Homeಕರ್ನಾಟಕಉಡುಪಿ: ತಾಯಿ-ಮಕ್ಕಳ ಕೊಲೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ

ಉಡುಪಿ: ತಾಯಿ-ಮಕ್ಕಳ ಕೊಲೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ

- Advertisement -
- Advertisement -

ಉಡುಪಿ ಜಿಲ್ಲೆಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ರಾಜ್ಯದಲ್ಲೇ ಭಾರೀ ಸುದ್ದಿಯಾಗಿದ್ದ ಈ ಪ್ರಕರಣದಲ್ಲಿ ಕೃತ್ಯ ನಡೆದ ಒಂದೇ ತಿಂಗಳಲ್ಲಿ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.

ಸಧ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಪರ ನ್ಯಾಯವಾದಿ ಕೆ.ಎಸ್.ಎನ್.ರಾಜೇಶ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶ ದಿನೇಶ್ ಹೆಗ್ಡೆ ಅವರು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದ್ದಾರೆ. ಈ ಕುರಿತು ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಕಾಲಾವಕಾಶವನ್ನು ನೀಡಿದೆ.

ನ.12ರಂದು ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್‌ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯದಲ್ಲಿ ಭಾರೀ ತಲ್ಲಣಗೊಳಿಸಿತ್ತು. ಕೃತ್ಯದ ಬಳಿಕ ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ನ.14ರಂದು ಮೊಬೈಲ್ ಟವರ್ ಆಧರಿಸಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಡಿ.18ರವರೆಗೆ ವಿಸ್ತರಿಸಲಾಗಿದೆ.

ಪ್ರವೀಣ್ ಆರಂಭದಲ್ಲಿ ಅಯ್ನಾಝ್ ಗೆ ಮೊದಲು ದಾಳಿ ಮಾಡಿ, ಬಳಿಕ ಹಸೀನಾ, ಅಫ್ನಾನ್, ಆಸಿಂ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬಳಿಕ ಬೇರೆ ಬೇರೆ ವಾಹನದಲ್ಲಿ ಪರಾರಿಯಾಗಿದ್ದಾನೆ. ಆರೋಪಿ ಕೈಯ ಗಾಯಕ್ಕೆ ಚಿಕಿತ್ಸೆ ಪಡೆದು ಚಾಕುವನ್ನು ಮನೆಯಲ್ಲಿ ಇಟ್ಟು ಹೆಂಡತಿಯ ತವರು ಮನೆಗೆ ಹೋಗಿದ್ದಾನೆ.

ಆರೋಪಿ ಪ್ರವೀಣ್‌ ಹಾಗೂ ಅಯ್ನಾಝ್ ಏರ್‌ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಪ್ರವೀಣ್‌ ಅಯ್ನಾಝ್ ಮೇಲೆ ದ್ವೇಷವನ್ನು ಇಟ್ಟುಕೊಂಡು ಕೊಲೆಯನ್ನು ಮಾಡಿದ್ದಾನೆ ಎನ್ನುವುದು ತನಿಖೆಯ ವೇಳೆ ತಿಳಿದು ಬಂದಿತ್ತು.

ಘಟನೆ ಬೆನ್ನಲ್ಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಆರೋಪಿ ಪ್ರವೀಣ್ ಚೌಗಲೆಯನ್ನು ಅಮಾನತುಗೊಳಿಸಿ ಕೃತ್ಯದ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿತ್ತು.

ಭೀಕರ ಹತ್ಯಾಕಾಂಡದ ಕುರಿತು ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹಾಗೂ ಮುಸ್ಲಿಂ ಜಸ್ಟೀಸ್ ಫೋರಂ ನೇತೃತ್ವದ ನಿಯೋಗ ಈ ಮೊದಲು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇತ್ತೀಚೆಗೆ ಸಂತ್ರಸ್ತ ಕುಟುಂಬದ ಯಜಮಾನ ನೂರ್‌ ಮಹಮ್ಮದ್ ಅವರು ಕೂಡ ಸಿಎಂ ಸಿದ್ದರಾಮಯ್ಯ ಅವರಿಗೆ ಭೇಟಿ ಮಾಡಿ ಪ್ರಕರಣದಲ್ಲಿ ತ್ವರಿತ ನ್ಯಾಯಕ್ಕೆ ಆಗ್ರಹಿಸಿದ್ದರು.

ಇದನ್ನು ಓದಿ: ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. If he gets bail there is nothing to be surprised, these things are common nowadays. Money and influence can do any thing. That’s why crime rate is increasing day by day…it seems….
    ,

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...