Homeಮುಖಪುಟಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ‌ ಮರಳು ಮಾಲೀಕರು ರಾಂಜಿ ನಾಯಕ್‌ಗೆ ಪಾರ್ಟಿ, ಉಡುಗೊರೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ‌ ಕ್ರಶರ್ ಅವ್ಯವಹಾರ  ನಡೆಯುತ್ತಿವೆ ಎಂಬ ಹಲವು ದೂರುಗಳು ದಾಖಲಾಗಿವೆ. ಉಡುಪಿಗೆ ಜೀವಜಲ ಒದಗಿಸುವ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಮರಳು ಕಳ್ಳಸಾಗಾಣಿಕೆಯಾಗಿದೆ ಎಂದು ಲೋಕಾಯುಕ್ತಾಗೆ ದೂರು ನೀಡಲಾಗಿತ್ತು. ಅವ್ಯವಹಾರದಲ್ಲಿ ಸ್ಥಳೀಯ ಶಾಸಕ ರಘುಪತಿ ಭಟ್ ಹೆಸರು ಸಹ ಕೇಳಿಬಂದಿತ್ತು. ಆದರೆ ತನಿಖೆ ಮಾತ್ರ ಪೂರ್ಣಗೊಳ್ಳಲಿಲ್ಲ.

ಆ ಮರಳು ಕದ್ದು ಸಾಗಿಸಲು ನೆರವಾಗಿದ್ದರು ಎಂಬ ಆರೋಪ ಹೊತ್ತಿರುವ ಹಿರಿಯ ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯಕ್‌ ಇತ್ತೀಚೆಗೆ ಉಡುಪಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ಕೆಲ ಕ್ರಶರ್ ಮಾಲೀಕರು ಮತ್ತು ಮರಳು ವ್ಯಾಪಾರಿಗಳು ಅಧಿಕಾರವಾಧಿಯಲ್ಲಿ ಸಹಾಯ ಮಾಡಿದ ಅವರಿಗೆ ಬೀಳ್ಕೊಡುಗೆ ನೆಪದಲ್ಲಿ ಅದ್ದೂರಿ ಪಾರ್ಟಿ ನಡೆಸಿ, ಬಾಡೂಟ ಹಾಕಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕಾರನ್ನು  ಉಡುಗೊರೆಯಾಗಿ ನೀಡಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ!

ಸಮಾರಂಭದಲ್ಲಿ ಸಿಬ್ಬಂದಿ ಭಾಗವಹಿಸಿರುವುದು.

ಅಕ್ಟೋಬರ್ 5 ರಂದು ನಗರದ ಓಶನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಈ ಭೋಜನ ಕೂಟದಲ್ಲಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸರಕಾರಿ ಜೀಪಿನಲ್ಲೇ ಬಂದು ಕ್ರಶರ್ ಮಾಲೀಕರು ಏರ್ಪಡಿಸಿದ ಪಾರ್ಟಿಯಲ್ಲಿ ಭರ್ಜರಿಯಾಗಿ ಉಂಡು ಹೋಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕ್ರಶರ್ ಮಾಲೀಕರು ಹಾಗೂ ಕೆಲವು ಮರಳು ಮಾರಾಟಗಾರರು ಭಾಗಿಯಾಗಿದ್ದರು ಎನ್ನಲಾಗಿದೆ.

