Homeಮುಖಪುಟಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ‌ ಮರಳು ಮಾಲೀಕರು ರಾಂಜಿ ನಾಯಕ್‌ಗೆ ಪಾರ್ಟಿ, ಉಡುಗೊರೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ‌ ಕ್ರಶರ್ ಅವ್ಯವಹಾರ  ನಡೆಯುತ್ತಿವೆ ಎಂಬ ಹಲವು ದೂರುಗಳು ದಾಖಲಾಗಿವೆ. ಉಡುಪಿಗೆ ಜೀವಜಲ ಒದಗಿಸುವ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಮರಳು ಕಳ್ಳಸಾಗಾಣಿಕೆಯಾಗಿದೆ ಎಂದು ಲೋಕಾಯುಕ್ತಾಗೆ ದೂರು ನೀಡಲಾಗಿತ್ತು. ಅವ್ಯವಹಾರದಲ್ಲಿ ಸ್ಥಳೀಯ ಶಾಸಕ ರಘುಪತಿ ಭಟ್ ಹೆಸರು ಸಹ ಕೇಳಿಬಂದಿತ್ತು. ಆದರೆ ತನಿಖೆ ಮಾತ್ರ ಪೂರ್ಣಗೊಳ್ಳಲಿಲ್ಲ.

ಆ ಮರಳು ಕದ್ದು ಸಾಗಿಸಲು ನೆರವಾಗಿದ್ದರು ಎಂಬ ಆರೋಪ ಹೊತ್ತಿರುವ ಹಿರಿಯ ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯಕ್‌ ಇತ್ತೀಚೆಗೆ ಉಡುಪಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ಕೆಲ ಕ್ರಶರ್ ಮಾಲೀಕರು ಮತ್ತು ಮರಳು ವ್ಯಾಪಾರಿಗಳು ಅಧಿಕಾರವಾಧಿಯಲ್ಲಿ ಸಹಾಯ ಮಾಡಿದ ಅವರಿಗೆ ಬೀಳ್ಕೊಡುಗೆ ನೆಪದಲ್ಲಿ ಅದ್ದೂರಿ ಪಾರ್ಟಿ ನಡೆಸಿ, ಬಾಡೂಟ ಹಾಕಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕಾರನ್ನು  ಉಡುಗೊರೆಯಾಗಿ ನೀಡಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ!

ಸಮಾರಂಭದಲ್ಲಿ ಸಿಬ್ಬಂದಿ ಭಾಗವಹಿಸಿರುವುದು.

ಅಕ್ಟೋಬರ್ 5 ರಂದು ನಗರದ ಓಶನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಈ ಭೋಜನ ಕೂಟದಲ್ಲಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸರಕಾರಿ ಜೀಪಿನಲ್ಲೇ ಬಂದು ಕ್ರಶರ್ ಮಾಲೀಕರು ಏರ್ಪಡಿಸಿದ ಪಾರ್ಟಿಯಲ್ಲಿ ಭರ್ಜರಿಯಾಗಿ ಉಂಡು ಹೋಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕ್ರಶರ್ ಮಾಲೀಕರು ಹಾಗೂ ಕೆಲವು ಮರಳು ಮಾರಾಟಗಾರರು ಭಾಗಿಯಾಗಿದ್ದರು ಎನ್ನಲಾಗಿದೆ.

