Homeಮುಖಪುಟಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ತಿರುವನಂತಪುರಂ ಮಹಾನಗರ, ವಕ್ಫ್‌ ವಿವಾದದ ಮುನಂಬಂ ಗೆದ್ದ ಬಿಜೆಪಿ

- Advertisement -
- Advertisement -

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯ ಸೂಚನೆ ನೀಡಿದೆ.

ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಹಾಗೂ ನಗರ ಮಹಾನಗರ ಪಾಲಿಕೆ, ಎಲ್ಲದರಲ್ಲೂ ಕಾಂಗ್ರೆಸ್-ಮುಸ್ಲಿಂ ಲೀಗ್ ನೇತೃತ್ವದ ಯುಡಿಎಫ್‌ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ. ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್‌) ಕೆಲವೆಡೆ ತನ್ನ ಸಾಂಪ್ರದಾಯಿಕ ಬಲಿಷ್ಠ ಕೋಟೆಗಳನ್ನೂ ಉಳಿಸಿಕೊಳ್ಳಲು ಹೆಣಗಾಡಿದೆ.

ಮುಂದಿನ ವರ್ಷ (2026) ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿ ಎಂದು ಪರಿಗಣಿಸಲಾಗಿದೆ. ಇಂದಿನ ಫಲಿತಾಂಶ ರಾಜಕೀಯ ಪಲ್ಲಟಕ್ಕೆ ಕಾರಣವಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದರ ಜೊತೆಗೆ ತಿರುವನಂತಪುರಂ ಮಹಾನಗರ ಪಾಲಿಕೆ, ವಕ್ಫ್‌ ಭೂಮಿ ವಿವಾದದ ಕೇಂದ್ರವಾಗಿರುವ ಮುನಂಬಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸಿರುವುದು, ಮುಂದಿನ ಚುನಾವಣೆಯಲ್ಲಿ ಎನ್‌ಡಿಎಯ ಸೀಮಿತ, ಆದರೆ ಗಮನಾರ್ಹ ವಿಸ್ತರಣೆಯನ್ನು ಒತ್ತಿ ಹೇಳುತ್ತಿದೆ.

ಕೇರಳದ 6 ಮಹಾನಗರ ಪಾಲಿಕೆಗಳು, 87 ಪುರಸಭೆಗಳು, 14 ಜಿಲ್ಲಾ ಪಂಚಾಯತ್‌ಗಳು, 152 ತಾಲೂಕು ಪಂಚಾಯತ್‌ಗಳು ಮತ್ತು 941 ಗ್ರಾಮ ಪಂಚಾಯತ್‌ಗಳಿಗೆ 2025ರ ಡಿಸೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟಗೊಂಡಿದೆ.

6 ಮಹಾನಗರ ಪಾಲಿಕೆಗಳಾದ ತಿರುವನಂತಪುರಂ, ಕೊಲ್ಲಂ, ಕೊಚ್ಚಿ, ತ್ರಿಶೂರ್, ಕಣ್ಣೂರು, ಕೋಝಿಕ್ಕೋಡ್ ಪೈಕಿ ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು ಈ ನಾಲ್ಕರಲ್ಲಿ ಯುಡಿಎಫ್‌ ಜಯಭೇರಿ ಸಾಧಿಸಿದೆ.

ಇದು ಗಮನಾರ್ಹ ಗೆಲುವು. ಏಕೆಂದರೆ, 2020ರಲ್ಲಿ ಎಲ್‌ಡಿಎಫ್‌ ಗೆದ್ದಿದ್ದ ಹಲವು ಮಹಾನಗರ ಪಾಲಿಕೆಗಳನ್ನು ಯುಡಿಎಫ್‌ ಮರಳಿ ಪಡೆದುಕೊಂಡಿದೆ. ವಿಶೇಷವಾಗಿ ಕಣ್ಣೂರು ಮತ್ತು ತ್ರಿಶೂರ್‌ ಪಾಲಿಕೆಗಳು ದೀರ್ಘಕಾಲದಿಂದ ಎಲ್‌ಡಿಎಫ್‌ನ ಬಲಿಷ್ಠ ಕೋಟೆಗಳಾಗಿದ್ದವು.

