Homeಮುಖಪುಟಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ‌ ಮರಳು ಮಾಲೀಕರು ರಾಂಜಿ ನಾಯಕ್‌ಗೆ ಪಾರ್ಟಿ, ಉಡುಗೊರೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ‌ ಕ್ರಶರ್ ಅವ್ಯವಹಾರ  ನಡೆಯುತ್ತಿವೆ ಎಂಬ ಹಲವು ದೂರುಗಳು ದಾಖಲಾಗಿವೆ. ಉಡುಪಿಗೆ ಜೀವಜಲ ಒದಗಿಸುವ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಮರಳು ಕಳ್ಳಸಾಗಾಣಿಕೆಯಾಗಿದೆ ಎಂದು ಲೋಕಾಯುಕ್ತಾಗೆ ದೂರು ನೀಡಲಾಗಿತ್ತು. ಅವ್ಯವಹಾರದಲ್ಲಿ ಸ್ಥಳೀಯ ಶಾಸಕ ರಘುಪತಿ ಭಟ್ ಹೆಸರು ಸಹ ಕೇಳಿಬಂದಿತ್ತು. ಆದರೆ ತನಿಖೆ ಮಾತ್ರ ಪೂರ್ಣಗೊಳ್ಳಲಿಲ್ಲ.

ಆ ಮರಳು ಕದ್ದು ಸಾಗಿಸಲು ನೆರವಾಗಿದ್ದರು ಎಂಬ ಆರೋಪ ಹೊತ್ತಿರುವ ಹಿರಿಯ ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯಕ್‌ ಇತ್ತೀಚೆಗೆ ಉಡುಪಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ಕೆಲ ಕ್ರಶರ್ ಮಾಲೀಕರು ಮತ್ತು ಮರಳು ವ್ಯಾಪಾರಿಗಳು ಅಧಿಕಾರವಾಧಿಯಲ್ಲಿ ಸಹಾಯ ಮಾಡಿದ ಅವರಿಗೆ ಬೀಳ್ಕೊಡುಗೆ ನೆಪದಲ್ಲಿ ಅದ್ದೂರಿ ಪಾರ್ಟಿ ನಡೆಸಿ, ಬಾಡೂಟ ಹಾಕಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕಾರನ್ನು  ಉಡುಗೊರೆಯಾಗಿ ನೀಡಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ!

ಸಮಾರಂಭದಲ್ಲಿ ಸಿಬ್ಬಂದಿ ಭಾಗವಹಿಸಿರುವುದು.

ಅಕ್ಟೋಬರ್ 5 ರಂದು ನಗರದ ಓಶನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಈ ಭೋಜನ ಕೂಟದಲ್ಲಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸರಕಾರಿ ಜೀಪಿನಲ್ಲೇ ಬಂದು ಕ್ರಶರ್ ಮಾಲೀಕರು ಏರ್ಪಡಿಸಿದ ಪಾರ್ಟಿಯಲ್ಲಿ ಭರ್ಜರಿಯಾಗಿ ಉಂಡು ಹೋಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕ್ರಶರ್ ಮಾಲೀಕರು ಹಾಗೂ ಕೆಲವು ಮರಳು ಮಾರಾಟಗಾರರು ಭಾಗಿಯಾಗಿದ್ದರು ಎನ್ನಲಾಗಿದೆ.