ಉಡುಪಿಯಲ್ಲಿ ರಾಂಜಿ ನಾಯಕ್ ಹಿರಿಯ ಭೂ ವಿಜ್ಞಾನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆಗೆ ಸ್ವತಃ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲದೇ ಕಾನೂನು‌ ಉಲ್ಲಂಘಿಸಿ ನಡೆಯುತ್ತಿದ್ದ ಕ್ರಶರ್ ಗಳಿಗೆ ರತ್ನ ಗಂಬಳಿ ಹಾಕಿ ಕೊಟ್ಟಿದ್ದರು. ಡೀಮ್ಡ್ ಫಾರೆಸ್ಟ್ ನಲ್ಲಿ ಸ್ಥಗಿತಗೊಂಡಿದ್ದ ಅಕ್ರಮ ಕ್ರಶರ್ ಗಳಿಗೆ ಲಕ್ಷಾಂತರ ರೂಪಾಯಿ ಲಂಚ ಪಡೆದು ಮರು ಪ್ರಾರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಲೋಕಾಯುಕ್ತಾಕ್ಕೆ ದೂರು ಹೋದಾಗ ದಾಳಿ ನಡೆದು ಹಲವೆಡೆ ಅಕ್ರಮ ಮರಳು ದಾಸ್ತಾನು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ರಾಂಜಿ ನಾಯಕ್ ಮೇಲೆ ದೂರು ಸಹ ದಾಖಲಾಗಿದೆ.

ಭೂ ವಿಜ್ಞಾನ ಅಧಿಕಾರಿಗೆ ಕ್ರಶರ್ ಮಾಲೀಕರು ಭರ್ಜರಿ ಪಾರ್ಟಿ ಕೊಟ್ಟಿದ್ದೇಕೆ?

ಕ್ರಶರ್ ಮಾಲೀಕರು, ಮರಳು ಮಾರಾಟಗಾರರು ಉಡುಪಿ ಜಿಲ್ಲೆಯ ಭೂ ವಿಜ್ಞಾನ ಅಧಿಕಾರಿಗೆ ಪಾರ್ಟಿ ನೀಡಿದ್ದಾರೆ. ಸರ್ಕಾರಿ ವಾಹನದಲ್ಲಿಯೇ ಪಾರ್ಟಿಯಲ್ಲಿ ಭಾವಹಿಸಿರುವ ವಿಡಿಯೋ

Posted by Naanu Gauri on Friday, October 9, 2020

ಇಷ್ಟೆಲ್ಲ ಇರುವಾಗ ಕ್ರಶರ್ ಮಾಲೀಕರು ಆಯೋಜಿಸುವ ಪಾರ್ಟಿಯಲ್ಲಿ ಇವರು ರಾಜಾರೋಷವಾಗಿ ಭಾಗವಹಿಸಿ, ಅವರಿಂದ ಹಾರ, ಶಾಲು ಹಾಕಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ ಅಕ್ರಮ‌ ಮರಳು ದಂಧೆಕೋರರು ರಾಂಜಿ ನಾಯಕ್ ಗೆ ಐಶರಾಮಿ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ನೀಡಿ ಲಕ್ಷಾಂತರ ಮೌಲ್ಯದ ಉಡುಗೊರೆಗಳನ್ನ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಸದರಿ ಅಧಿಕಾರಿಯ ಮೇಲೆ ಅಕ್ರಮ ಗಣಿಗಾರಿಕೆ, ಕ್ರಶರ್‌ಗೆ ಅನುಮತಿ ನೀಡಿದ ಆರೋಪದಲ್ಲಿ ಭ್ರಷ್ಟಚಾರ ನಿಗ್ರಹ ದಳದಿಂದ ತನಿಖೆ ನಡೆಯುತ್ತಿದೆ. ಸರಕಾರಿ ಅಧಿಕಾರಿಗಳು ಅಕ್ರಮ ದಂಧೆಕೋರರ ಜೊತೆ ಬಹಿರಂಗವಾಗಿ ಪಾರ್ಟಿಯಲ್ಲಿ ಭಾಗವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಆ ಉದ್ಯಮಿಗಳ ಲೈಸನ್ಸ್ ಮರುಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿ ದೂರನ್ನು ನೀಡಿದ್ದಾರೆ. ನಾಡಿನ ಸಂಪತ್ತು ಲೂಟಿಯಾಗಿರುವ ಈ ಪ್ರಕರಣದಲ್ಲಿ ಈಗಲಾದರೂ ಸಮರ್ಪಕ ತನಿಖೆ ನಡೆಯುವುದೇ ಎಂದು ಕಾದು ನೋಡಬೇಕಿದೆ.

  • ಶುದ್ದೋಧನ

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...