Homeಸಾಮಾಜಿಕಈ ವಯಸ್ಸಿನಲ್ಲಿ ಇಂಥ ಆಪಾದನೆ ಬರಬಾರದಿತ್ತು!

ಈ ವಯಸ್ಸಿನಲ್ಲಿ ಇಂಥ ಆಪಾದನೆ ಬರಬಾರದಿತ್ತು!

- Advertisement -
- Advertisement -

ಕರ್ನಾಟಕದ ಜನಸ್ತೋಮಕ್ಕೆ ಅನ್ನ ನೀರು ವಸತಿ ಮತ್ತು ಉದ್ಯೋಗ ನೀಡುವ ಜವಾಬ್ದಾರಿ ಹೊತ್ತವರಂತೆ ಬೊಬ್ಬಿರಿಯುತ್ತಿದ್ದ ಅಷ್ಟಮಠಗಳ ಯತಿಗಳ ಕರ್ಮಕಾಂಡ ಅಷ್ಟ ದಿಕ್ಕಿಗೂ ಹರಡುತ್ತಿದೆಯಲ್ಲಾ.
ಕರ್ಮಕಾಂಡದ ರುವಾರಿಯಾಗಿದ್ದ ಶಿರೂರು ಸ್ವಾಮಿ ನಿಜಕ್ಕೂ ಈ ಸಮಯದಲ್ಲಿ ಹುತಾತ್ಮರಂತೆ ಕಾಣುತ್ತಿದ್ದಾರೆ. ಸದರಿ ಸ್ವಾಮಿಯನ್ನು ಏಳನೇ ವರ್ಷಕ್ಕೆ ಸನ್ಯಾಸಿ ಮಾಡಲಾಗಿತ್ತು ಪ್ರಾಪ್ತವಯಸ್ಸಿಗೆ ಬಂದ ಶಿರೂರು ಯಾವ ಎಗ್ಗೂಇಲ್ಲದೆ ಪಂಚೇಂದ್ರಿಯಗಳನ್ನ ಧಾರಾಳವಾಗಿಯೇ ಬಳಸತೊಡಗಿದ್ದಲ್ಲದೆ ತನ್ನ ಬಗ್ಗೆ ಮಾತನಾಡಲು ಮುಂದಾದ ಇತರ ಸ್ವಾಮಿಗಳ ಜಾತಕವನ್ನೇ ಬಿಚ್ಚಿಡುವುದಾಗಿ ಬೆದರಿಕೆ ಹಾಕಿದ್ದರಂತಲ್ಲಾ. ಹಾಗೆ ನೋಡಿದರೆ ಇದು ಬೆದರಿಕೆಯಲ್ಲ ನಿಮ್ಮ ಕೆಲಸವನ್ನ ನೀವು ಮಾಡಿ ನನ್ನ ಕೆಲಸವನ್ನ ನಾನು ಮಾಡುತ್ತೇನೆ ಎಂದ ಶಿರೂರು ಎಲ್ಲವನ್ನ ಕಂಠಪೂರ್ತಿ ಅನುಭವಿಸಿದರಂತಲ್ಲಾ. ಅಂತೂ ಬುದ್ದಿ ಮತ್ತು ಭಾಷೆಯ ಬಗ್ಗೆ ನಿಯಂತ್ರಣ ಕಳೆದುಕೊಂಡ ಶಿರೂರು ಅಷ್ಟಮಠಕ್ಕೆ ಅನಿಷ್ಟವಾದ ಕೂಡಲೇ ಅವರ ಕೊಲೆಯಾಯ್ತಂತಲ್ಲಾ ಥೂತ್ತೇರಿ.

*****

ಶಿರೂರು ಸ್ವಾಮಿಯ ಅಕ್ರಮ ಸಂತಾನದಂತಿರುವ ಕೆಲವೇ ಕೆಲವು ಮಾಧ್ಯಮದ ಮುಸಂಡಿಗಳು ಶಿರೂರನ ಬಾಲಲೀಲೆ, ಪ್ರಾಪ್ತ ವಯಸ್ಸಿನ ಬಾನಗಡಿ ಹಾಗೂ ಸ್ವಾಮಿಯಾದ ನಂತರ ನಡೆಸಿದ ಕಾಮಕ್ರೀಡೆಯನ್ನ ಮರೆಮಾಚಿ ರಮ್ಯಾಶೆಟ್ಟಿ ಎಂಬುವಳು ಮಾಯಾಂಗನೆ, ವಿಷಕನ್ಯೆ, ನಯವಂಚಕಿ ಶಿರೂರು ಶಿರಭಾಗದಲ್ಲಿದ್ದ ಸರವನ್ನು ಲಫಟಾಯಿಸಿದ್ದಾಳೆ. ಕೈ ಕಡಗವನ್ನು ಕಿತ್ತುಕೊಂಡಿದ್ದಾಳೆ. ಇವೆಲ್ಲವನ್ನ ದೋಚಿಕೊಂಡು ಹೋಗುವ ಮುನ್ನ ಪಾಪ ದೇವರಂತಹ ಶಿರೂರು ಸ್ವಾಮಿಗೆ ವಿಷಪ್ರಾಶನ ಮಾಡಿಸಿರಲುಬಹುದು. ಆಕೆ ಮುಸ್ಲಿಂ ಹೆಣ್ಣುಮಕ್ಕಳು ಧರಿಸುವಂತಹ ಬುರ್ಖಾ ಧರಿಸಿದ್ದಳು ಎಂದರೆ, ಪಾತಕಕೃತ್ಯ ನಡೆಸಿರುವುದಕ್ಕೆ ಇನ್ನಾವ ಸಾಕ್ಷಿ ಬೇಕು ಎಂಬಂತೆ ಬಿತ್ತರಿಸುತ್ತ ಕೂತಿವೆಯಂತಲ್ಲಾ ಥೂತ್ತೇರಿ.

