Homeಮುಖಪುಟಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ‌ ಮರಳು ಮಾಲೀಕರು ರಾಂಜಿ ನಾಯಕ್‌ಗೆ ಪಾರ್ಟಿ, ಉಡುಗೊರೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ‌ ಕ್ರಶರ್ ಅವ್ಯವಹಾರ  ನಡೆಯುತ್ತಿವೆ ಎಂಬ ಹಲವು ದೂರುಗಳು ದಾಖಲಾಗಿವೆ. ಉಡುಪಿಗೆ ಜೀವಜಲ ಒದಗಿಸುವ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಮರಳು ಕಳ್ಳಸಾಗಾಣಿಕೆಯಾಗಿದೆ ಎಂದು ಲೋಕಾಯುಕ್ತಾಗೆ ದೂರು ನೀಡಲಾಗಿತ್ತು. ಅವ್ಯವಹಾರದಲ್ಲಿ ಸ್ಥಳೀಯ ಶಾಸಕ ರಘುಪತಿ ಭಟ್ ಹೆಸರು ಸಹ ಕೇಳಿಬಂದಿತ್ತು. ಆದರೆ ತನಿಖೆ ಮಾತ್ರ ಪೂರ್ಣಗೊಳ್ಳಲಿಲ್ಲ.

ಆ ಮರಳು ಕದ್ದು ಸಾಗಿಸಲು ನೆರವಾಗಿದ್ದರು ಎಂಬ ಆರೋಪ ಹೊತ್ತಿರುವ ಹಿರಿಯ ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯಕ್‌ ಇತ್ತೀಚೆಗೆ ಉಡುಪಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ಕೆಲ ಕ್ರಶರ್ ಮಾಲೀಕರು ಮತ್ತು ಮರಳು ವ್ಯಾಪಾರಿಗಳು ಅಧಿಕಾರವಾಧಿಯಲ್ಲಿ ಸಹಾಯ ಮಾಡಿದ ಅವರಿಗೆ ಬೀಳ್ಕೊಡುಗೆ ನೆಪದಲ್ಲಿ ಅದ್ದೂರಿ ಪಾರ್ಟಿ ನಡೆಸಿ, ಬಾಡೂಟ ಹಾಕಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕಾರನ್ನು  ಉಡುಗೊರೆಯಾಗಿ ನೀಡಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ!

ಸಮಾರಂಭದಲ್ಲಿ ಸಿಬ್ಬಂದಿ ಭಾಗವಹಿಸಿರುವುದು.

ಅಕ್ಟೋಬರ್ 5 ರಂದು ನಗರದ ಓಶನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಈ ಭೋಜನ ಕೂಟದಲ್ಲಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸರಕಾರಿ ಜೀಪಿನಲ್ಲೇ ಬಂದು ಕ್ರಶರ್ ಮಾಲೀಕರು ಏರ್ಪಡಿಸಿದ ಪಾರ್ಟಿಯಲ್ಲಿ ಭರ್ಜರಿಯಾಗಿ ಉಂಡು ಹೋಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕ್ರಶರ್ ಮಾಲೀಕರು ಹಾಗೂ ಕೆಲವು ಮರಳು ಮಾರಾಟಗಾರರು ಭಾಗಿಯಾಗಿದ್ದರು ಎನ್ನಲಾಗಿದೆ.

