Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...