Homeಮುಖಪುಟಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ತಿರುವನಂತಪುರಂ ಮಹಾನಗರ, ವಕ್ಫ್‌ ವಿವಾದದ ಮುನಂಬಂ ಗೆದ್ದ ಬಿಜೆಪಿ

- Advertisement -
- Advertisement -

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯ ಸೂಚನೆ ನೀಡಿದೆ.

ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಹಾಗೂ ನಗರ ಮಹಾನಗರ ಪಾಲಿಕೆ, ಎಲ್ಲದರಲ್ಲೂ ಕಾಂಗ್ರೆಸ್-ಮುಸ್ಲಿಂ ಲೀಗ್ ನೇತೃತ್ವದ ಯುಡಿಎಫ್‌ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ. ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್‌) ಕೆಲವೆಡೆ ತನ್ನ ಸಾಂಪ್ರದಾಯಿಕ ಬಲಿಷ್ಠ ಕೋಟೆಗಳನ್ನೂ ಉಳಿಸಿಕೊಳ್ಳಲು ಹೆಣಗಾಡಿದೆ.

ಮುಂದಿನ ವರ್ಷ (2026) ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿ ಎಂದು ಪರಿಗಣಿಸಲಾಗಿದೆ. ಇಂದಿನ ಫಲಿತಾಂಶ ರಾಜಕೀಯ ಪಲ್ಲಟಕ್ಕೆ ಕಾರಣವಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದರ ಜೊತೆಗೆ ತಿರುವನಂತಪುರಂ ಮಹಾನಗರ ಪಾಲಿಕೆ, ವಕ್ಫ್‌ ಭೂಮಿ ವಿವಾದದ ಕೇಂದ್ರವಾಗಿರುವ ಮುನಂಬಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸಿರುವುದು, ಮುಂದಿನ ಚುನಾವಣೆಯಲ್ಲಿ ಎನ್‌ಡಿಎಯ ಸೀಮಿತ, ಆದರೆ ಗಮನಾರ್ಹ ವಿಸ್ತರಣೆಯನ್ನು ಒತ್ತಿ ಹೇಳುತ್ತಿದೆ.

ಕೇರಳದ 6 ಮಹಾನಗರ ಪಾಲಿಕೆಗಳು, 87 ಪುರಸಭೆಗಳು, 14 ಜಿಲ್ಲಾ ಪಂಚಾಯತ್‌ಗಳು, 152 ತಾಲೂಕು ಪಂಚಾಯತ್‌ಗಳು ಮತ್ತು 941 ಗ್ರಾಮ ಪಂಚಾಯತ್‌ಗಳಿಗೆ 2025ರ ಡಿಸೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟಗೊಂಡಿದೆ.

6 ಮಹಾನಗರ ಪಾಲಿಕೆಗಳಾದ ತಿರುವನಂತಪುರಂ, ಕೊಲ್ಲಂ, ಕೊಚ್ಚಿ, ತ್ರಿಶೂರ್, ಕಣ್ಣೂರು, ಕೋಝಿಕ್ಕೋಡ್ ಪೈಕಿ ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು ಈ ನಾಲ್ಕರಲ್ಲಿ ಯುಡಿಎಫ್‌ ಜಯಭೇರಿ ಸಾಧಿಸಿದೆ.

ಇದು ಗಮನಾರ್ಹ ಗೆಲುವು. ಏಕೆಂದರೆ, 2020ರಲ್ಲಿ ಎಲ್‌ಡಿಎಫ್‌ ಗೆದ್ದಿದ್ದ ಹಲವು ಮಹಾನಗರ ಪಾಲಿಕೆಗಳನ್ನು ಯುಡಿಎಫ್‌ ಮರಳಿ ಪಡೆದುಕೊಂಡಿದೆ. ವಿಶೇಷವಾಗಿ ಕಣ್ಣೂರು ಮತ್ತು ತ್ರಿಶೂರ್‌ ಪಾಲಿಕೆಗಳು ದೀರ್ಘಕಾಲದಿಂದ ಎಲ್‌ಡಿಎಫ್‌ನ ಬಲಿಷ್ಠ ಕೋಟೆಗಳಾಗಿದ್ದವು.

