Homeಮುಖಪುಟಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ‌ ಮರಳು ಮಾಲೀಕರು ರಾಂಜಿ ನಾಯಕ್‌ಗೆ ಪಾರ್ಟಿ, ಉಡುಗೊರೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ‌ ಕ್ರಶರ್ ಅವ್ಯವಹಾರ  ನಡೆಯುತ್ತಿವೆ ಎಂಬ ಹಲವು ದೂರುಗಳು ದಾಖಲಾಗಿವೆ. ಉಡುಪಿಗೆ ಜೀವಜಲ ಒದಗಿಸುವ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಮರಳು ಕಳ್ಳಸಾಗಾಣಿಕೆಯಾಗಿದೆ ಎಂದು ಲೋಕಾಯುಕ್ತಾಗೆ ದೂರು ನೀಡಲಾಗಿತ್ತು. ಅವ್ಯವಹಾರದಲ್ಲಿ ಸ್ಥಳೀಯ ಶಾಸಕ ರಘುಪತಿ ಭಟ್ ಹೆಸರು ಸಹ ಕೇಳಿಬಂದಿತ್ತು. ಆದರೆ ತನಿಖೆ ಮಾತ್ರ ಪೂರ್ಣಗೊಳ್ಳಲಿಲ್ಲ.

ಆ ಮರಳು ಕದ್ದು ಸಾಗಿಸಲು ನೆರವಾಗಿದ್ದರು ಎಂಬ ಆರೋಪ ಹೊತ್ತಿರುವ ಹಿರಿಯ ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯಕ್‌ ಇತ್ತೀಚೆಗೆ ಉಡುಪಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ಕೆಲ ಕ್ರಶರ್ ಮಾಲೀಕರು ಮತ್ತು ಮರಳು ವ್ಯಾಪಾರಿಗಳು ಅಧಿಕಾರವಾಧಿಯಲ್ಲಿ ಸಹಾಯ ಮಾಡಿದ ಅವರಿಗೆ ಬೀಳ್ಕೊಡುಗೆ ನೆಪದಲ್ಲಿ ಅದ್ದೂರಿ ಪಾರ್ಟಿ ನಡೆಸಿ, ಬಾಡೂಟ ಹಾಕಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕಾರನ್ನು  ಉಡುಗೊರೆಯಾಗಿ ನೀಡಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ!

ಸಮಾರಂಭದಲ್ಲಿ ಸಿಬ್ಬಂದಿ ಭಾಗವಹಿಸಿರುವುದು.

ಅಕ್ಟೋಬರ್ 5 ರಂದು ನಗರದ ಓಶನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಈ ಭೋಜನ ಕೂಟದಲ್ಲಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸರಕಾರಿ ಜೀಪಿನಲ್ಲೇ ಬಂದು ಕ್ರಶರ್ ಮಾಲೀಕರು ಏರ್ಪಡಿಸಿದ ಪಾರ್ಟಿಯಲ್ಲಿ ಭರ್ಜರಿಯಾಗಿ ಉಂಡು ಹೋಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕ್ರಶರ್ ಮಾಲೀಕರು ಹಾಗೂ ಕೆಲವು ಮರಳು ಮಾರಾಟಗಾರರು ಭಾಗಿಯಾಗಿದ್ದರು ಎನ್ನಲಾಗಿದೆ.

