Homeಮುಖಪುಟಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ತಿರುವನಂತಪುರಂ ಮಹಾನಗರ, ವಕ್ಫ್‌ ವಿವಾದದ ಮುನಂಬಂ ಗೆದ್ದ ಬಿಜೆಪಿ

- Advertisement -
- Advertisement -

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯ ಸೂಚನೆ ನೀಡಿದೆ.

ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಹಾಗೂ ನಗರ ಮಹಾನಗರ ಪಾಲಿಕೆ, ಎಲ್ಲದರಲ್ಲೂ ಕಾಂಗ್ರೆಸ್-ಮುಸ್ಲಿಂ ಲೀಗ್ ನೇತೃತ್ವದ ಯುಡಿಎಫ್‌ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ. ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್‌) ಕೆಲವೆಡೆ ತನ್ನ ಸಾಂಪ್ರದಾಯಿಕ ಬಲಿಷ್ಠ ಕೋಟೆಗಳನ್ನೂ ಉಳಿಸಿಕೊಳ್ಳಲು ಹೆಣಗಾಡಿದೆ.

ಮುಂದಿನ ವರ್ಷ (2026) ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿ ಎಂದು ಪರಿಗಣಿಸಲಾಗಿದೆ. ಇಂದಿನ ಫಲಿತಾಂಶ ರಾಜಕೀಯ ಪಲ್ಲಟಕ್ಕೆ ಕಾರಣವಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದರ ಜೊತೆಗೆ ತಿರುವನಂತಪುರಂ ಮಹಾನಗರ ಪಾಲಿಕೆ, ವಕ್ಫ್‌ ಭೂಮಿ ವಿವಾದದ ಕೇಂದ್ರವಾಗಿರುವ ಮುನಂಬಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸಿರುವುದು, ಮುಂದಿನ ಚುನಾವಣೆಯಲ್ಲಿ ಎನ್‌ಡಿಎಯ ಸೀಮಿತ, ಆದರೆ ಗಮನಾರ್ಹ ವಿಸ್ತರಣೆಯನ್ನು ಒತ್ತಿ ಹೇಳುತ್ತಿದೆ.

ಕೇರಳದ 6 ಮಹಾನಗರ ಪಾಲಿಕೆಗಳು, 87 ಪುರಸಭೆಗಳು, 14 ಜಿಲ್ಲಾ ಪಂಚಾಯತ್‌ಗಳು, 152 ತಾಲೂಕು ಪಂಚಾಯತ್‌ಗಳು ಮತ್ತು 941 ಗ್ರಾಮ ಪಂಚಾಯತ್‌ಗಳಿಗೆ 2025ರ ಡಿಸೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟಗೊಂಡಿದೆ.

6 ಮಹಾನಗರ ಪಾಲಿಕೆಗಳಾದ ತಿರುವನಂತಪುರಂ, ಕೊಲ್ಲಂ, ಕೊಚ್ಚಿ, ತ್ರಿಶೂರ್, ಕಣ್ಣೂರು, ಕೋಝಿಕ್ಕೋಡ್ ಪೈಕಿ ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು ಈ ನಾಲ್ಕರಲ್ಲಿ ಯುಡಿಎಫ್‌ ಜಯಭೇರಿ ಸಾಧಿಸಿದೆ.

ಇದು ಗಮನಾರ್ಹ ಗೆಲುವು. ಏಕೆಂದರೆ, 2020ರಲ್ಲಿ ಎಲ್‌ಡಿಎಫ್‌ ಗೆದ್ದಿದ್ದ ಹಲವು ಮಹಾನಗರ ಪಾಲಿಕೆಗಳನ್ನು ಯುಡಿಎಫ್‌ ಮರಳಿ ಪಡೆದುಕೊಂಡಿದೆ. ವಿಶೇಷವಾಗಿ ಕಣ್ಣೂರು ಮತ್ತು ತ್ರಿಶೂರ್‌ ಪಾಲಿಕೆಗಳು ದೀರ್ಘಕಾಲದಿಂದ ಎಲ್‌ಡಿಎಫ್‌ನ ಬಲಿಷ್ಠ ಕೋಟೆಗಳಾಗಿದ್ದವು.

