Homeಕರ್ನಾಟಕಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

’ಹಿಜಾಬ್ ಹಾಕಿಕೊಂಡು ಬರಲು ಅನುಮತಿ ನೀಡುವುದಿಲ್ಲ. ಬೇಕಿದ್ದರೇ ಆನ್‌ಲೈನ್ ತರಗತಿಗಳನ್ನು ಮಾಡಿ, ಪರೀಕ್ಷೆಗೆ ಅವಕಾಶ ನೀಡುತ್ತೇವೆ’: ಶಾಸಕ ರಘುಪತಿ ಭಟ್

- Advertisement -
- Advertisement -

ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಹಿಜಾಬ್ ವಿವಾದದ ಹಿನ್ನೆಲೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಣ ಇಲಾಖೆ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ನಿಗದಿಗೊಳಿಸಿ, ಕಡ್ಡಾಯಗೊಳಿಸಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಸಮವಸ್ತ್ರ, ವಸ್ತ್ರ ಸಂಹಿತಿ ಕಡ್ಡಾಯಗೊಳಿಸಿಲ್ಲ. ಆದರೆ,  ತಮ್ಮ ಆಯ್ಕೆಯ ವಸ್ತ್ರವನ್ನು ಧರಿಸಿ ಬರಲು ಅನುಮತಿ ನೀಡುವಂತೆ ಒತ್ತಾಯಿಸುತ್ತಿರುವ ಉಡುಪಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು, ಕಾಲೇಜಿಗೆ ಪ್ರವೇಶ ಪಡೆಯುವ ವೇಳೆಯಲ್ಲಿ  ಕಾಲೇಜಿನ ವಸ್ತ್ರಸಂಹಿತೆಯ ಮಾಹಿತಿ ಪಡೆದು, ಒಪ್ಪಿಕೊಂಡು ಸ್ವಇಚ್ಛೆಯಿಂದ ಕಾಲೇಜಿಗೆ ದಾಖಲಾತಿ ಪಡೆದಿದ್ದಾರೆ. ಆದರೆ, ಇಷ್ಟು ದಿನ ಇಲ್ಲದ ಗೊಂದಲಗಳನ್ನು ಈಗ ಸೃಷ್ಟಿಸುತ್ತಿರುವುದು ಶೈಕ್ಷಣಿಕ ಹಿತದೃಷ್ಟಿಯಿಂದ ಒಳಿತಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಪದವಿಪೂರ್ವ ಕಾಲೇಜುಗಳಲ್ಲಿ ಜಾರಿಯಿರುವ ಸಮವಸ್ತ್ರ ನೀತಿಸಂಹಿತೆಯನ್ನು ಪರಿಶೀಲಿಸಲು ಹಾಗೂ ಈ ಕುರಿತು ಸುಪ್ರೀಂ ಕೋರ್ಟ್‌, ರಾಜ್ಯಗಳ ಹೈಕೋರ್ಟ್‌ಗಳು ನೀಡಿರುವ ತೀರ್ಪುಗಳನ್ನು ಅವಲೋಕಿಸಿ ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ/ ವಸ್ತ್ರಸಂಹಿತೆ ನಿಗದಿಗೊಳಿಸಲು ಚಿಂತನ ಮಂಥನ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿಯು ವಸ್ತ್ರಸಂಹಿತೆ ಅಥವಾ ಸಮವಸ್ತ್ರದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದ್ದು, ವರದಿ  ಪರಿಶೀಲಿಸಿ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತೆ. ಅಲ್ಲಿಯವರೆಗೆ ಕಾಲೇಜಿನಲ್ಲಿ ಯಥಾಸ್ಥಿತಿ ಮುಂದುವರೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

Image

ಇನ್ನು, ಪ್ರತಿಭಟನಾ ನಿರತ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗಳಿಗೆ ಬರಲು ಅವಕಾಶ ನೀಡುವುದಿಲ್ಲ. ಕಾಲೇಜಿನ ಸಮವಸ್ತ್ರ ಧರಿಸಿ ಬರಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

“ಇನ್ನು ಒಂದು ತಿಂಗಳು ಮಾತ್ರ ತರಗತಿಗಳು ನಡೆಯಲಿವೆ. ಆಮೇಲೆ ಪರೀಕ್ಷೆ. ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇವೆ. ಅವರು ಒಪ್ಪದಿದ್ದರೇ…ಅವರಿಗೆ ಹಿಜಾಬ್ ಹಾಕಿಕೊಂಡು ಬರಲು ಅನುಮತಿ ನೀಡುವುದಿಲ್ಲ. ಬೇಕಿದ್ದರೇ ಅವರಿಗೆ ಆನ್‌ಲೈನ್ ತರಗತಿಗಳನ್ನು ಮಾಡಿ, ಪರೀಕ್ಷೆಗೆ ಅವಕಾಶ ನೀಡುತ್ತೇವೆ. ಅವರಿಗೆ ಇನ್ನೂ ಆಗುವುದಿಲ್ಲ ಎಂದರೆ, ಮುಂದಿನ ವರ್ಷದಿಂದ ಅವರು ಬೇರೆ ಕಾಲೇಜಿಗೆ ಹೋಗಬಹುದು” ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಹಿಜಾಬ್ ಹಾಕಿಕೊಂಡು ಬರುತ್ತಾರೆಂದು ಕಳೆದ ಒಂದು ತಿಂಗಳಿನಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ನಂತಹ ಧಾರ್ಮಿಕ ದಿರಿಸುಗಳನ್ನು college ಗಳಲ್ಲಿಯೂ ಧರಿಸಬೇಕು ಎಂಬ ಹಠ ಏಕೆ ಎನ್ನುವುದೇ ಅರ್ಥ ಆಗೋಲ್ಲ.
    ಸುಮಾರು 50ಕ್ಕೂ ಹೆಚ್ಚು ಮುಸ್ಲಿಂ ಬಾಲಕಿಯರು ಧರಿಸುತ್ತಿರುವ ಸಮ ವಸ್ತ್ರವನ್ನು ಈ ಐದಾರು ಜನ ಏಕೆ ನಿರಾಕರಿಸುತ್ತಿದ್ದಾರೆ , ಇದರ ಹಿನ್ನೆಲೆಯೇನು.

    ಒಟ್ಟಾರೆಯಾಗಿ ಇದೊಂದು ಅನಪೇಕ್ಷಿತ ಮತ್ತು ಗೊಂದಲಮಯ ನಡವಳಿಕೆ ಎನುವುದಂತು ಸತ್ಯ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...