Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...