ಉಡುಪಿಯಲ್ಲಿ ರಾಂಜಿ ನಾಯಕ್ ಹಿರಿಯ ಭೂ ವಿಜ್ಞಾನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆಗೆ ಸ್ವತಃ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲದೇ ಕಾನೂನು‌ ಉಲ್ಲಂಘಿಸಿ ನಡೆಯುತ್ತಿದ್ದ ಕ್ರಶರ್ ಗಳಿಗೆ ರತ್ನ ಗಂಬಳಿ ಹಾಕಿ ಕೊಟ್ಟಿದ್ದರು. ಡೀಮ್ಡ್ ಫಾರೆಸ್ಟ್ ನಲ್ಲಿ ಸ್ಥಗಿತಗೊಂಡಿದ್ದ ಅಕ್ರಮ ಕ್ರಶರ್ ಗಳಿಗೆ ಲಕ್ಷಾಂತರ ರೂಪಾಯಿ ಲಂಚ ಪಡೆದು ಮರು ಪ್ರಾರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಲೋಕಾಯುಕ್ತಾಕ್ಕೆ ದೂರು ಹೋದಾಗ ದಾಳಿ ನಡೆದು ಹಲವೆಡೆ ಅಕ್ರಮ ಮರಳು ದಾಸ್ತಾನು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ರಾಂಜಿ ನಾಯಕ್ ಮೇಲೆ ದೂರು ಸಹ ದಾಖಲಾಗಿದೆ.

ಭೂ ವಿಜ್ಞಾನ ಅಧಿಕಾರಿಗೆ ಕ್ರಶರ್ ಮಾಲೀಕರು ಭರ್ಜರಿ ಪಾರ್ಟಿ ಕೊಟ್ಟಿದ್ದೇಕೆ?

ಕ್ರಶರ್ ಮಾಲೀಕರು, ಮರಳು ಮಾರಾಟಗಾರರು ಉಡುಪಿ ಜಿಲ್ಲೆಯ ಭೂ ವಿಜ್ಞಾನ ಅಧಿಕಾರಿಗೆ ಪಾರ್ಟಿ ನೀಡಿದ್ದಾರೆ. ಸರ್ಕಾರಿ ವಾಹನದಲ್ಲಿಯೇ ಪಾರ್ಟಿಯಲ್ಲಿ ಭಾವಹಿಸಿರುವ ವಿಡಿಯೋ

Posted by Naanu Gauri on Friday, October 9, 2020

ಇಷ್ಟೆಲ್ಲ ಇರುವಾಗ ಕ್ರಶರ್ ಮಾಲೀಕರು ಆಯೋಜಿಸುವ ಪಾರ್ಟಿಯಲ್ಲಿ ಇವರು ರಾಜಾರೋಷವಾಗಿ ಭಾಗವಹಿಸಿ, ಅವರಿಂದ ಹಾರ, ಶಾಲು ಹಾಕಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ ಅಕ್ರಮ‌ ಮರಳು ದಂಧೆಕೋರರು ರಾಂಜಿ ನಾಯಕ್ ಗೆ ಐಶರಾಮಿ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ನೀಡಿ ಲಕ್ಷಾಂತರ ಮೌಲ್ಯದ ಉಡುಗೊರೆಗಳನ್ನ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಸದರಿ ಅಧಿಕಾರಿಯ ಮೇಲೆ ಅಕ್ರಮ ಗಣಿಗಾರಿಕೆ, ಕ್ರಶರ್‌ಗೆ ಅನುಮತಿ ನೀಡಿದ ಆರೋಪದಲ್ಲಿ ಭ್ರಷ್ಟಚಾರ ನಿಗ್ರಹ ದಳದಿಂದ ತನಿಖೆ ನಡೆಯುತ್ತಿದೆ. ಸರಕಾರಿ ಅಧಿಕಾರಿಗಳು ಅಕ್ರಮ ದಂಧೆಕೋರರ ಜೊತೆ ಬಹಿರಂಗವಾಗಿ ಪಾರ್ಟಿಯಲ್ಲಿ ಭಾಗವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಆ ಉದ್ಯಮಿಗಳ ಲೈಸನ್ಸ್ ಮರುಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿ ದೂರನ್ನು ನೀಡಿದ್ದಾರೆ. ನಾಡಿನ ಸಂಪತ್ತು ಲೂಟಿಯಾಗಿರುವ ಈ ಪ್ರಕರಣದಲ್ಲಿ ಈಗಲಾದರೂ ಸಮರ್ಪಕ ತನಿಖೆ ನಡೆಯುವುದೇ ಎಂದು ಕಾದು ನೋಡಬೇಕಿದೆ.

  • ಶುದ್ದೋಧನ

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...