ಉಡುಪಿಯಲ್ಲಿ ರಾಂಜಿ ನಾಯಕ್ ಹಿರಿಯ ಭೂ ವಿಜ್ಞಾನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆಗೆ ಸ್ವತಃ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲದೇ ಕಾನೂನು‌ ಉಲ್ಲಂಘಿಸಿ ನಡೆಯುತ್ತಿದ್ದ ಕ್ರಶರ್ ಗಳಿಗೆ ರತ್ನ ಗಂಬಳಿ ಹಾಕಿ ಕೊಟ್ಟಿದ್ದರು. ಡೀಮ್ಡ್ ಫಾರೆಸ್ಟ್ ನಲ್ಲಿ ಸ್ಥಗಿತಗೊಂಡಿದ್ದ ಅಕ್ರಮ ಕ್ರಶರ್ ಗಳಿಗೆ ಲಕ್ಷಾಂತರ ರೂಪಾಯಿ ಲಂಚ ಪಡೆದು ಮರು ಪ್ರಾರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಲೋಕಾಯುಕ್ತಾಕ್ಕೆ ದೂರು ಹೋದಾಗ ದಾಳಿ ನಡೆದು ಹಲವೆಡೆ ಅಕ್ರಮ ಮರಳು ದಾಸ್ತಾನು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ರಾಂಜಿ ನಾಯಕ್ ಮೇಲೆ ದೂರು ಸಹ ದಾಖಲಾಗಿದೆ.

ಭೂ ವಿಜ್ಞಾನ ಅಧಿಕಾರಿಗೆ ಕ್ರಶರ್ ಮಾಲೀಕರು ಭರ್ಜರಿ ಪಾರ್ಟಿ ಕೊಟ್ಟಿದ್ದೇಕೆ?

ಕ್ರಶರ್ ಮಾಲೀಕರು, ಮರಳು ಮಾರಾಟಗಾರರು ಉಡುಪಿ ಜಿಲ್ಲೆಯ ಭೂ ವಿಜ್ಞಾನ ಅಧಿಕಾರಿಗೆ ಪಾರ್ಟಿ ನೀಡಿದ್ದಾರೆ. ಸರ್ಕಾರಿ ವಾಹನದಲ್ಲಿಯೇ ಪಾರ್ಟಿಯಲ್ಲಿ ಭಾವಹಿಸಿರುವ ವಿಡಿಯೋ

Posted by Naanu Gauri on Friday, October 9, 2020

ಇಷ್ಟೆಲ್ಲ ಇರುವಾಗ ಕ್ರಶರ್ ಮಾಲೀಕರು ಆಯೋಜಿಸುವ ಪಾರ್ಟಿಯಲ್ಲಿ ಇವರು ರಾಜಾರೋಷವಾಗಿ ಭಾಗವಹಿಸಿ, ಅವರಿಂದ ಹಾರ, ಶಾಲು ಹಾಕಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ ಅಕ್ರಮ‌ ಮರಳು ದಂಧೆಕೋರರು ರಾಂಜಿ ನಾಯಕ್ ಗೆ ಐಶರಾಮಿ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ನೀಡಿ ಲಕ್ಷಾಂತರ ಮೌಲ್ಯದ ಉಡುಗೊರೆಗಳನ್ನ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಸದರಿ ಅಧಿಕಾರಿಯ ಮೇಲೆ ಅಕ್ರಮ ಗಣಿಗಾರಿಕೆ, ಕ್ರಶರ್‌ಗೆ ಅನುಮತಿ ನೀಡಿದ ಆರೋಪದಲ್ಲಿ ಭ್ರಷ್ಟಚಾರ ನಿಗ್ರಹ ದಳದಿಂದ ತನಿಖೆ ನಡೆಯುತ್ತಿದೆ. ಸರಕಾರಿ ಅಧಿಕಾರಿಗಳು ಅಕ್ರಮ ದಂಧೆಕೋರರ ಜೊತೆ ಬಹಿರಂಗವಾಗಿ ಪಾರ್ಟಿಯಲ್ಲಿ ಭಾಗವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಆ ಉದ್ಯಮಿಗಳ ಲೈಸನ್ಸ್ ಮರುಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿ ದೂರನ್ನು ನೀಡಿದ್ದಾರೆ. ನಾಡಿನ ಸಂಪತ್ತು ಲೂಟಿಯಾಗಿರುವ ಈ ಪ್ರಕರಣದಲ್ಲಿ ಈಗಲಾದರೂ ಸಮರ್ಪಕ ತನಿಖೆ ನಡೆಯುವುದೇ ಎಂದು ಕಾದು ನೋಡಬೇಕಿದೆ.

  • ಶುದ್ದೋಧನ

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...