Homeಮುಖಪುಟಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ಉಡುಪಿ: ಭೂ ವಿಜ್ಞಾನ ಅಧಿಕಾರಿಗೆ ಗಣಿ ಮಾಲೀಕರಿಂದ ಭರ್ಜರಿ ಪಾರ್ಟಿ, ಉಡುಗೊರೆ- ದೂರು

ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ‌ ಮರಳು ಮಾಲೀಕರು ರಾಂಜಿ ನಾಯಕ್‌ಗೆ ಪಾರ್ಟಿ, ಉಡುಗೊರೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ‌ ಕ್ರಶರ್ ಅವ್ಯವಹಾರ  ನಡೆಯುತ್ತಿವೆ ಎಂಬ ಹಲವು ದೂರುಗಳು ದಾಖಲಾಗಿವೆ. ಉಡುಪಿಗೆ ಜೀವಜಲ ಒದಗಿಸುವ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಮರಳು ಕಳ್ಳಸಾಗಾಣಿಕೆಯಾಗಿದೆ ಎಂದು ಲೋಕಾಯುಕ್ತಾಗೆ ದೂರು ನೀಡಲಾಗಿತ್ತು. ಅವ್ಯವಹಾರದಲ್ಲಿ ಸ್ಥಳೀಯ ಶಾಸಕ ರಘುಪತಿ ಭಟ್ ಹೆಸರು ಸಹ ಕೇಳಿಬಂದಿತ್ತು. ಆದರೆ ತನಿಖೆ ಮಾತ್ರ ಪೂರ್ಣಗೊಳ್ಳಲಿಲ್ಲ.

ಆ ಮರಳು ಕದ್ದು ಸಾಗಿಸಲು ನೆರವಾಗಿದ್ದರು ಎಂಬ ಆರೋಪ ಹೊತ್ತಿರುವ ಹಿರಿಯ ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯಕ್‌ ಇತ್ತೀಚೆಗೆ ಉಡುಪಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದಾರೆ. ಕೆಲ ಕ್ರಶರ್ ಮಾಲೀಕರು ಮತ್ತು ಮರಳು ವ್ಯಾಪಾರಿಗಳು ಅಧಿಕಾರವಾಧಿಯಲ್ಲಿ ಸಹಾಯ ಮಾಡಿದ ಅವರಿಗೆ ಬೀಳ್ಕೊಡುಗೆ ನೆಪದಲ್ಲಿ ಅದ್ದೂರಿ ಪಾರ್ಟಿ ನಡೆಸಿ, ಬಾಡೂಟ ಹಾಕಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಕಾರನ್ನು  ಉಡುಗೊರೆಯಾಗಿ ನೀಡಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ!

ಸಮಾರಂಭದಲ್ಲಿ ಸಿಬ್ಬಂದಿ ಭಾಗವಹಿಸಿರುವುದು.

ಅಕ್ಟೋಬರ್ 5 ರಂದು ನಗರದ ಓಶನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಈ ಭೋಜನ ಕೂಟದಲ್ಲಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸರಕಾರಿ ಜೀಪಿನಲ್ಲೇ ಬಂದು ಕ್ರಶರ್ ಮಾಲೀಕರು ಏರ್ಪಡಿಸಿದ ಪಾರ್ಟಿಯಲ್ಲಿ ಭರ್ಜರಿಯಾಗಿ ಉಂಡು ಹೋಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕ್ರಶರ್ ಮಾಲೀಕರು ಹಾಗೂ ಕೆಲವು ಮರಳು ಮಾರಾಟಗಾರರು ಭಾಗಿಯಾಗಿದ್ದರು ಎನ್ನಲಾಗಿದೆ.

