Homeಕರ್ನಾಟಕಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಉಡುಪಿ ಕಾಲೇಜು ಬಹಿರಂಗಪಡಿಸಿದ್ದು, ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ‘ದಿ ಕ್ವಿಂಟ್‌’ ವರದಿ ಮಾಡಿದೆ.

- Advertisement -
- Advertisement -

ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿಯ ಬಾಲಕಿಯ ಕಾಲೇಜಿನ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ.

“ಹಿಜಾಬ್‌ಗಾಗಿ ಹೋರಾಡುತ್ತಿರುವ ಅಲಿಯಾ ಅಸ್ಸಾದಿ ಫೆಬ್ರವರಿ 9ರ ಬುಧವಾರದಂದು ದಿನವಿಡೀ ನಿಂದನೀಯ ಫೋನ್ ಕರೆಗಳನ್ನು ಸ್ವೀಕರಿಸಿದ್ದಾರೆ. ಉಡುಪಿಯ ವಾಟ್ಸಾಪ್ ಗ್ರೂಪ್‌ಗಳಲ್ಲಿ ವಿದ್ಯಾರ್ಥಿನಿಯರ ಫೋನ್ ನಂಬರ್‌‌ಗಳು, ಪೋಷಕರ ಹೆಸರುಗಳು ಮತ್ತು ಮನೆಯ ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಲಾಗಿದೆ” ಎಂದು ವರದಿ ಹೇಳಿದೆ.

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ಮುಂದುವರಿಸಬೇಕೆಂದು ಹೋರಾಡುತ್ತಿರುವ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆರು ಮುಸ್ಲಿಂ ವಿದ್ಯಾರ್ಥಿಗಳಲ್ಲಿ ಅಸ್ಸಾದಿ ಕೂಡ ಒಬ್ಬರು.

ಈ ಎಲ್ಲಾ ಆರು ವಿದ್ಯಾರ್ಥಿನಿಯರ ಪ್ರವೇಶ ಪತ್ರಗಳು ಉಡುಪಿ ಪದವಿ ಪೂರ್ವ ಕಾಲೇಜಿನಿಂದ ಬುಧವಾರ ಸೋರಿಕೆಯಾಗಿದ್ದವು. ಈ ಸಂಬಂಧ ಆನ್‌ಲೈನ್‌ ಸಂದೇಶವನ್ನು ಪಡೆದಿರುವುದಾಗಿ ದಿ ಕ್ವಿಂಟ್ ವರದಿ ಮಾಡಿದೆ.

ಕಾಲೇಜಿನ ಲೆಡ್ಜರ್‌ನಿಂದ ತೆಗೆದುಕೊಳ್ಳಲಾದ ಪ್ರವೇಶ ನಮೂದೆಗಳ ಪ್ರತಿಗಳನ್ನು ಸ್ಕ್ಯಾನ್ ಮಾಡಲಾದ ಪಿಡಿಎಫ್‌‌ ಹರಿದಾಡಿದೆ. ಈ ದಾಖಲೆಗಳು ಕಾಲೇಜಿನಿಂದಲೇ ಸೋರಿಕೆಯಾಗಿರುವುದು ಸ್ಪಷ್ಟವಾಗುತ್ತದೆ.

ಇದನ್ನೂ ಓದಿರಿ: ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…

ಕಾಲೇಜಿನ ಅಭಿವೃದ್ಧಿ ಸಮಿತಿಯ (ಸಿಡಿಸಿ) ಅಧ್ಯಕ್ಷರಾಗಿರುವ ಉಡುಪಿಯ ಬಿಜೆಪಿ ಶಾಸಕ ರಘುಪತಿ ಭಟ್, “ಹಿಜಾಬ್ ಧರಿಸಿರುವ ಮುಸ್ಲಿಂ ವಿದ್ಯಾರ್ಥಿಗಳನ್ನು ತರಗತಿಯೊಳಗೆ ಕೂರಿಸಲಾಗದು” ಎಂದು ಸಮರ್ಥಿಸಿಕೊಂಡಿದ್ದಾರೆ. ಪ್ರವೇಶಾತಿ ದಾಖಲೆಗಳನ್ನು ಕಾಲೇಜಿಗೆ ಮಾತ್ರ ಸಲ್ಲಿಸಲಾಗಿದೆ ಎಂದು ನೊಂದ ವಿದ್ಯಾರ್ಥಿನಿಯರು ದಿ ಕ್ವಿಂಟ್‌ಗೆ ಸ್ಪಷ್ಟಪಡಿಸಿದ್ದಾರೆ.

