Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...