Homeಕರ್ನಾಟಕಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

- Advertisement -
- Advertisement -

ಹಿಜಾಬ್‌ ಧರಿಸಿ ಕಾಲೇಜಿಗೆ ಬರುತ್ತಿರುವ 6 ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಳೆದ 15 ದಿನಗಳಿಂದ ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಲಾಗಿದೆ. ಮಾತ್ರವಲ್ಲದೆ, ಡಿಸೆಂಬರ್‌ 31 ರಿಂದ ಹಾಜರಾತಿಯಲ್ಲಿ ಗೈರು ಎಂದು ನಮೂದಿಸಲಾಗುತ್ತಿದೆ.

ಈ ಕುರಿತು ಬಾಲಕಿಯರ ಪೋಷಕರು ಹಾಗೂ ಮುಸ್ಲಿಂ ಸಂಘಟನೆಗಳ ಮುಖಂಡರು, ಪ್ರಿನ್ಸಿಪಲ್‌ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತನಾಡಿದರೂ ವಿದ್ಯಾರ್ಥಿಗಳಿಗೆ ತರಗತಿಯೊಳಗೆ ಪ್ರವೇಶ ನೀಡಿಲ್ಲ. ಈ ಕುರಿತಂತೆ ಸಿಎಫ್‌ಐ ಹಾಗೂ ಪಿಎಫ್‌ಐ ಸಂಘಟನೆಗಳ ಮುಖ್ಯಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಲೇಜು ಸೂಚಿಸಿರುವ ಸಮವಸ್ತ್ರವನ್ನಷ್ಟೇ ಧರಿಸಿ ಬರುವಂತೆ ಮಾರ್ಗದರ್ಶನ ನೀಡಿದ್ದು, ಹಿಜಾಬ್‌ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಪ್ರವೇಶವಿರುವುದಿಲ್ಲವೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಕಾಲೇಜು ಆಡಳಿತ ತಿಳಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ, ವಾರದ ಹಿಂದೆ ಬಲಪಂಥೀಯ ಕಾರ್ಯಕರ್ತರೊಂದಿಗೆ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲು ಧರಿಸಿ ಮಂಗಳೂರಿನ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿತ್ತು. ಇದೇ ರೀತಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಲಗಡಿ ಗ್ರಾಮದ ಸರ್ಕಾರಿ ಕಾಲೇಜಿನಲ್ಲೂ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು, ಹಿಜಾಬ್ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಅಸ್ಸಾಂ: ಬುರ್ಖಾ ಧರಿಸಿಲ್ಲ ಎಂದು ಆಕ್ಷೇಪ: ಜೀನ್ಸ್ ಧರಿಸಿದ್ದ ಯುವತಿಯನ್ನು ಅಂಗಡಿಯಿಂದ ಹೊರದಬ್ಬಿದ ಮಾಲೀಕ

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವಂತೆ ನಾವು ಸಹ ಕೇಸರಿ ಶಾಲು ಧರಿಸಿ ತರಗತಿಗೆ ಬರುವುದಾಗಿ ವಿದ್ಯಾರ್ಥಿಗಳು ಸಮಜಾಯಿಷಿ ನೀಡಿದ್ದರು. ಆದರೆ, ನಾವು ಸಮವಸ್ತ್ರದ ಜೊತೆಗೆ ನೀಡಲಾಗುವ ದುಪ್ಪಟ್ಟವನ್ನು ಹಿಜಾಬ್ ರೀತಿಯಲ್ಲಿ ಧರಿಸಿಕೊಂಡು ಬರುತ್ತೇವೆ. ಬೇರೆ ವಸ್ತ್ರಗಳನ್ನು ಬಳಸುತ್ತಿಲ್ಲ. ದುಪ್ಪಟ್ಟವನ್ನು ಕೆಲವರು ಹೆಗಲ ಮೇಲೆ ಧರಿಸಿ ಬರುವಂತೆ, ನಾವು ಅದನ್ನು ತಲೆಮೇಲಿಂದ ಹಾಕಿಕೊಳ್ಳುತ್ತೇವೆ ಅಷ್ಟೇ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.

ವಿವಾದದ ಬಗ್ಗೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು, “ವಿದ್ಯಾರ್ಥಿನಿಯರು ತಲೆಗೆ ಶಾಲು ಸುತ್ತಿಕೊಳ್ಳುವುದರ ಬಗ್ಗೆ ಕೇಳುತ್ತಿದ್ದಾರೆ. ಅದು ಅವರ ಧಾರ್ಮಿಕ ಆಚರಣೆ, ಅದರಲ್ಲಿ ತಪ್ಪೇನಿದೆ. ಸಂವಿಧಾನದಲ್ಲಿ ಧಾರ್ಮಿಕ ಆಚರಣೆಯನ್ನು ಮೂಲಭೂತ ಹಕ್ಕಾಗಿ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ಯಾವುದೇ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಹಾಕಿ ಬರುತ್ತಿರಲಿಲ್ಲ ಎಂಬ ವಾದವಿದೆ. ಆದರೆ ಅವರು ಧರಿಸುತ್ತಿರಲಿಲ್ಲ ಎಂದರೆ, ಈಗಿರುವ ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಆಚರಣೆಯ ಹಕ್ಕುಗಳನ್ನು ಕೇಳಬಾರದೇ? ಹೀಗೆಯೆ ಬೇರೆ ವಿದ್ಯಾರ್ಥಿನಿಯರು ಅವರ ಧಾರ್ಮಿಕ ಆಚರಣೆಗಳಾದ ಕೈಗೆ ಬಳೆ ಧರಿಸುವುದು, ಹಣೆಗೆ ಕುಂಕುಮ ಹಚ್ಚುವುದು, ತಲೆಗೆ ಹೂವು ಮುಡಿದುಕೊಳ್ಳುವುದನ್ನು ನಿರಾಕರಿಸಲು ಆಗುತ್ತದೆಯೆ? ಅಥವಾ ಅವರು ಹೊಸದಾಗಿ ಈ ಆಚರಣೆಯನ್ನು ಶುರು ಮಾಡಿದರೆ ತಪ್ಪು ಎನ್ನಲು ಸಾಧ್ಯವೆ?” ಎಂದು ಪ್ರಶ್ನಿಸಿದ್ದಾರೆ.

ಇತ್ತ ಈ ಪರಿಸ್ಥಿತಿ ನಿರ್ವಹಿಸಲು ಚಿಕ್ಕಮಗಳೂರು, ಮಂಗಳೂರು ಕಾಲೇಜು ಪ್ರಾಂಶುಪಾಲರು ಹಿಜಾಬ್ ಹಾಗೂ ಕೇಸರಿ ಶಾಲು ಎರಡನ್ನೂ ಧರಿಸಿ ಕಾಲೇಜಿಗೆ ಬರುವುದನ್ನು ನಿಷೇಧಿಸಿದ್ದು, ಕಾಲೇಜು ಸೂಚಿಸಿರುವ ಸಮವಸ್ತ್ರ ಮಾತ್ರ ಧರಿಸಿ ಬರುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...