ನೊಂದ ಹೆಣ್ಣು ಮಕ್ಕಳ ಮನೆಗಳು ಟಾರ್ಗೆಟ್‌?

ಅಲಿಯಾ ಅಸ್ಸಾದಿ ಮತ್ತು ಹಜ್ರಾ ಶಿಫಾ ಇತರರು ಜನವರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದರು. ವೈಯಕ್ತಿಕ ವಿವರಗಳು ಲೀಕ್‌ ಆದ ಹಿನ್ನೆಲೆಯಲ್ಲಿ ಅಸ್ಸಾದಿಯವರು ‘ದಿ ಕ್ವಿಂಟ್’ ಜಾಲತಾಣದೊಂದಿಗೆ ಮಾತನಾಡುವಾಗ ಬುರ್ಕಾವನ್ನು ಧರಿಸಿದ್ದರು.

“ನಾನು ಇನ್ನು ಮುಂದೆ ನನ್ನ ಮುಖವನ್ನು ತೋರಿಸಲು ಸೂಕ್ತವೆನಿಸುವುದಿಲ್ಲ. ನಾನು ಹೇಗೆ ಕಾಣುತ್ತೇನೆ ಮತ್ತು ನನ್ನ ಮನೆ ಎಲ್ಲಿದೆ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಯಾರಾದರೂ ನನ್ನನ್ನು ಗುರಿಯಾಗಿಸಿಕೊಂಡರೆ ಏನು ಮಾಡುವುದು?” ಎಂದು ಆ ಹೆಣ್ಣುಮಗಳು ಪ್ರಶ್ನಿಸಿದ್ದಾಳೆ.

ಹಿಜಾಬ್ ಧರಿಸುವುದನ್ನು ಮುಂದುವರಿಸುವ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿನಿ ಹಜ್ರಾ ಶಿಫಾ, “ನನ್ನ ಹೆತ್ತವರಿಗೂ ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

“ನಾನು ಹಾವುಗಳನ್ನು ಪ್ರೀತಿಸುತ್ತೇನೆ. ನಾನು ವೈಲ್ಡ್‌ಲೈಫ್‌ ಫೋಟೋಗ್ರಾಫರ್‌ ಆಗಲು ಬಯಸುತ್ತೇನೆ. ಈಗ ಯಾರೂ ನನ್ನ ಮಹತ್ವಾಕಾಂಕ್ಷೆಯ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಮತ್ತೇಕೆ ನಮ್ಮನ್ನು ಇಷ್ಟು ಟಾರ್ಗೆಟ್ ಮಾಡಿದ್ದಾರೆ?” ಎಂದು ಕೇಳುವ ವಿದ್ಯಾರ್ಥಿನಿ ಅಲಿಯಾ, “ಬಿಜೆಪಿ ಶಾಸಕ ರಘುಪತಿ ಭಟ್ ಕಾಲೇಜು ಅಧಿಕಾರಿಗಳಿಗೆ ಮತ್ತು ಕೇಸರಿ ಶಾಲು ಹಾಕುವ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಅವರು ಕೇಸರಿ ಶಾಲು ಧರಿಸುವುದನ್ನು ಬೆಂಬಲಿಸುವ ಮೂಲಕ ಹಿಜಾಬ್‌ಗಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಕೋಮುವಾದಿಕರಿಸಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುವಂತೆ ಅವರು ಪ್ರೇರೇಪಿಸಿದರು. ಈಗ ಅವರು ಕಾಲೇಜು ಮಾತ್ರವಲ್ಲದೆ ನಮ್ಮ ಮನೆಗಳನ್ನೂ ಆತಂಕಕ್ಕೆ ತಳ್ಳಿದ್ದಾರೆ” ಎಂದು ಆಲಿಯಾ ಆರೋಪಿಸಿದ್ದಾರೆ.

