Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...