Homeಕರ್ನಾಟಕಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

ಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

- Advertisement -
- Advertisement -

ಎಲ್ಲಾ ಮಠ ಮಂದಿರಗಳು ಮುಸ್ಲಿಮರನ್ನು ಹಿಂದೂಗಳಾಗಿ ಮತಾಂತರ ಮಾಡಬೇಕು ಎಂದು ಇತ್ತೀಚೆಗೆ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ಬಿಜೆಪಿ ಯುವಮೋರ್ಚಾದ ರಾಷ್ಟ್ರಾಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ತಮ್ಮ ಹೇಳಿಕೆಗಳಿಗೆ ಬೇಷರತ್‌ ಕ್ಷಮೆ ಕೋರಿದ್ದು, ಹೇಳಿಕೆಗಳನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಅವರು ಉಡುಪಿಯ ಕೃಷ್ಣ ಮಠದಲ್ಲಿ ನಡೆದ ‘ವಿಶ್ವಾರ್ಪಣಮ್’ ಸಮಾರಂಭದಲ್ಲಿ ಮಾತನಾಡುತ್ತಾ, “ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿಯನ್ನು ನಿಗದಿ ಪಡಿಸಿ ಬೇರೆ ಧರ್ಮದವರನ್ನು ವಾಪಾಸ್ಸು ಹಿಂದು ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಮಾತ್ರವಲ್ಲ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಈ ಹೇಳಿಕೆ ನಂತರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಭಾರಿ ವಿವಾದ ಸೃಷ್ಟಿಸಿತ್ತು. ಇದೀಗ ಅವರು ಸೋಮವಾರದಂದು ತಮ್ಮ ಹೇಳಿಕೆಯ ಬಗ್ಗೆ ಅವರ ವಿಷಾಧ ವ್ಯಕ್ತಪಡಿಸಿದ್ದು, ಹೇಳಿಕೆಯನ್ನುವ ಬೇಷರತ್ತಾಗಿ ಹಿಂಪಡೆಯುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದೆ. ತಪ್ಪಿಸಬಹುದಾಗಿದ್ದ ವಿವಾದವನ್ನು ಉಂಟುಮಾಡಿದ ನನ್ನ ಭಾಷಣದ ಕೆಲವು ಹೇಳಿಕೆಗಳಿಗಾಗಿ ವಿಷಾದಿಸುತ್ತೇನೆ. ಹಾಗಾಗಿ ಈ ಹೇಳಿಕೆಗಳನ್ನು ಬೇಷರತ್ತಾಗಿ ಹಿಂಪಡೆಯುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಅವರು ಉಡುಪಿಯಲ್ಲಿ ಮಾತನಾಡುತ್ತಾ, “ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿ ನಿಗದಿ ಪಡಿಸಿ, ವಿವಿಧ ಕಾರಣಕ್ಕೆ ಹಿಂದೂ ಧರ್ಮದಿಂದ ಮತಾಂತರ ಆದವರನ್ನು ವಾಪಾಸ್ಸು ಹಿಂದು ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಅಲ್ಲದೆ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿದೆ. ಇದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿದ್ದರು.

“ಟಿಪ್ಪು ಜಯಂತಿಯ ದಿನ ಮುಸ್ಲಿಮರನ್ನು ಮಠ ಮಂದಿರಗಳು ವಾಪಾಸ್ಸು ಹಿಂದು ಧರ್ಮಕ್ಕೆ ಕರೆದು ಕೊಂಡು ಬರಬೇಕು. ಮುಸ್ಲಿಮ್ ಕ್ರಿಶ್ಚಿಯನ್ನರನ್ನು ವಾಪಾಸ್ಸು ಹಿಂದು ಧಮಕ್ಕೆ ಕರೆತರುವುದು ನಮೆಲ್ಲರ ಜವಾಬ್ದಾರಿ. ನಾವು ಮೊಘಲರು ಮತ್ತು ಬಿಟ್ರಿಷರನ್ನು ಹೊರಗಡೆ ಓಡಿಸಿದ್ದೇವೆಯೇ ಹೊರತು ಅವರು ಬಿಟ್ಟು ಹೋದ ಸಿದ್ಧಾಂತವನ್ನಲ್ಲ. ಅದನ್ನು ಕಿತ್ತು ಹಾಕಿದರೆ ಮಾತ್ರ ನಮ್ಮ ವಿಜಯ ಸಂಪೂರ್ಣ ಆಗುತ್ತದೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ:ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜನಪ್ರತಿನಿಧಿಗಳು ವೇದಿಕೆಯಲ್ಲಿ ಇರುವವರನ್ನು ಮೆಚ್ಚಿಸಲು ಸಡಿಲವಾಗಿ ಬಾಯಿ ಹರಿಬಿಡದೆ ಜಾಗರೂಕತೆಯಿಂದ ಮಾತಾಡಬೇಕು.‌ ಘನತೆ ಗಾಂಭೀರ್ಯ ಮುಂತಾದ ನಾಯಕತ್ವದ ಗುಣಗಳಿಂದ ಮುತ್ಸದ್ದಿ ಎನಿಸಿಕೊಳ್ಳಬೇಕು. ಈಗ ನಮ್ಮ ದೇಶದಲ್ಲಿ ಮುತ್ಸದ್ದಿಗಳ ಕೊರತೆಯಿದೆ. ಅದು ನಮ್ಮ ದೌರ್ಭಾಗ್ಯ.

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...