Homeಕರ್ನಾಟಕಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

- Advertisement -
- Advertisement -

ಉಡುಪಿ ಜಿಲ್ಲೆಯ ಸರಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ತಲೆಗೆ ಸ್ಕಾರ್ಫ್ ಹಾಕದಂತೆ ನಿರ್ಬಂಧ ಹೇರಿರುವುದರ ವಿರುದ್ಧ ಆರು ವಿದ್ಯಾರ್ಥಿನಿಯರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಲೇಜಿನಲ್ಲಿ ತಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರೆ.

ಈ ಬಗ್ಗೆ ವಿಡಿಯೊವೊಂದರಲ್ಲಿ ಮಾತನಾಡಿರುವ ಪ್ರತಿಭಟನಾ ನಿರತ ವಿದ್ಯಾರ್ಥಿನಿಯೊಬ್ಬರು, “ಕಳೆದ ವರ್ಷ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಹಾಕಿಕೊಂಡು ಬರುತ್ತಿದ್ದರು. ಆದರೆ ನಮಗೆ ಅವಕಾಶ ನೀಡುತ್ತಿಲ್ಲ. ನಮ್ಮ ಮೇಲೆ ತುಂಬಾ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅದರ ಬಗ್ಗೆ ಹೇಳಲು ತುಂಬಾ ಇದೆ. ಆದರೆ ನಮಗೆ ನಮ್ಮ ಹಕ್ಕುಗಳು ಬೇಕು. ತಲೆಗೆ ಸ್ಕಾರ್ಫ್ ಹಾಕಲು ಅವಕಾಶ ನೀಡಿದರೆ ಸಾಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

“ಕಳೆದ ಮೂರು ದಿನದಿಂದ ಹಿಜಾಬ್ ಹಾಕಿ ಬರುತ್ತಿದ್ದೇವೆ. ನಮಗೆ ಹಾಜರಾತಿ ನೀಡುತ್ತಿಲ್ಲ ಮತ್ತು ತರಗತಿಗೆ ಪ್ರವೇಶ ಕೊಡುತ್ತಿಲ್ಲ. ಹಾಗಾಗಿ ಇಲ್ಲೇ ಮೂರು ದಿನದಿಂದ ಕೂತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ, “ಹೆತ್ತವರನ್ನು ಕರೆದುಕೊಂಡು ಬನ್ನಿ ಎಂದು ಹೇಳುತ್ತಿದ್ದಾರೆ. ಆದರೆ ಹೆತ್ತವರು ಕಳೆದ ಮೂರು ದಿನದಿಂದ ಬರುತ್ತಿದ್ದರೂ, ಅವರೊಂದಿಗೆ ಮಾತನಾಡುತ್ತಿಲ್ಲ. ನಮ್ಮ ಹೆತ್ತವರು ತಮ್ಮ ಕೆಲಸವನ್ನು ಬಿಟ್ಟು ಇಲ್ಲಿಗೆ ಬರುತ್ತಿದ್ದರೂ, ಅವರೊಂದಿಗೆ ಮಾತನಾಡುತ್ತಿಲ್ಲ” ಎಂದು ದೂರಿದ್ದಾರೆ.

“ನಾವು ಬುರ್ಖಾವನ್ನು ಕ್ಯಾಂಪಸ್‌ನೊಳಗೆ ಬಿಡುತ್ತೇವೆ. ಆದರೆ ತರಗತಿಗೆ ಹಾಜರಾಗಲು ಅವರು ಸ್ಕಾರ್ಫ್‌ ಅನ್ನು ತೆಗೆದುಹಾಕಬೇಕಾಗುತ್ತದೆ” ಎಂದು ಪ್ರಾಂಶುಪಾಲ ರುದ್ರೇಗೌಡ ಹೇಳಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ:ಬಿಹಾರ: ಯುವ ಪತ್ರಕರ್ತನ ಅಪಹರಿಸಿ-ಕೊಲೆ; ಮಹಿಳೆ ಸೇರಿ 6 ಜನರ ಬಂಧನ

ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿತ್ತಾದರೂ, ಅವರು ಸಭೆಯಲ್ಲಿ ಇರುವುದಾಗಿ ತಿಳಿಸಿದ್ದಾರೆ. ಅವರು ಮತ್ತೇ ಸಂಪರ್ಕಕ್ಕೆ ಸಿಕ್ಕಿದ ಕೂಡಲೆ ಅವರ ಹೇಳಿಕೆಯನ್ನು ನಾವು ಅಪ್‌‌ಲೋಡ್‌ ಮಾಡುತ್ತೇವೆ.

ವಿವಾದದ ಬಗ್ಗೆ ಬಗ್ಗೆ ನಾನುಗೌರಿ.ಕಾಂ ಜೊತೆ ಸಾಮಾಜಿಕ ಕಾರ್ಯಕರ್ತರೊಬ್ಬರು, “ವಿದ್ಯಾರ್ಥಿನಿಯರು ತಲೆಗೆ ಶಾಲು ಸುತ್ತಿಕೊಳ್ಳುವುದರ ಬಗ್ಗೆ ಕೇಳುತ್ತಿದ್ದಾರೆ. ಅದು ಅವರ ಧಾರ್ಮಿಕ ಆಚರಣೆ, ಅದರಲ್ಲಿ ತಪ್ಪೇನಿದೆ. ಸಂವಿಧಾನದಲ್ಲಿ ಧಾರ್ಮಿಕ ಆಚರಣೆಯನ್ನು ಮೂಲಭೂತ ಹಕ್ಕಾಗಿ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ಯಾವುದೇ ವಿದ್ಯಾರ್ಥಿನಿಯರು ತಲೆಗೆ ಸ್ಕಾರ್ಫ್ ಹಾಕಿ ಬರುತ್ತಿರಲಿಲ್ಲ ಎಂಬ ವಾದವಿದೆ. ಆದರೆ ಅವರು ಧರಿಸುತ್ತಿರಲಿಲ್ಲ ಎಂದರೆ, ಈಗಿರುವ ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಆಚರಣೆಯ ಹಕ್ಕುಗಳನ್ನು ಕೇಳಬಾರದೇ? ಹೀಗೆಯೆ ಬೇರೆ ವಿದ್ಯಾರ್ಥಿನಿಯರು ಅವರ ಧಾರ್ಮಿಕ ಆಚರಣೆಗಳಾದ ಕೈಗೆ ಬಳೆ ಧರಿಸುವುದು, ಹಣೆಗೆ ಕುಂಕುಮ ಹಚ್ಚುವುದು, ತಲೆಗೆ ಹೂವು ಮುಡಿದುಕೊಳ್ಳುವುದನ್ನು ನಿರಾಕರಿಸಲು ಆಗುತ್ತದೆಯೆ? ಅಥವಾ ಅವರು ಹೊಸದಾಗಿ ಈ ಆಚರಣೆಯನ್ನು ಶುರು ಮಾಡಿದರೆ ತಪ್ಪು ಎನ್ನಲು ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಎಲೆಮರೆಯಿಂದ: ಬ್ಯಾರಿ ಮಹಿಳಾ ಶಿಕ್ಷಣ ಸಾಗಿ ಬಂದ ಕವಲುದಾರಿ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...