Homeಕರ್ನಾಟಕಉಡುಪಿಯಲ್ಲಿ ತಾಯಿ ಮಕ್ಕಳ ಹತ್ಯೆ ಪ್ರಕರಣ; ಆರೋಪಿ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ; ಎಸ್ಪಿ

ಉಡುಪಿಯಲ್ಲಿ ತಾಯಿ ಮಕ್ಕಳ ಹತ್ಯೆ ಪ್ರಕರಣ; ಆರೋಪಿ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ; ಎಸ್ಪಿ

- Advertisement -
- Advertisement -

ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ಪಿ ಮಹತ್ವದ ಮಾಹಿತಿಯನ್ನು ನೀಡಿದ್ದು, ಆರೋಪಿ ಕೃತ್ಯವನ್ನು ಒಪ್ಪಿಕೊಂಡಿರುವ ಬಗ್ಗೆ ತಿಳಿಸಿದ್ದಾರೆ.

ಉಡುಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ  ಡಾ.ಕೆ.ಅರುಣ್, ಕೊಲೆ ಮಾಡಿರುವುದಾಗಿ ಪ್ರವೀಣ್ ಅರುಣ್ ಚೌಗಲೆ(39) ಒಪ್ಪಿಕೊಂಡಿದ್ದಾನೆ. ರಾಯಭಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈತನಿಗೆ ಬಂಧಿಸಲಾಗಿದೆ. ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ಈತ ಮಂಗಳೂರು ಏರ್ ಇಂಡಿಯಾದಲ್ಲಿ‌ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ. ಈ ಬಗ್ಗೆ ಮತ್ತೆ ವಾಪಾಸ್ಸು ಮಾಹಿತಿ ಕಲೆ ಹಾಕಲಾಗುವುದು. ಗನಸಖಿ ಐನಾಝ್ ಮೇಲಿನ ದ್ವೇಷದಲ್ಲಿ ಈ ಕೃತ್ಯ ನಡೆಸಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ವಿಚಾರಣೆ ವೇಳೆ ಆರೋಪಿ ಕೊಲೆಗೆ 3 ಉದ್ದೇಶಗಳನ್ನು ತಿಳಿಸಿದ್ದು, ಅದನ್ನು ಪರಿಶೀಲನೆ ನಡೆಸಿ ದೃಢಪಡಿಸಲಾಗುವುದು. ಆರೋಪಿ ವಿವಾಹಿತನಾಗಿದ್ದಾನೆ ಮತ್ತು ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.

ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್‌ನಲ್ಲಿ ಮನೆಯೊಂದಕ್ಕೆ ನುಗ್ಗಿ ದುಷ್ಕರ್ಮಿಯೋರ್ವ ತಾಯಿ ಹಸೀನಾ ಹಾಗೂ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್‌ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಿದ್ದಾನೆ. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಕುರಿತು ತನಿಖೆಗೆ ಪೊಲೀಸರ 5 ತಂಡಗಳನ್ನು ರಚಿಸಲಾಗಿತ್ತು.

ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ನನ್ನು ನಿನ್ನೆ ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಉಡುಪಿ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಯ ಆರೋಗ್ಯ ತಪಾಸಣೆ ನಡೆಸಿ ಬಿಗಿ ಪೊಲೀಸ್ ಬಂದೋ ಬಸ್ತ್‌ನಲ್ಲಿ ಉಡುಪಿ ನ್ಯಾಯಾಲಯಕ್ಕೆ ಕರೆ ತರಲಾಯಿತು. ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಉಡುಪಿ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿದೆ.

ಇದನ್ನು ಓದಿ: ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...