Homeಮುಖಪುಟಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ತಿರುವನಂತಪುರಂ ಮಹಾನಗರ, ವಕ್ಫ್‌ ವಿವಾದದ ಮುನಂಬಂ ಗೆದ್ದ ಬಿಜೆಪಿ

- Advertisement -
- Advertisement -

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯ ಸೂಚನೆ ನೀಡಿದೆ.

ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಹಾಗೂ ನಗರ ಮಹಾನಗರ ಪಾಲಿಕೆ, ಎಲ್ಲದರಲ್ಲೂ ಕಾಂಗ್ರೆಸ್-ಮುಸ್ಲಿಂ ಲೀಗ್ ನೇತೃತ್ವದ ಯುಡಿಎಫ್‌ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ. ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್‌) ಕೆಲವೆಡೆ ತನ್ನ ಸಾಂಪ್ರದಾಯಿಕ ಬಲಿಷ್ಠ ಕೋಟೆಗಳನ್ನೂ ಉಳಿಸಿಕೊಳ್ಳಲು ಹೆಣಗಾಡಿದೆ.

ಮುಂದಿನ ವರ್ಷ (2026) ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿ ಎಂದು ಪರಿಗಣಿಸಲಾಗಿದೆ. ಇಂದಿನ ಫಲಿತಾಂಶ ರಾಜಕೀಯ ಪಲ್ಲಟಕ್ಕೆ ಕಾರಣವಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದರ ಜೊತೆಗೆ ತಿರುವನಂತಪುರಂ ಮಹಾನಗರ ಪಾಲಿಕೆ, ವಕ್ಫ್‌ ಭೂಮಿ ವಿವಾದದ ಕೇಂದ್ರವಾಗಿರುವ ಮುನಂಬಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸಿರುವುದು, ಮುಂದಿನ ಚುನಾವಣೆಯಲ್ಲಿ ಎನ್‌ಡಿಎಯ ಸೀಮಿತ, ಆದರೆ ಗಮನಾರ್ಹ ವಿಸ್ತರಣೆಯನ್ನು ಒತ್ತಿ ಹೇಳುತ್ತಿದೆ.

ಕೇರಳದ 6 ಮಹಾನಗರ ಪಾಲಿಕೆಗಳು, 87 ಪುರಸಭೆಗಳು, 14 ಜಿಲ್ಲಾ ಪಂಚಾಯತ್‌ಗಳು, 152 ತಾಲೂಕು ಪಂಚಾಯತ್‌ಗಳು ಮತ್ತು 941 ಗ್ರಾಮ ಪಂಚಾಯತ್‌ಗಳಿಗೆ 2025ರ ಡಿಸೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟಗೊಂಡಿದೆ.

6 ಮಹಾನಗರ ಪಾಲಿಕೆಗಳಾದ ತಿರುವನಂತಪುರಂ, ಕೊಲ್ಲಂ, ಕೊಚ್ಚಿ, ತ್ರಿಶೂರ್, ಕಣ್ಣೂರು, ಕೋಝಿಕ್ಕೋಡ್ ಪೈಕಿ ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು ಈ ನಾಲ್ಕರಲ್ಲಿ ಯುಡಿಎಫ್‌ ಜಯಭೇರಿ ಸಾಧಿಸಿದೆ.

ಇದು ಗಮನಾರ್ಹ ಗೆಲುವು. ಏಕೆಂದರೆ, 2020ರಲ್ಲಿ ಎಲ್‌ಡಿಎಫ್‌ ಗೆದ್ದಿದ್ದ ಹಲವು ಮಹಾನಗರ ಪಾಲಿಕೆಗಳನ್ನು ಯುಡಿಎಫ್‌ ಮರಳಿ ಪಡೆದುಕೊಂಡಿದೆ. ವಿಶೇಷವಾಗಿ ಕಣ್ಣೂರು ಮತ್ತು ತ್ರಿಶೂರ್‌ ಪಾಲಿಕೆಗಳು ದೀರ್ಘಕಾಲದಿಂದ ಎಲ್‌ಡಿಎಫ್‌ನ ಬಲಿಷ್ಠ ಕೋಟೆಗಳಾಗಿದ್ದವು.

