Homeಮುಖಪುಟಅಯೋಧ್ಯೆ ಸ್ವಾಮೀಜಿಯ ಜೀವ ಬೆದರಿಕೆಗೆ ನಾನು ಹೆದರಲ್ಲ: ಉದಯ್‌ ನಿಧಿ ಸ್ಟಾಲಿನ್‌

ಅಯೋಧ್ಯೆ ಸ್ವಾಮೀಜಿಯ ಜೀವ ಬೆದರಿಕೆಗೆ ನಾನು ಹೆದರಲ್ಲ: ಉದಯ್‌ ನಿಧಿ ಸ್ಟಾಲಿನ್‌

- Advertisement -
- Advertisement -

ಸನಾತನ ಧರ್ಮದ ಕುರಿತಾದ ಹೇಳಿಕೆಗೆ ಅಯೋಧ್ಯೆ ಸ್ವಾಮೀಜಿ ಜೀವ ಬೆದರಿಕೆ ಹಾಕಿದ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡಿನ ಕ್ರೀಡಾ ಸಚಿವ ಮತ್ತು ಸಿಎಂ ಸ್ಟಾಲಿನ್‌ ಪುತ್ರ ಉದಯ್‌ ನಿಧಿ ಸ್ಟಾಲಿನ್‌, ತಮಿಳುನಾಡಿಗಾಗಿ ತನ್ನ ಪ್ರಾಣವನ್ನು ಪಣ ಇಟ್ಟಿರುವ  ವ್ಯಕ್ತಿಯ ಮೊಮ್ಮಗ ನಾನು ಮತ್ತು ಈ ಬೆದರಿಕೆಗಳಿಗೆ ನಾನು ತಲೆ ಕೆಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ವಿವಾದಾತ್ಮಕ ಸ್ವಾಮೀಜಿ ಪರಮಹಂಸ ಆಚಾರ್ಯ, ಉದಯ್‌ ನಿಧಿ ಸ್ಟಾಲಿನ್‌ ಸನಾತನ ಧರ್ಮದ ಕುರಿತು ಹೇಳಿಕೆ ಕೊಟ್ಟಿದ್ದಕ್ಕೆ ಅವರ ತಲೆಗೆ 10 ಕೋಟಿ ಬಹುಮಾನವನ್ನು ಘೋಷಿಸಿದ್ದರು. ಸ್ಟಾಲಿನ್ ಶಿರಚ್ಛೇದ ಮಾಡಿ ತಲೆ ತಂದು ಕೊಡುವವರಿಗೆ  10 ಕೋಟಿ ಬಹುಮಾನ ನೀಡುತ್ತೇನೆ. ಯಾರೂ ಸ್ಟಾಲಿನ್‌ನನ್ನು ಕೊಲ್ಲುವ ಧೈರ್ಯ ಮಾಡದಿದ್ದರೆ ನಾನೇ ಆತನನ್ನು ಪತ್ತೆ ಮಾಡಿ ಹತ್ಯೆ ಮಾಡುತ್ತೇನೆ ಎಂದು ತಪಸ್ವಿ ಚಾವ್ನಿ ದೇವಸ್ಥಾನದ ಪ್ರಧಾನ ಅರ್ಚಕ ಪರಮಹಂಸ ಆಚಾರ್ಯ ಹೇಳಿದ್ದರು.

ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ  ಉದಯನಿಧಿ ಸ್ಟಾಲಿನ್, ಉತ್ತರ ಪ್ರದೇಶದಲ್ಲಿ ಪರಮಹಂಸ ಆಚಾರ್ಯ ಅವರು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕಾಗಿ ನನ್ನ ತಲೆ ಬೋಳಿಸಲು 10 ಕೋಟಿ ನೀಡುವುದಾಗಿ ಘೋಷಿಸಿದ್ದಾರೆ. ನನ್ನ ತಲೆ ಬಾಚಲು 10 ರೂಪಾಯಿ ಬಾಚಣಿಗೆ ಸಾಕು ಎಂದು ಹೇಳಿದ್ದಾರೆ.

ಬೆದರಿಕೆಗಳು ನಮಗೇನು ಹೊಸತಲ್ಲ, ನಾವು ಇದಕ್ಕೆಲ್ಲ ಬೆದರುವವರಲ್ಲ, ನಾನು ತಮಿಳುನಾಡಿಗಾಗಿ ತನ್ನ ತಲೆಯನ್ನು ರೈಲ್ವೇ ಟ್ರಾಕ್‌ಗೆ ಇಟ್ಟ ಕಲಾವಿದನ ಮೊಮ್ಮಗ. ಕರುಣಾನಿಧಿ ತಮಿಳುನಾಡಿನಲ್ಲಿ ಐದು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ನಡೆಸಿದ್ದು, ಪೆರಿಯಾರ್ ಅವರು ಆರಂಭಿಸಿದ ಬ್ರಾಹ್ಮಣ ವಿರೋಧಿ ದ್ರಾವಿಡ ಚಳವಳಿಯನ್ನು ಮುನ್ನಡೆಸಿದ್ದರು ಎಂದು ಹೇಳಿದ್ದಾರೆ.

1953ರಲ್ಲಿ ತಮಿಳುನಾಡಿನ ಗ್ರಾಮವೊಂದಕ್ಕೆ ದಾಲ್ಮಿಯಾಸ್ ಕುಟುಂಬದ ಹೆಸರನ್ನು ಮರುನಾಮಕರಣ ಮಾಡುವುದನ್ನು ವಿರೋಧಿಸಿ ಕರುಣಾನಿಧಿ ನೇತೃತ್ವದಲ್ಲಿ ಡಿಎಂಕೆ ಕಾರ್ಯಕರ್ತರು ರೈಲ್ವೇ ಹಳಿಗಳ ಮೇಲೆ ಮಲಗಿ ಪ್ರತಿಭಟನೆಯನ್ನು ನಡೆಸಿದ್ದರು.

ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್  ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ ಎಂದು  ಉದಯನಿಧಿ ಸ್ಟಾಲಿನ್  ಹೇಳಿದ್ದರು.

ಇದನ್ನು ಓದಿ:‘ಉದಯನಿಧಿ ಸ್ಟಾಲಿನ್ ತಲೆ ಕಡಿದವರಿಗೆ 10 ಕೋಟಿ’: ಅಯೋಧ್ಯೆಯ ಸ್ವಾಮೀಜಿಯಿಂದ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...