Homeಕರ್ನಾಟಕಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

’ಹಿಜಾಬ್ ಹಾಕಿಕೊಂಡು ಬರಲು ಅನುಮತಿ ನೀಡುವುದಿಲ್ಲ. ಬೇಕಿದ್ದರೇ ಆನ್‌ಲೈನ್ ತರಗತಿಗಳನ್ನು ಮಾಡಿ, ಪರೀಕ್ಷೆಗೆ ಅವಕಾಶ ನೀಡುತ್ತೇವೆ’: ಶಾಸಕ ರಘುಪತಿ ಭಟ್

- Advertisement -
- Advertisement -

ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಹಿಜಾಬ್ ವಿವಾದದ ಹಿನ್ನೆಲೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಣ ಇಲಾಖೆ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ನಿಗದಿಗೊಳಿಸಿ, ಕಡ್ಡಾಯಗೊಳಿಸಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಸಮವಸ್ತ್ರ, ವಸ್ತ್ರ ಸಂಹಿತಿ ಕಡ್ಡಾಯಗೊಳಿಸಿಲ್ಲ. ಆದರೆ,  ತಮ್ಮ ಆಯ್ಕೆಯ ವಸ್ತ್ರವನ್ನು ಧರಿಸಿ ಬರಲು ಅನುಮತಿ ನೀಡುವಂತೆ ಒತ್ತಾಯಿಸುತ್ತಿರುವ ಉಡುಪಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು, ಕಾಲೇಜಿಗೆ ಪ್ರವೇಶ ಪಡೆಯುವ ವೇಳೆಯಲ್ಲಿ  ಕಾಲೇಜಿನ ವಸ್ತ್ರಸಂಹಿತೆಯ ಮಾಹಿತಿ ಪಡೆದು, ಒಪ್ಪಿಕೊಂಡು ಸ್ವಇಚ್ಛೆಯಿಂದ ಕಾಲೇಜಿಗೆ ದಾಖಲಾತಿ ಪಡೆದಿದ್ದಾರೆ. ಆದರೆ, ಇಷ್ಟು ದಿನ ಇಲ್ಲದ ಗೊಂದಲಗಳನ್ನು ಈಗ ಸೃಷ್ಟಿಸುತ್ತಿರುವುದು ಶೈಕ್ಷಣಿಕ ಹಿತದೃಷ್ಟಿಯಿಂದ ಒಳಿತಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಪದವಿಪೂರ್ವ ಕಾಲೇಜುಗಳಲ್ಲಿ ಜಾರಿಯಿರುವ ಸಮವಸ್ತ್ರ ನೀತಿಸಂಹಿತೆಯನ್ನು ಪರಿಶೀಲಿಸಲು ಹಾಗೂ ಈ ಕುರಿತು ಸುಪ್ರೀಂ ಕೋರ್ಟ್‌, ರಾಜ್ಯಗಳ ಹೈಕೋರ್ಟ್‌ಗಳು ನೀಡಿರುವ ತೀರ್ಪುಗಳನ್ನು ಅವಲೋಕಿಸಿ ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ/ ವಸ್ತ್ರಸಂಹಿತೆ ನಿಗದಿಗೊಳಿಸಲು ಚಿಂತನ ಮಂಥನ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿಯು ವಸ್ತ್ರಸಂಹಿತೆ ಅಥವಾ ಸಮವಸ್ತ್ರದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದ್ದು, ವರದಿ  ಪರಿಶೀಲಿಸಿ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತೆ. ಅಲ್ಲಿಯವರೆಗೆ ಕಾಲೇಜಿನಲ್ಲಿ ಯಥಾಸ್ಥಿತಿ ಮುಂದುವರೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

Image

ಇನ್ನು, ಪ್ರತಿಭಟನಾ ನಿರತ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗಳಿಗೆ ಬರಲು ಅವಕಾಶ ನೀಡುವುದಿಲ್ಲ. ಕಾಲೇಜಿನ ಸಮವಸ್ತ್ರ ಧರಿಸಿ ಬರಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

“ಇನ್ನು ಒಂದು ತಿಂಗಳು ಮಾತ್ರ ತರಗತಿಗಳು ನಡೆಯಲಿವೆ. ಆಮೇಲೆ ಪರೀಕ್ಷೆ. ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇವೆ. ಅವರು ಒಪ್ಪದಿದ್ದರೇ…ಅವರಿಗೆ ಹಿಜಾಬ್ ಹಾಕಿಕೊಂಡು ಬರಲು ಅನುಮತಿ ನೀಡುವುದಿಲ್ಲ. ಬೇಕಿದ್ದರೇ ಅವರಿಗೆ ಆನ್‌ಲೈನ್ ತರಗತಿಗಳನ್ನು ಮಾಡಿ, ಪರೀಕ್ಷೆಗೆ ಅವಕಾಶ ನೀಡುತ್ತೇವೆ. ಅವರಿಗೆ ಇನ್ನೂ ಆಗುವುದಿಲ್ಲ ಎಂದರೆ, ಮುಂದಿನ ವರ್ಷದಿಂದ ಅವರು ಬೇರೆ ಕಾಲೇಜಿಗೆ ಹೋಗಬಹುದು” ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಹಿಜಾಬ್ ಹಾಕಿಕೊಂಡು ಬರುತ್ತಾರೆಂದು ಕಳೆದ ಒಂದು ತಿಂಗಳಿನಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ನಂತಹ ಧಾರ್ಮಿಕ ದಿರಿಸುಗಳನ್ನು college ಗಳಲ್ಲಿಯೂ ಧರಿಸಬೇಕು ಎಂಬ ಹಠ ಏಕೆ ಎನ್ನುವುದೇ ಅರ್ಥ ಆಗೋಲ್ಲ.
    ಸುಮಾರು 50ಕ್ಕೂ ಹೆಚ್ಚು ಮುಸ್ಲಿಂ ಬಾಲಕಿಯರು ಧರಿಸುತ್ತಿರುವ ಸಮ ವಸ್ತ್ರವನ್ನು ಈ ಐದಾರು ಜನ ಏಕೆ ನಿರಾಕರಿಸುತ್ತಿದ್ದಾರೆ , ಇದರ ಹಿನ್ನೆಲೆಯೇನು.

    ಒಟ್ಟಾರೆಯಾಗಿ ಇದೊಂದು ಅನಪೇಕ್ಷಿತ ಮತ್ತು ಗೊಂದಲಮಯ ನಡವಳಿಕೆ ಎನುವುದಂತು ಸತ್ಯ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...