ಬಿಜೆಪಿ ನೇತೃತ್ವದ ಎನ್‌ಡಿಎ ಮೊದಲ ಬಾರಿಗೆ ತಿರುವನಂತಪುರಂ ಮಹಾನಗರ ಪಾಲಿಕೆಯನ್ನು ಗೆದ್ದುಕೊಂಡಿದೆ. ಇದು ಬಿಜೆಪಿಗೆ ಕೇರಳದ ನಗರ ರಾಜಕಾರಣದಲ್ಲಿ ಮಹತ್ವದ ಮುಂದಡಿಯಾಗಿದೆ.

ಎಲ್‌ಡಿಎಫ್‌ ಕೇವಲ ಒಂದು ಮಹಾನಗರ ಪಾಲಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೋಝಿಕ್ಕೋಡ್ ಪಾಲಿಕೆಯಲ್ಲಿ ಎಲ್‌ಡಿಎಫ್‌ ಗೆದ್ದಿದೆ. ಆದರೆ, ಅಲ್ಲಿಯೂ ಯುಡಿಎಫ್‌ ಮತ್ತು ಎನ್‌ಡಿಎ ಪ್ರಬಲ ಪೈಪೋಟಿ ಕೊಟ್ಟಿದೆ.

ಒಟ್ಟು 86 ಪುರಸಭೆಗಳ (2020ರಲ್ಲಿ 87 ಇದ್ದವು, ಒಂದು ಕಡಿಮೆಯಾಗಿದೆ) ಪೈಕಿ 54 ಪುರಸಭೆಗಳನ್ನು ಯುಡಿಎಫ್‌ ಗೆದ್ದುಕೊಂಡಿದೆ. ಇದು ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಯುಡಿಎಫ್‌ನ ಪ್ರಾಬಲ್ಯ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎರ್ನಾಕುಳಂ, ಆಲಪ್ಪುಝ, ಮಲಪ್ಪುರಂ, ಕೊಟ್ಟಾಯಂ, ಪಾಲಕ್ಕಾಡ್‌ ಪುರಸಭೆಗಳಲ್ಲಿ ಯುಡಿಎಫ್‌ ಬಲಿಷ್ಠವಾಗಿ ಗೆದ್ದಿದೆ. ಹಿಂದೆ ಕಳೆದುಕೊಂಡಿದ್ದ ಪತ್ತನಂತಿಟ್ಟ ಮತ್ತು ಇಡುಕ್ಕಿ ಪುರಸಭೆಗಳನ್ನು ಮರಳಿ ಪಡೆದಿದೆ.

ಎಲ್‌ಡಿಎಫ್‌ ತನ್ನ ಸಾಂಪ್ರದಾಯಿಕ ಬಲಿಷ್ಠ ಕೇಂದ್ರಗಳ ಪೈಕಿ ಕೆಲವನ್ನು ಉಳಿಸಿಕೊಂಡಿದೆ. ತಿರುವನಂತಪುರಂನ ಕೆಲ ಭಾಗಗಳು, ಕೊಲ್ಲಂ ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಗೆಲುವು ದಾಖಲಿಸಿದೆ. ಆದರೆ, ಒಟ್ಟಾರೆಯಾಗಿ 2020ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದಿದೆ.

ಪುರಸಭೆಗಳಲ್ಲಿ ಎನ್‌ಡಿಎ ದೊಡ್ಡ ಮಟ್ಟದ ಗೆಲುವು ಪಡೆದಿಲ್ಲ. ಆದರೂ, ಕೆಲವೆಡೆ ಗಮನಾರ್ಹ ಪ್ರದರ್ಶನ ತೋರಿದೆ. ಇನ್ನೂ ಕೆಲವೆಡೆ ಪ್ರಬಲ ಪೈಪೋಟಿ ನೀಡಿದೆ. ಪಾಲಕ್ಕಾಡ್ ಮತ್ತು ತ್ರಿಪುಣಿತ್ತುರದಲ್ಲಿ ಎನ್‌ಡಿಎ ಗೆದ್ದಿದೆ. ತೊಡುಪುಝ ಮತ್ತು ಕಾಂಞಂಗಾಡ್‌ನಲ್ಲಿ ಪ್ರಬಲ ಪೈಪೋಟಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...