್ಲಿನ ಮರಾಠಿಗರ ಅಭಿವೃದ್ಧಿಗೆ ಎಲ್ಲ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಮರಾಠ ಪ್ರಾಧಿಕಾರ ಅನಗತ್ಯವಾಗಿತ್ತು. ಇದರಿಂದ ಈ ವಿವಾದ ಎದ್ದಿದೆ. ಈ ಸರ್ಕಾರ ಧರ್ಮ, ಜಾತಿಗಳ ನಡುವೆ ವಿಷಬೀಜ ಬಿತ್ತಿ, ಆ ಭಾಗದ ಜನರಲ್ಲಿ ಗೊಂದಲ ಸೃಷ್ಟಿಸಿದೆ"

- Advertisement -
- Advertisement -

“ರಾಜ್ಯ ಸರ್ಕಾರ ಅನಗತ್ಯವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನಿಸಿದ್ದೇ, ಠಾಕ್ರೆ ಅವರ ಹೇಳಿಕೆಗೆ ಪ್ರೇರಣೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಕರ್ನಾಟಕ ಆಕ್ರಮಿಸಿಕೊಂಡಿರುವ ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇತ್ತೀಚೆಗೆ ಹೇಳಿದ್ದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, “ರಾಜ್ಯಗಳ ವಿಂಗಡನೆಯಾಗುವಾಗ ತೆಗೆದುಕೊಂಡ ಗಡಿ ತೀರ್ಮಾನ ಈಗ ಮುಗಿದ ಅಧ್ಯಾಯ. ಕರ್ನಾಟಕ ಭೂಪಟ ಸ್ಪಷ್ಟವಾಗಿದ್ದು, ನಮ್ಮ ಊರು, ಗ್ರಾಮಗಳೆಲ್ಲ ವಿಂಗಡಣೆ ಆಗಿವೆ. ನಾವು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ನಮ್ಮಿಂದ ಒಂದಿಂಚೂ ಅವರಿಗೆ ಹೋಗುವುದಿಲ್ಲ, ಅವರಿಂದಲೂ ಒಂದಿಂಚೂ ನಮಗೆ ಬರುವುದಿಲ್ಲ. ಗಡಿ ವಿಚಾರದಲ್ಲಿ ಮಹಾಜನ್ ವರದಿ ಇದೆ. ಎಲ್ಲ ಭಾಗದ ಗಡಿ ನಿಗದಿಯಾಗಿದೆ. ಗೊಂದಲ ಸೃಷ್ಟಿಸಲು, ರಾಜಕೀಯ ಉದ್ದೇಶದಿಂದ ಠಾಕ್ರೆ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಕರ್ನಾಟಕ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ನಿರ್ಧಾರ ಉದ್ಧವ್ ಠಾಕ್ರೆ ಅವರ ಹೇಳಿಕೆಗೆ ಪ್ರೇರಣೆ” ಎಂದು ಹೇಳಿದರು.

“ರಾಜ್ಯದಲ್ಲಿನ ಮರಾಠಿಗರ ಅಭಿವೃದ್ಧಿಗೆ ಎಲ್ಲ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಮರಾಠ ಪ್ರಾಧಿಕಾರ ಅನಗತ್ಯವಾಗಿತ್ತು. ಇದರಿಂದ ಈ ವಿವಾದ ಎದ್ದಿದೆ. ಈ ಸರ್ಕಾರ ಧರ್ಮ, ಜಾತಿಗಳ ನಡುವೆ ವಿಷಬೀಜ ಬಿತ್ತಿ, ಆ ಭಾಗದ ಜನರಲ್ಲಿ ಗೊಂದಲ ಸೃಷ್ಟಿಸಿದೆ. ವಿಭಿನ್ನ ಅಭಿಪ್ರಾಯ ಮೂಡುವಂತೆ ಬೀಜ ಬಿತ್ತಿರುವುದೇ ರಾಜ್ಯ ಬಿಜೆಪಿ ಸರ್ಕಾರ. ರಾಜ್ಯದಲ್ಲಿರುವ ಮರಾಠ ಭಾಷಿಗರು ನಮ್ಮವರೇ. ಹೀಗಾಗಿ ಎಲ್ಲರೂ ಶಾಂತಿಯುತವಾಗಿ ಸೌಹಾರ್ದತೆಯಿಂದ ಇರಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜೆ.ಪಿ. ನಡ್ಡಾ ಯಾರು, ಅವರಿಗೆ ನಾನ್ಯಾಕೆ ಉತ್ತರಿಸಲಿ: ರಾಹುಲ್ ಗಾಂಧಿ

ಮೂರು ಕರಾಳ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲವಾಗಿ, ರಾಜ್ಯದಲ್ಲಿ ಕೊರೋನಾ ಪರಿಹಾರ ಹಣ ನೀಡದಿರುವುದು ಹಾಗೂ ಬೆಲೆ ಏರಿಕೆ, ತೆರಿಗೆ ಏರಿಕೆಯಂತಹ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಜನರ ಧ್ವನಿಯನ್ನು ಎತ್ತಲು ನಾಳೆ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

“ನಾವು ರೈತರ ಪರವಾಗಿ ನಿಲ್ಲುತ್ತೇವೆ. ಕರಾಳ ಕಾಯ್ದೆಗಳನ್ನು ಕಿತ್ತುಹಾಕಬೇಕು ಎಂಬುದು ರೈತರ ಬೇಡಿಕೆ. ಅವರ ಬೇಡಿಕೆ ಈಡೇರುವವರೆಗೆ ನಾವು ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ. ಈ ಹಿನ್ನೆಲೆಯಲ್ಲಿ ಅವರಿಗೆ ಧ್ವನಿಯಾಗಲು ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಶಿಸ್ತಿನ ಪ್ರತಿಭಟನೆ ಮಾಡಬೇಕಿದ್ದು, ಎಲ್ಲ ವಾಹನಗಳು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಂದು, ಅಲ್ಲಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ಬರಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ” ಎಂದು ಹೇಳಿದರು.

“ಈ ಸರ್ಕಾರದಿಂದ ನೊಂದಿರುವ ರೈತರು, ಎಲ್ಲ ವರ್ಗದ ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.


ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...