Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...