Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...