Homeಕರ್ನಾಟಕಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

ಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

- Advertisement -
- Advertisement -

ಎಲ್ಲಾ ಮಠ ಮಂದಿರಗಳು ಮುಸ್ಲಿಮರನ್ನು ಹಿಂದೂಗಳಾಗಿ ಮತಾಂತರ ಮಾಡಬೇಕು ಎಂದು ಇತ್ತೀಚೆಗೆ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ಬಿಜೆಪಿ ಯುವಮೋರ್ಚಾದ ರಾಷ್ಟ್ರಾಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ತಮ್ಮ ಹೇಳಿಕೆಗಳಿಗೆ ಬೇಷರತ್‌ ಕ್ಷಮೆ ಕೋರಿದ್ದು, ಹೇಳಿಕೆಗಳನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಅವರು ಉಡುಪಿಯ ಕೃಷ್ಣ ಮಠದಲ್ಲಿ ನಡೆದ ‘ವಿಶ್ವಾರ್ಪಣಮ್’ ಸಮಾರಂಭದಲ್ಲಿ ಮಾತನಾಡುತ್ತಾ, “ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿಯನ್ನು ನಿಗದಿ ಪಡಿಸಿ ಬೇರೆ ಧರ್ಮದವರನ್ನು ವಾಪಾಸ್ಸು ಹಿಂದು ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಮಾತ್ರವಲ್ಲ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಈ ಹೇಳಿಕೆ ನಂತರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಭಾರಿ ವಿವಾದ ಸೃಷ್ಟಿಸಿತ್ತು. ಇದೀಗ ಅವರು ಸೋಮವಾರದಂದು ತಮ್ಮ ಹೇಳಿಕೆಯ ಬಗ್ಗೆ ಅವರ ವಿಷಾಧ ವ್ಯಕ್ತಪಡಿಸಿದ್ದು, ಹೇಳಿಕೆಯನ್ನುವ ಬೇಷರತ್ತಾಗಿ ಹಿಂಪಡೆಯುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದೆ. ತಪ್ಪಿಸಬಹುದಾಗಿದ್ದ ವಿವಾದವನ್ನು ಉಂಟುಮಾಡಿದ ನನ್ನ ಭಾಷಣದ ಕೆಲವು ಹೇಳಿಕೆಗಳಿಗಾಗಿ ವಿಷಾದಿಸುತ್ತೇನೆ. ಹಾಗಾಗಿ ಈ ಹೇಳಿಕೆಗಳನ್ನು ಬೇಷರತ್ತಾಗಿ ಹಿಂಪಡೆಯುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಅವರು ಉಡುಪಿಯಲ್ಲಿ ಮಾತನಾಡುತ್ತಾ, “ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿ ನಿಗದಿ ಪಡಿಸಿ, ವಿವಿಧ ಕಾರಣಕ್ಕೆ ಹಿಂದೂ ಧರ್ಮದಿಂದ ಮತಾಂತರ ಆದವರನ್ನು ವಾಪಾಸ್ಸು ಹಿಂದು ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಅಲ್ಲದೆ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿದೆ. ಇದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿದ್ದರು.

“ಟಿಪ್ಪು ಜಯಂತಿಯ ದಿನ ಮುಸ್ಲಿಮರನ್ನು ಮಠ ಮಂದಿರಗಳು ವಾಪಾಸ್ಸು ಹಿಂದು ಧರ್ಮಕ್ಕೆ ಕರೆದು ಕೊಂಡು ಬರಬೇಕು. ಮುಸ್ಲಿಮ್ ಕ್ರಿಶ್ಚಿಯನ್ನರನ್ನು ವಾಪಾಸ್ಸು ಹಿಂದು ಧಮಕ್ಕೆ ಕರೆತರುವುದು ನಮೆಲ್ಲರ ಜವಾಬ್ದಾರಿ. ನಾವು ಮೊಘಲರು ಮತ್ತು ಬಿಟ್ರಿಷರನ್ನು ಹೊರಗಡೆ ಓಡಿಸಿದ್ದೇವೆಯೇ ಹೊರತು ಅವರು ಬಿಟ್ಟು ಹೋದ ಸಿದ್ಧಾಂತವನ್ನಲ್ಲ. ಅದನ್ನು ಕಿತ್ತು ಹಾಕಿದರೆ ಮಾತ್ರ ನಮ್ಮ ವಿಜಯ ಸಂಪೂರ್ಣ ಆಗುತ್ತದೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ:ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜನಪ್ರತಿನಿಧಿಗಳು ವೇದಿಕೆಯಲ್ಲಿ ಇರುವವರನ್ನು ಮೆಚ್ಚಿಸಲು ಸಡಿಲವಾಗಿ ಬಾಯಿ ಹರಿಬಿಡದೆ ಜಾಗರೂಕತೆಯಿಂದ ಮಾತಾಡಬೇಕು.‌ ಘನತೆ ಗಾಂಭೀರ್ಯ ಮುಂತಾದ ನಾಯಕತ್ವದ ಗುಣಗಳಿಂದ ಮುತ್ಸದ್ದಿ ಎನಿಸಿಕೊಳ್ಳಬೇಕು. ಈಗ ನಮ್ಮ ದೇಶದಲ್ಲಿ ಮುತ್ಸದ್ದಿಗಳ ಕೊರತೆಯಿದೆ. ಅದು ನಮ್ಮ ದೌರ್ಭಾಗ್ಯ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...