Homeಕರ್ನಾಟಕಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

- Advertisement -
- Advertisement -

ಹಿಜಾಬ್‌ ಧರಿಸಿ ಕಾಲೇಜಿಗೆ ಬರುತ್ತಿರುವ 6 ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಳೆದ 15 ದಿನಗಳಿಂದ ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಲಾಗಿದೆ. ಮಾತ್ರವಲ್ಲದೆ, ಡಿಸೆಂಬರ್‌ 31 ರಿಂದ ಹಾಜರಾತಿಯಲ್ಲಿ ಗೈರು ಎಂದು ನಮೂದಿಸಲಾಗುತ್ತಿದೆ.

ಈ ಕುರಿತು ಬಾಲಕಿಯರ ಪೋಷಕರು ಹಾಗೂ ಮುಸ್ಲಿಂ ಸಂಘಟನೆಗಳ ಮುಖಂಡರು, ಪ್ರಿನ್ಸಿಪಲ್‌ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತನಾಡಿದರೂ ವಿದ್ಯಾರ್ಥಿಗಳಿಗೆ ತರಗತಿಯೊಳಗೆ ಪ್ರವೇಶ ನೀಡಿಲ್ಲ. ಈ ಕುರಿತಂತೆ ಸಿಎಫ್‌ಐ ಹಾಗೂ ಪಿಎಫ್‌ಐ ಸಂಘಟನೆಗಳ ಮುಖ್ಯಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಲೇಜು ಸೂಚಿಸಿರುವ ಸಮವಸ್ತ್ರವನ್ನಷ್ಟೇ ಧರಿಸಿ ಬರುವಂತೆ ಮಾರ್ಗದರ್ಶನ ನೀಡಿದ್ದು, ಹಿಜಾಬ್‌ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಪ್ರವೇಶವಿರುವುದಿಲ್ಲವೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಕಾಲೇಜು ಆಡಳಿತ ತಿಳಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ, ವಾರದ ಹಿಂದೆ ಬಲಪಂಥೀಯ ಕಾರ್ಯಕರ್ತರೊಂದಿಗೆ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲು ಧರಿಸಿ ಮಂಗಳೂರಿನ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿತ್ತು. ಇದೇ ರೀತಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಲಗಡಿ ಗ್ರಾಮದ ಸರ್ಕಾರಿ ಕಾಲೇಜಿನಲ್ಲೂ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು, ಹಿಜಾಬ್ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಅಸ್ಸಾಂ: ಬುರ್ಖಾ ಧರಿಸಿಲ್ಲ ಎಂದು ಆಕ್ಷೇಪ: ಜೀನ್ಸ್ ಧರಿಸಿದ್ದ ಯುವತಿಯನ್ನು ಅಂಗಡಿಯಿಂದ ಹೊರದಬ್ಬಿದ ಮಾಲೀಕ

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವಂತೆ ನಾವು ಸಹ ಕೇಸರಿ ಶಾಲು ಧರಿಸಿ ತರಗತಿಗೆ ಬರುವುದಾಗಿ ವಿದ್ಯಾರ್ಥಿಗಳು ಸಮಜಾಯಿಷಿ ನೀಡಿದ್ದರು. ಆದರೆ, ನಾವು ಸಮವಸ್ತ್ರದ ಜೊತೆಗೆ ನೀಡಲಾಗುವ ದುಪ್ಪಟ್ಟವನ್ನು ಹಿಜಾಬ್ ರೀತಿಯಲ್ಲಿ ಧರಿಸಿಕೊಂಡು ಬರುತ್ತೇವೆ. ಬೇರೆ ವಸ್ತ್ರಗಳನ್ನು ಬಳಸುತ್ತಿಲ್ಲ. ದುಪ್ಪಟ್ಟವನ್ನು ಕೆಲವರು ಹೆಗಲ ಮೇಲೆ ಧರಿಸಿ ಬರುವಂತೆ, ನಾವು ಅದನ್ನು ತಲೆಮೇಲಿಂದ ಹಾಕಿಕೊಳ್ಳುತ್ತೇವೆ ಅಷ್ಟೇ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.

ವಿವಾದದ ಬಗ್ಗೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು, “ವಿದ್ಯಾರ್ಥಿನಿಯರು ತಲೆಗೆ ಶಾಲು ಸುತ್ತಿಕೊಳ್ಳುವುದರ ಬಗ್ಗೆ ಕೇಳುತ್ತಿದ್ದಾರೆ. ಅದು ಅವರ ಧಾರ್ಮಿಕ ಆಚರಣೆ, ಅದರಲ್ಲಿ ತಪ್ಪೇನಿದೆ. ಸಂವಿಧಾನದಲ್ಲಿ ಧಾರ್ಮಿಕ ಆಚರಣೆಯನ್ನು ಮೂಲಭೂತ ಹಕ್ಕಾಗಿ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ಯಾವುದೇ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಹಾಕಿ ಬರುತ್ತಿರಲಿಲ್ಲ ಎಂಬ ವಾದವಿದೆ. ಆದರೆ ಅವರು ಧರಿಸುತ್ತಿರಲಿಲ್ಲ ಎಂದರೆ, ಈಗಿರುವ ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಆಚರಣೆಯ ಹಕ್ಕುಗಳನ್ನು ಕೇಳಬಾರದೇ? ಹೀಗೆಯೆ ಬೇರೆ ವಿದ್ಯಾರ್ಥಿನಿಯರು ಅವರ ಧಾರ್ಮಿಕ ಆಚರಣೆಗಳಾದ ಕೈಗೆ ಬಳೆ ಧರಿಸುವುದು, ಹಣೆಗೆ ಕುಂಕುಮ ಹಚ್ಚುವುದು, ತಲೆಗೆ ಹೂವು ಮುಡಿದುಕೊಳ್ಳುವುದನ್ನು ನಿರಾಕರಿಸಲು ಆಗುತ್ತದೆಯೆ? ಅಥವಾ ಅವರು ಹೊಸದಾಗಿ ಈ ಆಚರಣೆಯನ್ನು ಶುರು ಮಾಡಿದರೆ ತಪ್ಪು ಎನ್ನಲು ಸಾಧ್ಯವೆ?” ಎಂದು ಪ್ರಶ್ನಿಸಿದ್ದಾರೆ.

ಇತ್ತ ಈ ಪರಿಸ್ಥಿತಿ ನಿರ್ವಹಿಸಲು ಚಿಕ್ಕಮಗಳೂರು, ಮಂಗಳೂರು ಕಾಲೇಜು ಪ್ರಾಂಶುಪಾಲರು ಹಿಜಾಬ್ ಹಾಗೂ ಕೇಸರಿ ಶಾಲು ಎರಡನ್ನೂ ಧರಿಸಿ ಕಾಲೇಜಿಗೆ ಬರುವುದನ್ನು ನಿಷೇಧಿಸಿದ್ದು, ಕಾಲೇಜು ಸೂಚಿಸಿರುವ ಸಮವಸ್ತ್ರ ಮಾತ್ರ ಧರಿಸಿ ಬರುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...