ಬಿಜೆಪಿ ನೇತೃತ್ವದ ಎನ್‌ಡಿಎ ಮೊದಲ ಬಾರಿಗೆ ತಿರುವನಂತಪುರಂ ಮಹಾನಗರ ಪಾಲಿಕೆಯನ್ನು ಗೆದ್ದುಕೊಂಡಿದೆ. ಇದು ಬಿಜೆಪಿಗೆ ಕೇರಳದ ನಗರ ರಾಜಕಾರಣದಲ್ಲಿ ಮಹತ್ವದ ಮುಂದಡಿಯಾಗಿದೆ.

ಎಲ್‌ಡಿಎಫ್‌ ಕೇವಲ ಒಂದು ಮಹಾನಗರ ಪಾಲಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೋಝಿಕ್ಕೋಡ್ ಪಾಲಿಕೆಯಲ್ಲಿ ಎಲ್‌ಡಿಎಫ್‌ ಗೆದ್ದಿದೆ. ಆದರೆ, ಅಲ್ಲಿಯೂ ಯುಡಿಎಫ್‌ ಮತ್ತು ಎನ್‌ಡಿಎ ಪ್ರಬಲ ಪೈಪೋಟಿ ಕೊಟ್ಟಿದೆ.

ಒಟ್ಟು 86 ಪುರಸಭೆಗಳ (2020ರಲ್ಲಿ 87 ಇದ್ದವು, ಒಂದು ಕಡಿಮೆಯಾಗಿದೆ) ಪೈಕಿ 54 ಪುರಸಭೆಗಳನ್ನು ಯುಡಿಎಫ್‌ ಗೆದ್ದುಕೊಂಡಿದೆ. ಇದು ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಯುಡಿಎಫ್‌ನ ಪ್ರಾಬಲ್ಯ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎರ್ನಾಕುಳಂ, ಆಲಪ್ಪುಝ, ಮಲಪ್ಪುರಂ, ಕೊಟ್ಟಾಯಂ, ಪಾಲಕ್ಕಾಡ್‌ ಪುರಸಭೆಗಳಲ್ಲಿ ಯುಡಿಎಫ್‌ ಬಲಿಷ್ಠವಾಗಿ ಗೆದ್ದಿದೆ. ಹಿಂದೆ ಕಳೆದುಕೊಂಡಿದ್ದ ಪತ್ತನಂತಿಟ್ಟ ಮತ್ತು ಇಡುಕ್ಕಿ ಪುರಸಭೆಗಳನ್ನು ಮರಳಿ ಪಡೆದಿದೆ.

ಎಲ್‌ಡಿಎಫ್‌ ತನ್ನ ಸಾಂಪ್ರದಾಯಿಕ ಬಲಿಷ್ಠ ಕೇಂದ್ರಗಳ ಪೈಕಿ ಕೆಲವನ್ನು ಉಳಿಸಿಕೊಂಡಿದೆ. ತಿರುವನಂತಪುರಂನ ಕೆಲ ಭಾಗಗಳು, ಕೊಲ್ಲಂ ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಗೆಲುವು ದಾಖಲಿಸಿದೆ. ಆದರೆ, ಒಟ್ಟಾರೆಯಾಗಿ 2020ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದಿದೆ.

ಪುರಸಭೆಗಳಲ್ಲಿ ಎನ್‌ಡಿಎ ದೊಡ್ಡ ಮಟ್ಟದ ಗೆಲುವು ಪಡೆದಿಲ್ಲ. ಆದರೂ, ಕೆಲವೆಡೆ ಗಮನಾರ್ಹ ಪ್ರದರ್ಶನ ತೋರಿದೆ. ಇನ್ನೂ ಕೆಲವೆಡೆ ಪ್ರಬಲ ಪೈಪೋಟಿ ನೀಡಿದೆ. ಪಾಲಕ್ಕಾಡ್ ಮತ್ತು ತ್ರಿಪುಣಿತ್ತುರದಲ್ಲಿ ಎನ್‌ಡಿಎ ಗೆದ್ದಿದೆ. ತೊಡುಪುಝ ಮತ್ತು ಕಾಂಞಂಗಾಡ್‌ನಲ್ಲಿ ಪ್ರಬಲ ಪೈಪೋಟಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....