Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...