ವೈದ್ಯೆಯಾಗಬೇಕು ಅಥವಾ ರೇಡಿಯಾಲಜಿಸ್ಟ್ ಆಗಬೇಕು ಶಿಫಾ ಇಚ್ಛಿಸಿದ್ದಾರೆ. “ಇದು ಕೊನೆಗೊಳ್ಳಬೇಕೆಂದು ನಾನು ಬಯಸುತ್ತೇನೆ. ನಾನು ಕೇವಲ ಓದಲು ಮತ್ತು ಜೀವನದಲ್ಲಿ ಏನಾದರೂ ಸಾಧಿಸಲು ಬಯಸುತ್ತೇನೆ” ಎಂದು ಹತಾಶೆಯಿಂದ ನುಡಿಯುತ್ತಾರೆ ಶಿಫಾ.

ಸೋರಿಕೆಯಾದ ಡೇಟಾದ ಬಗ್ಗೆ ಪ್ರತಿಕ್ರಿಯಿಸಲು ಕಾಲೇಜು ನಿರಾಕರಿಸಿದೆ. (ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ಅವರನ್ನು ಸಂಪರ್ಕಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ವಾಟ್ಸ್‌ಆಪ್‌ ಮೂಲಕ ಪ್ರತಿಕ್ರಿಯೆಯನ್ನೂ ನಿರೀಕ್ಷಿಸಲಾಗಿದೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆಯನ್ನು ಪ್ರಾಂಶುಪಾಲರಾದ ರುದ್ರೇಗೌಡ ನೀಡಿಲ್ಲ. ಪ್ರತಿಕ್ರಿಯೆ ನೀಡಿದ್ದಲ್ಲಿ ಅಪ್‌ಡೇಟ್ ಮಾಡಲಾಗುವುದು.)

ಇದನ್ನೂ ಓದಿರಿ: ’ಹಿಜಾಬ್‌ ಧರಿಸಿ ಶಾಲೆಗೆ ಹೋಗುವುದನ್ನು ನಿರಾಕರಿಸುವುದು ಭಯಾನಕ’: ಮಲಾಲಾ

ಮುಸ್ಲಿಂ ವಿದ್ಯಾರ್ಥಿನಿಯರ ಘನತೆಗೆ ಧಕ್ಕೆ ತರಲು ಮಾರ್ಕ್ಸ್ ಕಾರ್ಡ್, ಪೋಷಕರ ಆದಾಯ ಪ್ರಮಾಣ ಪತ್ರದ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ವರದಿ ಹೇಳುತ್ತದೆ.

ಎಲ್ಲರೂ ತಮ್ಮ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ನಮ್ಮ ವಿದ್ಯಾಭ್ಯಾಸ ಕಳಪೆಯಾಗಿದೆ ಎಂದು ನಿಂದಿಸಲಾಗುತ್ತಿದೆ ಎಂದು ಆಲಿಯಾ ತಿಳಿಸಿದ್ದಾರೆ.

“ನಾವು ಹತ್ತನೇ ತರಗತಿಯಲ್ಲಿ ಕಳಪೆ ಸಾಧನೆ ಮಾಡಿದ್ದೇವೆ ಎಂಬ ನಕಲಿ ಮೌಲ್ಯಮಾಪನವನ್ನು ಅವರು ಪ್ರಸಾರ ಮಾಡುತ್ತಿದ್ದಾರೆ. ನಾವು ಈಗ ತರಗತಿಯ ಕಲಿಕೆಯನ್ನು ಕಳೆದುಕೊಳ್ಳುವ ಬಗ್ಗೆ ಅವರು ಏಕೆ ಚಿಂತಿಸುತ್ತಿಲ್ಲ?” ಎಂದು ಬಹಳ ನೊಂದು ಕೇಳುತ್ತಾರೆ ಆಲಿಯಾ.