ಉಡುಪಿಯಲ್ಲಿ ರಾಂಜಿ ನಾಯಕ್ ಹಿರಿಯ ಭೂ ವಿಜ್ಞಾನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆಗೆ ಸ್ವತಃ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲದೇ ಕಾನೂನು‌ ಉಲ್ಲಂಘಿಸಿ ನಡೆಯುತ್ತಿದ್ದ ಕ್ರಶರ್ ಗಳಿಗೆ ರತ್ನ ಗಂಬಳಿ ಹಾಕಿ ಕೊಟ್ಟಿದ್ದರು. ಡೀಮ್ಡ್ ಫಾರೆಸ್ಟ್ ನಲ್ಲಿ ಸ್ಥಗಿತಗೊಂಡಿದ್ದ ಅಕ್ರಮ ಕ್ರಶರ್ ಗಳಿಗೆ ಲಕ್ಷಾಂತರ ರೂಪಾಯಿ ಲಂಚ ಪಡೆದು ಮರು ಪ್ರಾರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಲೋಕಾಯುಕ್ತಾಕ್ಕೆ ದೂರು ಹೋದಾಗ ದಾಳಿ ನಡೆದು ಹಲವೆಡೆ ಅಕ್ರಮ ಮರಳು ದಾಸ್ತಾನು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ರಾಂಜಿ ನಾಯಕ್ ಮೇಲೆ ದೂರು ಸಹ ದಾಖಲಾಗಿದೆ.

ಭೂ ವಿಜ್ಞಾನ ಅಧಿಕಾರಿಗೆ ಕ್ರಶರ್ ಮಾಲೀಕರು ಭರ್ಜರಿ ಪಾರ್ಟಿ ಕೊಟ್ಟಿದ್ದೇಕೆ?

ಕ್ರಶರ್ ಮಾಲೀಕರು, ಮರಳು ಮಾರಾಟಗಾರರು ಉಡುಪಿ ಜಿಲ್ಲೆಯ ಭೂ ವಿಜ್ಞಾನ ಅಧಿಕಾರಿಗೆ ಪಾರ್ಟಿ ನೀಡಿದ್ದಾರೆ. ಸರ್ಕಾರಿ ವಾಹನದಲ್ಲಿಯೇ ಪಾರ್ಟಿಯಲ್ಲಿ ಭಾವಹಿಸಿರುವ ವಿಡಿಯೋ

Posted by Naanu Gauri on Friday, October 9, 2020

ಇಷ್ಟೆಲ್ಲ ಇರುವಾಗ ಕ್ರಶರ್ ಮಾಲೀಕರು ಆಯೋಜಿಸುವ ಪಾರ್ಟಿಯಲ್ಲಿ ಇವರು ರಾಜಾರೋಷವಾಗಿ ಭಾಗವಹಿಸಿ, ಅವರಿಂದ ಹಾರ, ಶಾಲು ಹಾಕಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ ಅಕ್ರಮ‌ ಮರಳು ದಂಧೆಕೋರರು ರಾಂಜಿ ನಾಯಕ್ ಗೆ ಐಶರಾಮಿ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ನೀಡಿ ಲಕ್ಷಾಂತರ ಮೌಲ್ಯದ ಉಡುಗೊರೆಗಳನ್ನ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಸದರಿ ಅಧಿಕಾರಿಯ ಮೇಲೆ ಅಕ್ರಮ ಗಣಿಗಾರಿಕೆ, ಕ್ರಶರ್‌ಗೆ ಅನುಮತಿ ನೀಡಿದ ಆರೋಪದಲ್ಲಿ ಭ್ರಷ್ಟಚಾರ ನಿಗ್ರಹ ದಳದಿಂದ ತನಿಖೆ ನಡೆಯುತ್ತಿದೆ. ಸರಕಾರಿ ಅಧಿಕಾರಿಗಳು ಅಕ್ರಮ ದಂಧೆಕೋರರ ಜೊತೆ ಬಹಿರಂಗವಾಗಿ ಪಾರ್ಟಿಯಲ್ಲಿ ಭಾಗವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಆ ಉದ್ಯಮಿಗಳ ಲೈಸನ್ಸ್ ಮರುಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿ ದೂರನ್ನು ನೀಡಿದ್ದಾರೆ. ನಾಡಿನ ಸಂಪತ್ತು ಲೂಟಿಯಾಗಿರುವ ಈ ಪ್ರಕರಣದಲ್ಲಿ ಈಗಲಾದರೂ ಸಮರ್ಪಕ ತನಿಖೆ ನಡೆಯುವುದೇ ಎಂದು ಕಾದು ನೋಡಬೇಕಿದೆ.

  • ಶುದ್ದೋಧನ

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...