ಬಿಜೆಪಿ ನೇತೃತ್ವದ ಎನ್‌ಡಿಎ ಮೊದಲ ಬಾರಿಗೆ ತಿರುವನಂತಪುರಂ ಮಹಾನಗರ ಪಾಲಿಕೆಯನ್ನು ಗೆದ್ದುಕೊಂಡಿದೆ. ಇದು ಬಿಜೆಪಿಗೆ ಕೇರಳದ ನಗರ ರಾಜಕಾರಣದಲ್ಲಿ ಮಹತ್ವದ ಮುಂದಡಿಯಾಗಿದೆ.

ಎಲ್‌ಡಿಎಫ್‌ ಕೇವಲ ಒಂದು ಮಹಾನಗರ ಪಾಲಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೋಝಿಕ್ಕೋಡ್ ಪಾಲಿಕೆಯಲ್ಲಿ ಎಲ್‌ಡಿಎಫ್‌ ಗೆದ್ದಿದೆ. ಆದರೆ, ಅಲ್ಲಿಯೂ ಯುಡಿಎಫ್‌ ಮತ್ತು ಎನ್‌ಡಿಎ ಪ್ರಬಲ ಪೈಪೋಟಿ ಕೊಟ್ಟಿದೆ.

ಒಟ್ಟು 86 ಪುರಸಭೆಗಳ (2020ರಲ್ಲಿ 87 ಇದ್ದವು, ಒಂದು ಕಡಿಮೆಯಾಗಿದೆ) ಪೈಕಿ 54 ಪುರಸಭೆಗಳನ್ನು ಯುಡಿಎಫ್‌ ಗೆದ್ದುಕೊಂಡಿದೆ. ಇದು ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಯುಡಿಎಫ್‌ನ ಪ್ರಾಬಲ್ಯ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎರ್ನಾಕುಳಂ, ಆಲಪ್ಪುಝ, ಮಲಪ್ಪುರಂ, ಕೊಟ್ಟಾಯಂ, ಪಾಲಕ್ಕಾಡ್‌ ಪುರಸಭೆಗಳಲ್ಲಿ ಯುಡಿಎಫ್‌ ಬಲಿಷ್ಠವಾಗಿ ಗೆದ್ದಿದೆ. ಹಿಂದೆ ಕಳೆದುಕೊಂಡಿದ್ದ ಪತ್ತನಂತಿಟ್ಟ ಮತ್ತು ಇಡುಕ್ಕಿ ಪುರಸಭೆಗಳನ್ನು ಮರಳಿ ಪಡೆದಿದೆ.

ಎಲ್‌ಡಿಎಫ್‌ ತನ್ನ ಸಾಂಪ್ರದಾಯಿಕ ಬಲಿಷ್ಠ ಕೇಂದ್ರಗಳ ಪೈಕಿ ಕೆಲವನ್ನು ಉಳಿಸಿಕೊಂಡಿದೆ. ತಿರುವನಂತಪುರಂನ ಕೆಲ ಭಾಗಗಳು, ಕೊಲ್ಲಂ ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಗೆಲುವು ದಾಖಲಿಸಿದೆ. ಆದರೆ, ಒಟ್ಟಾರೆಯಾಗಿ 2020ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದಿದೆ.

ಪುರಸಭೆಗಳಲ್ಲಿ ಎನ್‌ಡಿಎ ದೊಡ್ಡ ಮಟ್ಟದ ಗೆಲುವು ಪಡೆದಿಲ್ಲ. ಆದರೂ, ಕೆಲವೆಡೆ ಗಮನಾರ್ಹ ಪ್ರದರ್ಶನ ತೋರಿದೆ. ಇನ್ನೂ ಕೆಲವೆಡೆ ಪ್ರಬಲ ಪೈಪೋಟಿ ನೀಡಿದೆ. ಪಾಲಕ್ಕಾಡ್ ಮತ್ತು ತ್ರಿಪುಣಿತ್ತುರದಲ್ಲಿ ಎನ್‌ಡಿಎ ಗೆದ್ದಿದೆ. ತೊಡುಪುಝ ಮತ್ತು ಕಾಂಞಂಗಾಡ್‌ನಲ್ಲಿ ಪ್ರಬಲ ಪೈಪೋಟಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...