Homeಕರ್ನಾಟಕಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

- Advertisement -
- Advertisement -

ಹಿಜಾಬ್‌ ಧರಿಸಿ ಕಾಲೇಜಿಗೆ ಬರುತ್ತಿರುವ 6 ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಳೆದ 15 ದಿನಗಳಿಂದ ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಲಾಗಿದೆ. ಮಾತ್ರವಲ್ಲದೆ, ಡಿಸೆಂಬರ್‌ 31 ರಿಂದ ಹಾಜರಾತಿಯಲ್ಲಿ ಗೈರು ಎಂದು ನಮೂದಿಸಲಾಗುತ್ತಿದೆ.

ಈ ಕುರಿತು ಬಾಲಕಿಯರ ಪೋಷಕರು ಹಾಗೂ ಮುಸ್ಲಿಂ ಸಂಘಟನೆಗಳ ಮುಖಂಡರು, ಪ್ರಿನ್ಸಿಪಲ್‌ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತನಾಡಿದರೂ ವಿದ್ಯಾರ್ಥಿಗಳಿಗೆ ತರಗತಿಯೊಳಗೆ ಪ್ರವೇಶ ನೀಡಿಲ್ಲ. ಈ ಕುರಿತಂತೆ ಸಿಎಫ್‌ಐ ಹಾಗೂ ಪಿಎಫ್‌ಐ ಸಂಘಟನೆಗಳ ಮುಖ್ಯಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಲೇಜು ಸೂಚಿಸಿರುವ ಸಮವಸ್ತ್ರವನ್ನಷ್ಟೇ ಧರಿಸಿ ಬರುವಂತೆ ಮಾರ್ಗದರ್ಶನ ನೀಡಿದ್ದು, ಹಿಜಾಬ್‌ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಪ್ರವೇಶವಿರುವುದಿಲ್ಲವೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಕಾಲೇಜು ಆಡಳಿತ ತಿಳಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ, ವಾರದ ಹಿಂದೆ ಬಲಪಂಥೀಯ ಕಾರ್ಯಕರ್ತರೊಂದಿಗೆ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲು ಧರಿಸಿ ಮಂಗಳೂರಿನ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿತ್ತು. ಇದೇ ರೀತಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಲಗಡಿ ಗ್ರಾಮದ ಸರ್ಕಾರಿ ಕಾಲೇಜಿನಲ್ಲೂ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು, ಹಿಜಾಬ್ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಅಸ್ಸಾಂ: ಬುರ್ಖಾ ಧರಿಸಿಲ್ಲ ಎಂದು ಆಕ್ಷೇಪ: ಜೀನ್ಸ್ ಧರಿಸಿದ್ದ ಯುವತಿಯನ್ನು ಅಂಗಡಿಯಿಂದ ಹೊರದಬ್ಬಿದ ಮಾಲೀಕ

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವಂತೆ ನಾವು ಸಹ ಕೇಸರಿ ಶಾಲು ಧರಿಸಿ ತರಗತಿಗೆ ಬರುವುದಾಗಿ ವಿದ್ಯಾರ್ಥಿಗಳು ಸಮಜಾಯಿಷಿ ನೀಡಿದ್ದರು. ಆದರೆ, ನಾವು ಸಮವಸ್ತ್ರದ ಜೊತೆಗೆ ನೀಡಲಾಗುವ ದುಪ್ಪಟ್ಟವನ್ನು ಹಿಜಾಬ್ ರೀತಿಯಲ್ಲಿ ಧರಿಸಿಕೊಂಡು ಬರುತ್ತೇವೆ. ಬೇರೆ ವಸ್ತ್ರಗಳನ್ನು ಬಳಸುತ್ತಿಲ್ಲ. ದುಪ್ಪಟ್ಟವನ್ನು ಕೆಲವರು ಹೆಗಲ ಮೇಲೆ ಧರಿಸಿ ಬರುವಂತೆ, ನಾವು ಅದನ್ನು ತಲೆಮೇಲಿಂದ ಹಾಕಿಕೊಳ್ಳುತ್ತೇವೆ ಅಷ್ಟೇ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.

ವಿವಾದದ ಬಗ್ಗೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು, “ವಿದ್ಯಾರ್ಥಿನಿಯರು ತಲೆಗೆ ಶಾಲು ಸುತ್ತಿಕೊಳ್ಳುವುದರ ಬಗ್ಗೆ ಕೇಳುತ್ತಿದ್ದಾರೆ. ಅದು ಅವರ ಧಾರ್ಮಿಕ ಆಚರಣೆ, ಅದರಲ್ಲಿ ತಪ್ಪೇನಿದೆ. ಸಂವಿಧಾನದಲ್ಲಿ ಧಾರ್ಮಿಕ ಆಚರಣೆಯನ್ನು ಮೂಲಭೂತ ಹಕ್ಕಾಗಿ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ಯಾವುದೇ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಹಾಕಿ ಬರುತ್ತಿರಲಿಲ್ಲ ಎಂಬ ವಾದವಿದೆ. ಆದರೆ ಅವರು ಧರಿಸುತ್ತಿರಲಿಲ್ಲ ಎಂದರೆ, ಈಗಿರುವ ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಆಚರಣೆಯ ಹಕ್ಕುಗಳನ್ನು ಕೇಳಬಾರದೇ? ಹೀಗೆಯೆ ಬೇರೆ ವಿದ್ಯಾರ್ಥಿನಿಯರು ಅವರ ಧಾರ್ಮಿಕ ಆಚರಣೆಗಳಾದ ಕೈಗೆ ಬಳೆ ಧರಿಸುವುದು, ಹಣೆಗೆ ಕುಂಕುಮ ಹಚ್ಚುವುದು, ತಲೆಗೆ ಹೂವು ಮುಡಿದುಕೊಳ್ಳುವುದನ್ನು ನಿರಾಕರಿಸಲು ಆಗುತ್ತದೆಯೆ? ಅಥವಾ ಅವರು ಹೊಸದಾಗಿ ಈ ಆಚರಣೆಯನ್ನು ಶುರು ಮಾಡಿದರೆ ತಪ್ಪು ಎನ್ನಲು ಸಾಧ್ಯವೆ?” ಎಂದು ಪ್ರಶ್ನಿಸಿದ್ದಾರೆ.

ಇತ್ತ ಈ ಪರಿಸ್ಥಿತಿ ನಿರ್ವಹಿಸಲು ಚಿಕ್ಕಮಗಳೂರು, ಮಂಗಳೂರು ಕಾಲೇಜು ಪ್ರಾಂಶುಪಾಲರು ಹಿಜಾಬ್ ಹಾಗೂ ಕೇಸರಿ ಶಾಲು ಎರಡನ್ನೂ ಧರಿಸಿ ಕಾಲೇಜಿಗೆ ಬರುವುದನ್ನು ನಿಷೇಧಿಸಿದ್ದು, ಕಾಲೇಜು ಸೂಚಿಸಿರುವ ಸಮವಸ್ತ್ರ ಮಾತ್ರ ಧರಿಸಿ ಬರುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...