Homeಕರ್ನಾಟಕಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

’ಹಿಜಾಬ್ ಹಾಕಿಕೊಂಡು ಬರಲು ಅನುಮತಿ ನೀಡುವುದಿಲ್ಲ. ಬೇಕಿದ್ದರೇ ಆನ್‌ಲೈನ್ ತರಗತಿಗಳನ್ನು ಮಾಡಿ, ಪರೀಕ್ಷೆಗೆ ಅವಕಾಶ ನೀಡುತ್ತೇವೆ’: ಶಾಸಕ ರಘುಪತಿ ಭಟ್

- Advertisement -
- Advertisement -

ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಹಿಜಾಬ್ ವಿವಾದದ ಹಿನ್ನೆಲೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಣ ಇಲಾಖೆ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ನಿಗದಿಗೊಳಿಸಿ, ಕಡ್ಡಾಯಗೊಳಿಸಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಸಮವಸ್ತ್ರ, ವಸ್ತ್ರ ಸಂಹಿತಿ ಕಡ್ಡಾಯಗೊಳಿಸಿಲ್ಲ. ಆದರೆ,  ತಮ್ಮ ಆಯ್ಕೆಯ ವಸ್ತ್ರವನ್ನು ಧರಿಸಿ ಬರಲು ಅನುಮತಿ ನೀಡುವಂತೆ ಒತ್ತಾಯಿಸುತ್ತಿರುವ ಉಡುಪಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು, ಕಾಲೇಜಿಗೆ ಪ್ರವೇಶ ಪಡೆಯುವ ವೇಳೆಯಲ್ಲಿ  ಕಾಲೇಜಿನ ವಸ್ತ್ರಸಂಹಿತೆಯ ಮಾಹಿತಿ ಪಡೆದು, ಒಪ್ಪಿಕೊಂಡು ಸ್ವಇಚ್ಛೆಯಿಂದ ಕಾಲೇಜಿಗೆ ದಾಖಲಾತಿ ಪಡೆದಿದ್ದಾರೆ. ಆದರೆ, ಇಷ್ಟು ದಿನ ಇಲ್ಲದ ಗೊಂದಲಗಳನ್ನು ಈಗ ಸೃಷ್ಟಿಸುತ್ತಿರುವುದು ಶೈಕ್ಷಣಿಕ ಹಿತದೃಷ್ಟಿಯಿಂದ ಒಳಿತಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಪದವಿಪೂರ್ವ ಕಾಲೇಜುಗಳಲ್ಲಿ ಜಾರಿಯಿರುವ ಸಮವಸ್ತ್ರ ನೀತಿಸಂಹಿತೆಯನ್ನು ಪರಿಶೀಲಿಸಲು ಹಾಗೂ ಈ ಕುರಿತು ಸುಪ್ರೀಂ ಕೋರ್ಟ್‌, ರಾಜ್ಯಗಳ ಹೈಕೋರ್ಟ್‌ಗಳು ನೀಡಿರುವ ತೀರ್ಪುಗಳನ್ನು ಅವಲೋಕಿಸಿ ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ/ ವಸ್ತ್ರಸಂಹಿತೆ ನಿಗದಿಗೊಳಿಸಲು ಚಿಂತನ ಮಂಥನ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿಯು ವಸ್ತ್ರಸಂಹಿತೆ ಅಥವಾ ಸಮವಸ್ತ್ರದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದ್ದು, ವರದಿ  ಪರಿಶೀಲಿಸಿ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತೆ. ಅಲ್ಲಿಯವರೆಗೆ ಕಾಲೇಜಿನಲ್ಲಿ ಯಥಾಸ್ಥಿತಿ ಮುಂದುವರೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

Image

ಇನ್ನು, ಪ್ರತಿಭಟನಾ ನಿರತ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗಳಿಗೆ ಬರಲು ಅವಕಾಶ ನೀಡುವುದಿಲ್ಲ. ಕಾಲೇಜಿನ ಸಮವಸ್ತ್ರ ಧರಿಸಿ ಬರಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

“ಇನ್ನು ಒಂದು ತಿಂಗಳು ಮಾತ್ರ ತರಗತಿಗಳು ನಡೆಯಲಿವೆ. ಆಮೇಲೆ ಪರೀಕ್ಷೆ. ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇವೆ. ಅವರು ಒಪ್ಪದಿದ್ದರೇ…ಅವರಿಗೆ ಹಿಜಾಬ್ ಹಾಕಿಕೊಂಡು ಬರಲು ಅನುಮತಿ ನೀಡುವುದಿಲ್ಲ. ಬೇಕಿದ್ದರೇ ಅವರಿಗೆ ಆನ್‌ಲೈನ್ ತರಗತಿಗಳನ್ನು ಮಾಡಿ, ಪರೀಕ್ಷೆಗೆ ಅವಕಾಶ ನೀಡುತ್ತೇವೆ. ಅವರಿಗೆ ಇನ್ನೂ ಆಗುವುದಿಲ್ಲ ಎಂದರೆ, ಮುಂದಿನ ವರ್ಷದಿಂದ ಅವರು ಬೇರೆ ಕಾಲೇಜಿಗೆ ಹೋಗಬಹುದು” ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಹಿಜಾಬ್ ಹಾಕಿಕೊಂಡು ಬರುತ್ತಾರೆಂದು ಕಳೆದ ಒಂದು ತಿಂಗಳಿನಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ನಂತಹ ಧಾರ್ಮಿಕ ದಿರಿಸುಗಳನ್ನು college ಗಳಲ್ಲಿಯೂ ಧರಿಸಬೇಕು ಎಂಬ ಹಠ ಏಕೆ ಎನ್ನುವುದೇ ಅರ್ಥ ಆಗೋಲ್ಲ.
    ಸುಮಾರು 50ಕ್ಕೂ ಹೆಚ್ಚು ಮುಸ್ಲಿಂ ಬಾಲಕಿಯರು ಧರಿಸುತ್ತಿರುವ ಸಮ ವಸ್ತ್ರವನ್ನು ಈ ಐದಾರು ಜನ ಏಕೆ ನಿರಾಕರಿಸುತ್ತಿದ್ದಾರೆ , ಇದರ ಹಿನ್ನೆಲೆಯೇನು.

    ಒಟ್ಟಾರೆಯಾಗಿ ಇದೊಂದು ಅನಪೇಕ್ಷಿತ ಮತ್ತು ಗೊಂದಲಮಯ ನಡವಳಿಕೆ ಎನುವುದಂತು ಸತ್ಯ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...