ಉಡುಪಿಯಲ್ಲಿ ರಾಂಜಿ ನಾಯಕ್ ಹಿರಿಯ ಭೂ ವಿಜ್ಞಾನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆಗೆ ಸ್ವತಃ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲದೇ ಕಾನೂನು‌ ಉಲ್ಲಂಘಿಸಿ ನಡೆಯುತ್ತಿದ್ದ ಕ್ರಶರ್ ಗಳಿಗೆ ರತ್ನ ಗಂಬಳಿ ಹಾಕಿ ಕೊಟ್ಟಿದ್ದರು. ಡೀಮ್ಡ್ ಫಾರೆಸ್ಟ್ ನಲ್ಲಿ ಸ್ಥಗಿತಗೊಂಡಿದ್ದ ಅಕ್ರಮ ಕ್ರಶರ್ ಗಳಿಗೆ ಲಕ್ಷಾಂತರ ರೂಪಾಯಿ ಲಂಚ ಪಡೆದು ಮರು ಪ್ರಾರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಲೋಕಾಯುಕ್ತಾಕ್ಕೆ ದೂರು ಹೋದಾಗ ದಾಳಿ ನಡೆದು ಹಲವೆಡೆ ಅಕ್ರಮ ಮರಳು ದಾಸ್ತಾನು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ರಾಂಜಿ ನಾಯಕ್ ಮೇಲೆ ದೂರು ಸಹ ದಾಖಲಾಗಿದೆ.

ಭೂ ವಿಜ್ಞಾನ ಅಧಿಕಾರಿಗೆ ಕ್ರಶರ್ ಮಾಲೀಕರು ಭರ್ಜರಿ ಪಾರ್ಟಿ ಕೊಟ್ಟಿದ್ದೇಕೆ?

ಕ್ರಶರ್ ಮಾಲೀಕರು, ಮರಳು ಮಾರಾಟಗಾರರು ಉಡುಪಿ ಜಿಲ್ಲೆಯ ಭೂ ವಿಜ್ಞಾನ ಅಧಿಕಾರಿಗೆ ಪಾರ್ಟಿ ನೀಡಿದ್ದಾರೆ. ಸರ್ಕಾರಿ ವಾಹನದಲ್ಲಿಯೇ ಪಾರ್ಟಿಯಲ್ಲಿ ಭಾವಹಿಸಿರುವ ವಿಡಿಯೋ

Posted by Naanu Gauri on Friday, October 9, 2020

ಇಷ್ಟೆಲ್ಲ ಇರುವಾಗ ಕ್ರಶರ್ ಮಾಲೀಕರು ಆಯೋಜಿಸುವ ಪಾರ್ಟಿಯಲ್ಲಿ ಇವರು ರಾಜಾರೋಷವಾಗಿ ಭಾಗವಹಿಸಿ, ಅವರಿಂದ ಹಾರ, ಶಾಲು ಹಾಕಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ ಅಕ್ರಮ‌ ಮರಳು ದಂಧೆಕೋರರು ರಾಂಜಿ ನಾಯಕ್ ಗೆ ಐಶರಾಮಿ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ನೀಡಿ ಲಕ್ಷಾಂತರ ಮೌಲ್ಯದ ಉಡುಗೊರೆಗಳನ್ನ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಸದರಿ ಅಧಿಕಾರಿಯ ಮೇಲೆ ಅಕ್ರಮ ಗಣಿಗಾರಿಕೆ, ಕ್ರಶರ್‌ಗೆ ಅನುಮತಿ ನೀಡಿದ ಆರೋಪದಲ್ಲಿ ಭ್ರಷ್ಟಚಾರ ನಿಗ್ರಹ ದಳದಿಂದ ತನಿಖೆ ನಡೆಯುತ್ತಿದೆ. ಸರಕಾರಿ ಅಧಿಕಾರಿಗಳು ಅಕ್ರಮ ದಂಧೆಕೋರರ ಜೊತೆ ಬಹಿರಂಗವಾಗಿ ಪಾರ್ಟಿಯಲ್ಲಿ ಭಾಗವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಆ ಉದ್ಯಮಿಗಳ ಲೈಸನ್ಸ್ ಮರುಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿ ದೂರನ್ನು ನೀಡಿದ್ದಾರೆ. ನಾಡಿನ ಸಂಪತ್ತು ಲೂಟಿಯಾಗಿರುವ ಈ ಪ್ರಕರಣದಲ್ಲಿ ಈಗಲಾದರೂ ಸಮರ್ಪಕ ತನಿಖೆ ನಡೆಯುವುದೇ ಎಂದು ಕಾದು ನೋಡಬೇಕಿದೆ.

  • ಶುದ್ದೋಧನ

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...