ಈ ವರ್ಷ ಏಪ್ರಿಲ್‌ನಲ್ಲಿ ಪಿಯು ಪರೀಕ್ಷೆಗಳು ನಡೆಯುವ ನಿರೀಕ್ಷೆಯಿದೆ. ಜನವರಿಯಲ್ಲಿ ಈ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನಿಂದ ಹೊರಹಾಕಲಾಯಿತು. “ಎರಡು ತಿಂಗಳೊಳಗೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದ್ದರೂ ತರಗತಿಗೆ ನಮ್ಮನ್ನು ಕೂರಿಸುತ್ತಿಲ್ಲ” ಎಂದು ಶಿಫಾ ನೊಂದುಕೊಳ್ಳುತ್ತಾರೆ.

ವಿದ್ಯಾರ್ಥಿನಿಯರು ಕಡಿಮೆ ಅಂಕಗಳನ್ನು ಪಡೆದಿದ್ದಾರೆ ಎಂಬುದು ಸುಳ್ಳು ಎಂದು ‘ದಿ ಕ್ವಿಂಟ್’ ಖಾತ್ರಿಪಡಿಸಿಕೊಂಡಿದೆ. ಕೆಲವು ವಿದ್ಯಾರ್ಥಿಗಳು ತಮ್ಮ ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ ಎಂದು ದಿ ಕ್ವಿಂಟ್ ಹೇಳಿದೆ. ಉದಾಹರಣೆಗೆ, ಮುಸ್ಕಾನ್ ಜೈನಾಬ್ ಹತ್ತನೇ ತರಗತಿಯಲ್ಲಿ ಶೇ. 87.52ರಷ್ಟು ಅಂಕಗಳನ್ನು ಪಡೆದುಕೊಂಡಿದ್ದಾರೆ. ರೇಶಮ್ ಅವರು ಸಮಾಜ ವಿಜ್ಞಾನದಲ್ಲಿ ಶೇ. 80ರಷ್ಟು ಅಂಕ, ಒಟ್ಟಾರೆಯಾಗಿ ಶೇ. 67.52 ಅಂಕಗಳನ್ನು ಪಡೆದಿದ್ದಾರೆ. ಆಲಿಯಾ ಅಸ್ಸಾದಿ ಅವರು ಸಮಾಜ ವಿಜ್ಞಾನದಲ್ಲಿ ಶೇ.83 ಅಂಕ ಹಾಗೂ ಒಟ್ಟಾರೆಯಾಗಿ ಶೇ. 66.72 ಅಂಕಗಳನ್ನು ಗಳಿಸಿದ್ದಾರೆ.

ಈಗ ಹರಿದಾಡಿರುವ ದಾಖಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರ ಆದಾಯದ ವಿವರಗಳೂ ಇವೆ.

“ನನ್ನ ತಂದೆ ಆಟೋ ಚಾಲಕ. ಮೊದಲು ಅವರು ನನ್ನನ್ನು ಶ್ರೀಮಂತರು ಎಂದು ದೂಷಿಸಿದರು. ನಾವು ಬಡವರಾಗಿದ್ದೇವೆ. ಇವರು ತೊಂದರೆ ಕೊಡುವವರು ಎಂದು ಹೇಳುತ್ತಿದ್ದಾರೆ” ಎಂದು ಆಲಿಯಾ ನೋವು ತೋಡಿಕೊಂಡಿದ್ದಾರೆ. ವಾರ್ಷಿಕವಾಗಿ ರೂ. 1 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಪೋಷಕರನ್ನು ವಾಟ್ಸಾಪ್ ಫಾರ್ವರ್ಡ್‌ಗಳಲ್ಲಿ ನಿರ್ದಿಷ್ಟವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. “ದುಡ್ಡು ತೆಗೆದುಕೊಂಡು ಹಿಜಾಬ್ ಧರಿಸಿ ಬರುವ ಹುಡುಗಿಯರೆಂದು ನಮ್ಮನ್ನು ಅವರು ದೂಷಿಸಿದ್ದಾರೆ. ನಾವು ನಮ್ಮ ಧಾರ್ಮಿಕ ನಂಬಿಕೆಗಾಗಿ ಹಿಜಾಬ್‌ ಧರಿಸುತ್ತೇವೆ ಹೊರತು, ಹಣಕ್ಕಾಗಿ ಅಲ್ಲ” ಎನ್ನುತ್ತಾರೆ ಶಿಫಾ.