ಉಡುಪಿಯಲ್ಲಿ ರಾಂಜಿ ನಾಯಕ್ ಹಿರಿಯ ಭೂ ವಿಜ್ಞಾನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆಗೆ ಸ್ವತಃ ಬೆಂಬಲ ನೀಡಿದ್ದರು. ಅಷ್ಟೇ ಅಲ್ಲದೇ ಕಾನೂನು‌ ಉಲ್ಲಂಘಿಸಿ ನಡೆಯುತ್ತಿದ್ದ ಕ್ರಶರ್ ಗಳಿಗೆ ರತ್ನ ಗಂಬಳಿ ಹಾಕಿ ಕೊಟ್ಟಿದ್ದರು. ಡೀಮ್ಡ್ ಫಾರೆಸ್ಟ್ ನಲ್ಲಿ ಸ್ಥಗಿತಗೊಂಡಿದ್ದ ಅಕ್ರಮ ಕ್ರಶರ್ ಗಳಿಗೆ ಲಕ್ಷಾಂತರ ರೂಪಾಯಿ ಲಂಚ ಪಡೆದು ಮರು ಪ್ರಾರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಲೋಕಾಯುಕ್ತಾಕ್ಕೆ ದೂರು ಹೋದಾಗ ದಾಳಿ ನಡೆದು ಹಲವೆಡೆ ಅಕ್ರಮ ಮರಳು ದಾಸ್ತಾನು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ರಾಂಜಿ ನಾಯಕ್ ಮೇಲೆ ದೂರು ಸಹ ದಾಖಲಾಗಿದೆ.

ಭೂ ವಿಜ್ಞಾನ ಅಧಿಕಾರಿಗೆ ಕ್ರಶರ್ ಮಾಲೀಕರು ಭರ್ಜರಿ ಪಾರ್ಟಿ ಕೊಟ್ಟಿದ್ದೇಕೆ?

ಕ್ರಶರ್ ಮಾಲೀಕರು, ಮರಳು ಮಾರಾಟಗಾರರು ಉಡುಪಿ ಜಿಲ್ಲೆಯ ಭೂ ವಿಜ್ಞಾನ ಅಧಿಕಾರಿಗೆ ಪಾರ್ಟಿ ನೀಡಿದ್ದಾರೆ. ಸರ್ಕಾರಿ ವಾಹನದಲ್ಲಿಯೇ ಪಾರ್ಟಿಯಲ್ಲಿ ಭಾವಹಿಸಿರುವ ವಿಡಿಯೋ

Posted by Naanu Gauri on Friday, October 9, 2020

ಇಷ್ಟೆಲ್ಲ ಇರುವಾಗ ಕ್ರಶರ್ ಮಾಲೀಕರು ಆಯೋಜಿಸುವ ಪಾರ್ಟಿಯಲ್ಲಿ ಇವರು ರಾಜಾರೋಷವಾಗಿ ಭಾಗವಹಿಸಿ, ಅವರಿಂದ ಹಾರ, ಶಾಲು ಹಾಕಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಹಾಯದ ಋಣಸಂದಾಯಕ್ಕಾಗಿ ಕ್ರಶರ್ ಹಾಗೂ ಅಕ್ರಮ‌ ಮರಳು ದಂಧೆಕೋರರು ರಾಂಜಿ ನಾಯಕ್ ಗೆ ಐಶರಾಮಿ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ನೀಡಿ ಲಕ್ಷಾಂತರ ಮೌಲ್ಯದ ಉಡುಗೊರೆಗಳನ್ನ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಸದರಿ ಅಧಿಕಾರಿಯ ಮೇಲೆ ಅಕ್ರಮ ಗಣಿಗಾರಿಕೆ, ಕ್ರಶರ್‌ಗೆ ಅನುಮತಿ ನೀಡಿದ ಆರೋಪದಲ್ಲಿ ಭ್ರಷ್ಟಚಾರ ನಿಗ್ರಹ ದಳದಿಂದ ತನಿಖೆ ನಡೆಯುತ್ತಿದೆ. ಸರಕಾರಿ ಅಧಿಕಾರಿಗಳು ಅಕ್ರಮ ದಂಧೆಕೋರರ ಜೊತೆ ಬಹಿರಂಗವಾಗಿ ಪಾರ್ಟಿಯಲ್ಲಿ ಭಾಗವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಆ ಉದ್ಯಮಿಗಳ ಲೈಸನ್ಸ್ ಮರುಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿ ದೂರನ್ನು ನೀಡಿದ್ದಾರೆ. ನಾಡಿನ ಸಂಪತ್ತು ಲೂಟಿಯಾಗಿರುವ ಈ ಪ್ರಕರಣದಲ್ಲಿ ಈಗಲಾದರೂ ಸಮರ್ಪಕ ತನಿಖೆ ನಡೆಯುವುದೇ ಎಂದು ಕಾದು ನೋಡಬೇಕಿದೆ.

  • ಶುದ್ದೋಧನ

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...