ಬಿಜೆಪಿ ನೇತೃತ್ವದ ಎನ್‌ಡಿಎ ಮೊದಲ ಬಾರಿಗೆ ತಿರುವನಂತಪುರಂ ಮಹಾನಗರ ಪಾಲಿಕೆಯನ್ನು ಗೆದ್ದುಕೊಂಡಿದೆ. ಇದು ಬಿಜೆಪಿಗೆ ಕೇರಳದ ನಗರ ರಾಜಕಾರಣದಲ್ಲಿ ಮಹತ್ವದ ಮುಂದಡಿಯಾಗಿದೆ.

ಎಲ್‌ಡಿಎಫ್‌ ಕೇವಲ ಒಂದು ಮಹಾನಗರ ಪಾಲಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೋಝಿಕ್ಕೋಡ್ ಪಾಲಿಕೆಯಲ್ಲಿ ಎಲ್‌ಡಿಎಫ್‌ ಗೆದ್ದಿದೆ. ಆದರೆ, ಅಲ್ಲಿಯೂ ಯುಡಿಎಫ್‌ ಮತ್ತು ಎನ್‌ಡಿಎ ಪ್ರಬಲ ಪೈಪೋಟಿ ಕೊಟ್ಟಿದೆ.

ಒಟ್ಟು 86 ಪುರಸಭೆಗಳ (2020ರಲ್ಲಿ 87 ಇದ್ದವು, ಒಂದು ಕಡಿಮೆಯಾಗಿದೆ) ಪೈಕಿ 54 ಪುರಸಭೆಗಳನ್ನು ಯುಡಿಎಫ್‌ ಗೆದ್ದುಕೊಂಡಿದೆ. ಇದು ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಯುಡಿಎಫ್‌ನ ಪ್ರಾಬಲ್ಯ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎರ್ನಾಕುಳಂ, ಆಲಪ್ಪುಝ, ಮಲಪ್ಪುರಂ, ಕೊಟ್ಟಾಯಂ, ಪಾಲಕ್ಕಾಡ್‌ ಪುರಸಭೆಗಳಲ್ಲಿ ಯುಡಿಎಫ್‌ ಬಲಿಷ್ಠವಾಗಿ ಗೆದ್ದಿದೆ. ಹಿಂದೆ ಕಳೆದುಕೊಂಡಿದ್ದ ಪತ್ತನಂತಿಟ್ಟ ಮತ್ತು ಇಡುಕ್ಕಿ ಪುರಸಭೆಗಳನ್ನು ಮರಳಿ ಪಡೆದಿದೆ.

ಎಲ್‌ಡಿಎಫ್‌ ತನ್ನ ಸಾಂಪ್ರದಾಯಿಕ ಬಲಿಷ್ಠ ಕೇಂದ್ರಗಳ ಪೈಕಿ ಕೆಲವನ್ನು ಉಳಿಸಿಕೊಂಡಿದೆ. ತಿರುವನಂತಪುರಂನ ಕೆಲ ಭಾಗಗಳು, ಕೊಲ್ಲಂ ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಗೆಲುವು ದಾಖಲಿಸಿದೆ. ಆದರೆ, ಒಟ್ಟಾರೆಯಾಗಿ 2020ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದಿದೆ.

ಪುರಸಭೆಗಳಲ್ಲಿ ಎನ್‌ಡಿಎ ದೊಡ್ಡ ಮಟ್ಟದ ಗೆಲುವು ಪಡೆದಿಲ್ಲ. ಆದರೂ, ಕೆಲವೆಡೆ ಗಮನಾರ್ಹ ಪ್ರದರ್ಶನ ತೋರಿದೆ. ಇನ್ನೂ ಕೆಲವೆಡೆ ಪ್ರಬಲ ಪೈಪೋಟಿ ನೀಡಿದೆ. ಪಾಲಕ್ಕಾಡ್ ಮತ್ತು ತ್ರಿಪುಣಿತ್ತುರದಲ್ಲಿ ಎನ್‌ಡಿಎ ಗೆದ್ದಿದೆ. ತೊಡುಪುಝ ಮತ್ತು ಕಾಂಞಂಗಾಡ್‌ನಲ್ಲಿ ಪ್ರಬಲ ಪೈಪೋಟಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...