Homeಮುಖಪುಟಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ‌ ಮರಳು ಮಾಲೀಕರು ರಾಂಜಿ ನಾಯಕ್‌ಗೆ ಪಾರ್ಟಿ, ಉಡುಗೊರೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ‌ ಕ್ರಶರ್ ಅವ್ಯವಹಾರ  ನಡೆಯುತ್ತಿವೆ ಎಂಬ ಹಲವು ದೂರುಗಳು ದಾಖಲಾಗಿವೆ. ಉಡುಪಿಗೆ ಜೀವಜಲ ಒದಗಿಸುವ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಮರಳು ಕಳ್ಳಸಾಗಾಣಿಕೆಯಾಗಿದೆ ಎಂದು ಲೋಕಾಯುಕ್ತಾಗೆ ದೂರು ನೀಡಲಾಗಿತ್ತು. ಅವ್ಯವಹಾರದಲ್ಲಿ ಸ್ಥಳೀಯ ಶಾಸಕ ರಘುಪತಿ ಭಟ್ ಹೆಸರು ಸಹ ಕೇಳಿಬಂದಿತ್ತು. ಆದರೆ ತನಿಖೆ ಮಾತ್ರ ಪೂರ್ಣಗೊಳ್ಳಲಿಲ್ಲ.

ಆ ಮರಳು ಕದ್ದು ಸಾಗಿಸಲು ನೆರವಾಗಿದ್ದರು ಎಂಬ ಆರೋಪ ಹೊತ್ತಿರುವ ಹಿರಿಯ ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯಕ್‌ ಇತ್ತೀಚೆಗೆ ಉಡುಪಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ಕೆಲ ಕ್ರಶರ್ ಮಾಲೀಕರು ಮತ್ತು ಮರಳು ವ್ಯಾಪಾರಿಗಳು ಅಧಿಕಾರವಾಧಿಯಲ್ಲಿ ಸಹಾಯ ಮಾಡಿದ ಅವರಿಗೆ ಬೀಳ್ಕೊಡುಗೆ ನೆಪದಲ್ಲಿ ಅದ್ದೂರಿ ಪಾರ್ಟಿ ನಡೆಸಿ, ಬಾಡೂಟ ಹಾಕಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕಾರನ್ನು  ಉಡುಗೊರೆಯಾಗಿ ನೀಡಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ!

ಸಮಾರಂಭದಲ್ಲಿ ಸಿಬ್ಬಂದಿ ಭಾಗವಹಿಸಿರುವುದು.

ಅಕ್ಟೋಬರ್ 5 ರಂದು ನಗರದ ಓಶನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಈ ಭೋಜನ ಕೂಟದಲ್ಲಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸರಕಾರಿ ಜೀಪಿನಲ್ಲೇ ಬಂದು ಕ್ರಶರ್ ಮಾಲೀಕರು ಏರ್ಪಡಿಸಿದ ಪಾರ್ಟಿಯಲ್ಲಿ ಭರ್ಜರಿಯಾಗಿ ಉಂಡು ಹೋಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕ್ರಶರ್ ಮಾಲೀಕರು ಹಾಗೂ ಕೆಲವು ಮರಳು ಮಾರಾಟಗಾರರು ಭಾಗಿಯಾಗಿದ್ದರು ಎನ್ನಲಾಗಿದೆ.