“ಈ ದ್ವೇಷ ಅಭಿಯಾನದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವಾಗ ಈ ವಿದ್ಯಾರ್ಥಿಗಳು ಕೆಲವು ದಿನಗಳಿಂದ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ.

“ನಾನು ಕಳೆದುಕೊಂಡ ಮೊದಲ ಸಂಗತಿಯೆಂದರೆ ನನ್ನ ಮಾನಸಿಕ ಶಾಂತಿ. ನಾವು ಮಾನಸಿಕವಾಗಿ ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದೇವೆ. ನಾನು ಸಮಯವನ್ನು ಕಳೆದುಕೊಂಡೆ, ಬಹಳಷ್ಟು ಮಾಧ್ಯಮಗಳಿಗೆ ಬೈಟ್‌ಗಳನ್ನು ನೀಡಿದೆ. ನನಗೂ ನರ್ವಸ್ ಆಗಿದೆ. ಇದು ನಿಜವಾಗಿಯೂ ಕಷ್ಟಕರವಾಗಿದೆ” ಎನ್ನುತ್ತಾರೆ ಆಲಿಯಾ. ಪ್ರತಿ ಬಾರಿ ಸಾರ್ವಜನಿಕವಾಗಿ ಮಾತನಾಡುವಾಗ, “ಹೆಚ್ಚಿನ ವಿವಾದವನ್ನು ತಪ್ಪಿಸಲು ತನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತಿದ್ದಾರೆ” ಎನ್ನುತ್ತಾರೆ ವಿದ್ಯಾರ್ಥಿನಿ. ಆದರೆ ಕಾಲೇಜಿನ ಡೇಟಾ ಸೋರಿಕೆಯಿಂದ ಈ ವಿದ್ಯಾರ್ಥಿನಿಯರ ಜೀವನ ಇನ್ನಷ್ಟು ಕಠಿಣವಾಗಿದೆ.

ಈ ಪ್ರಕ್ರಿಯೆಯಲ್ಲಿ ಅಸ್ಸಾದಿ ತಮ್ಮ ಸ್ನೇಹಿತರನ್ನು ಕಳೆದುಕೊಂಡಿದ್ದಾರೆ. “ಈ ಸಮಸ್ಯೆಯಿಂದಾಗಿ ನಾನು ನನ್ನ ಅನೇಕ ಮುಸ್ಲಿಮೇತರ ಸ್ನೇಹಿತರನ್ನು ಕಳೆದುಕೊಂಡೆ. ನಮ್ಮನ್ನು ವಿರೋಧಿಸುವಂತೆ ಮಾಡಿದವರು ಯಾರು ಎಂಬುದು ಗೊತ್ತಿಲ್ಲ. ಆದರೆ ಇದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಆಲಿಯಾ ಆಶಾವಾದ ವ್ಯಕ್ತಪಡಿಸಿದ್ದಾರೆ.

“ನನ್ನ ಮುಸ್ಲಿಮೇತರ ಸ್ನೇಹಿತರು ನಮ್ಮನ್ನು ದ್ವೇಷಿಸಲು ಪ್ರಾರಂಭಿಸಿದ್ದಾರೆ” ಎಂದು ಶಿಫಾ ಹೇಳಿದ್ದಾರೆ. ಓದಲು ಕುಳಿತಾಗಲೆಲ್ಲ ಏಕಾಗ್ರತೆ ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ಶಿಫಾ.

ವರದಿ ಕೃಪೆ: ದಿ ಕ್ವಿಂಟ್


ಇದನ್ನೂ ಓದಿರಿ: ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...