ಉಡುಪಿಯಲ್ಲಿ ರಾಂಜಿ ನಾಯಕ್ ಹಿರಿಯ ಭೂ ವಿಜ್ಞಾನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆಗೆ ಸ್ವತಃ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲದೇ ಕಾನೂನು‌ ಉಲ್ಲಂಘಿಸಿ ನಡೆಯುತ್ತಿದ್ದ ಕ್ರಶರ್ ಗಳಿಗೆ ರತ್ನ ಗಂಬಳಿ ಹಾಕಿ ಕೊಟ್ಟಿದ್ದರು. ಡೀಮ್ಡ್ ಫಾರೆಸ್ಟ್ ನಲ್ಲಿ ಸ್ಥಗಿತಗೊಂಡಿದ್ದ ಅಕ್ರಮ ಕ್ರಶರ್ ಗಳಿಗೆ ಲಕ್ಷಾಂತರ ರೂಪಾಯಿ ಲಂಚ ಪಡೆದು ಮರು ಪ್ರಾರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಲೋಕಾಯುಕ್ತಾಕ್ಕೆ ದೂರು ಹೋದಾಗ ದಾಳಿ ನಡೆದು ಹಲವೆಡೆ ಅಕ್ರಮ ಮರಳು ದಾಸ್ತಾನು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ರಾಂಜಿ ನಾಯಕ್ ಮೇಲೆ ದೂರು ಸಹ ದಾಖಲಾಗಿದೆ.

ಭೂ ವಿಜ್ಞಾನ ಅಧಿಕಾರಿಗೆ ಕ್ರಶರ್ ಮಾಲೀಕರು ಭರ್ಜರಿ ಪಾರ್ಟಿ ಕೊಟ್ಟಿದ್ದೇಕೆ?

ಕ್ರಶರ್ ಮಾಲೀಕರು, ಮರಳು ಮಾರಾಟಗಾರರು ಉಡುಪಿ ಜಿಲ್ಲೆಯ ಭೂ ವಿಜ್ಞಾನ ಅಧಿಕಾರಿಗೆ ಪಾರ್ಟಿ ನೀಡಿದ್ದಾರೆ. ಸರ್ಕಾರಿ ವಾಹನದಲ್ಲಿಯೇ ಪಾರ್ಟಿಯಲ್ಲಿ ಭಾವಹಿಸಿರುವ ವಿಡಿಯೋ

Posted by Naanu Gauri on Friday, October 9, 2020

ಇಷ್ಟೆಲ್ಲ ಇರುವಾಗ ಕ್ರಶರ್ ಮಾಲೀಕರು ಆಯೋಜಿಸುವ ಪಾರ್ಟಿಯಲ್ಲಿ ಇವರು ರಾಜಾರೋಷವಾಗಿ ಭಾಗವಹಿಸಿ, ಅವರಿಂದ ಹಾರ, ಶಾಲು ಹಾಕಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ ಅಕ್ರಮ‌ ಮರಳು ದಂಧೆಕೋರರು ರಾಂಜಿ ನಾಯಕ್ ಗೆ ಐಶರಾಮಿ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ನೀಡಿ ಲಕ್ಷಾಂತರ ಮೌಲ್ಯದ ಉಡುಗೊರೆಗಳನ್ನ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಸದರಿ ಅಧಿಕಾರಿಯ ಮೇಲೆ ಅಕ್ರಮ ಗಣಿಗಾರಿಕೆ, ಕ್ರಶರ್‌ಗೆ ಅನುಮತಿ ನೀಡಿದ ಆರೋಪದಲ್ಲಿ ಭ್ರಷ್ಟಚಾರ ನಿಗ್ರಹ ದಳದಿಂದ ತನಿಖೆ ನಡೆಯುತ್ತಿದೆ. ಸರಕಾರಿ ಅಧಿಕಾರಿಗಳು ಅಕ್ರಮ ದಂಧೆಕೋರರ ಜೊತೆ ಬಹಿರಂಗವಾಗಿ ಪಾರ್ಟಿಯಲ್ಲಿ ಭಾಗವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಆ ಉದ್ಯಮಿಗಳ ಲೈಸನ್ಸ್ ಮರುಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿ ದೂರನ್ನು ನೀಡಿದ್ದಾರೆ. ನಾಡಿನ ಸಂಪತ್ತು ಲೂಟಿಯಾಗಿರುವ ಈ ಪ್ರಕರಣದಲ್ಲಿ ಈಗಲಾದರೂ ಸಮರ್ಪಕ ತನಿಖೆ ನಡೆಯುವುದೇ ಎಂದು ಕಾದು ನೋಡಬೇಕಿದೆ.

  • ಶುದ್ದೋಧನ

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...