*****

ಅಷ್ಟಮಠದ ಯತಿಗಳಲ್ಲೇ ಸರ್ವಶ್ರೇಷ್ಠರೂ, ಮನುಕುಲತಿಲಕರೂ ಮತ್ತು ಕೃಷ್ಣನ ಭಾಗಕ್ಕೆ ವಾಸುದೇವನಂತಿರುವ ಪೇಜಾವರ ಶ್ರೀಗಳನ್ನ ಮಾತನಾಡಿಸಿದರೆ ಹೇಗೆ ಅನ್ನಿಸಿ ಫೋನ್ ಮಾಡಲಾಗಿ ರಿಂಗಾಯ್ತು, ರಿಂಗ್ ಟೋನ್…… ಕೃಷ್ಣ ನೀ ಬೇಗನೇ ಬಾರೋ, ಬೇಗನೆ ಬಂದು ಮುಕ್ತಿಯ ತೋರೋ. ಕೃಷ್ಣಾ………….. ಹಲೋ
“ನಮಸ್ಕಾರ ಸ್ವಾಮೀಜಿ ನಾನು ಯಾಹೂ.”
“ಯಾರ ಬಳಿಯಲ್ಲೂ ಮಾತನಾಡಲು ಸಮಯವಿಲ್ಲ.”
ಒಂದೇ ನಿಮಿಷ ಸ್ವಾಮಿ.”
“ಸಾಧ್ಯವಿಲ್ಲ.”
“ಹಾಗಾದ್ರೆ ನಮ್ಮ ಮನಸ್ಸಿಗೆ ಬಂದದ್ದನ್ನ ಬರಕೊಳ್ತೀವಿ ಸ್ವಾಮಿ.”
“ಎರಡೇ ಮಾತಲ್ಲಿ ಕೇಳಿ.”
“ಧರ್ಮರಾಯ ಇದ್ದ ಜಾಗದಲ್ಲಿ ಮಳೆ ಬೆಳೆ ಜೊತೆಗೆ ಅಪರಾಧಗಳು ನಡೀತಿರಲಿಲ್ಲ. ಹಾಗೇ ನಮ್ಮ ಪೇಜಾವರರು ನೆಲೆಸಿದ ಜಾಗ ಅಂದುಕೊಂಡಿದ್ದೋ.”
“ಆ ನಂಬಿಕೆಗೆ ಈಗ ಯಾವ ತೊಂದರೆಯೂ ಆಗಿಲ್ಲ.”
“ಇದೇನು ಸ್ವಾಮಿ ಹೀಗಂತಿರಿ, ಪ್ರಳಯದಂತಹ ಮಳೆ ಆಗಿದೆ, ಶಿರೂರು ಸ್ವಾಮಿ ಕೊಲೆಯಾಗಿದೆ.”
“ಅದನ್ನ ಕೊಲೆ ಅಂತ ಈಗಲೇ ಹೇಳಲು ಬರುವುದಿಲ್ಲ.”
“ನಂತರ ಹೇಳಬಹುದಾ.”
“ನೋಡಿ ಇವರೆ ಈಗ ನಾವು ಯಾವ ವಿಷಯ ಕುರಿತು ಏನೂ ಹೇಳುವುದಿಲ್ಲ.”
“ಅಂತಹ ಸ್ಥಿತಿ ಶಿರೂರು ತಂದಿಟ್ಟರಲ್ಲಾ ಸ್ವಾಮೀಜಿ.”
“ಅಂತಹ ಸ್ಥಿತಿ ಬಂದಿಲ್ಲ.”
“ನಿಮ್ಮ ಬುಡಕ್ಕೆ ಬಂದಿದೆಯಲ್ಲಾ ಸ್ವಾಮಿ.”
“ನಮ್ಮ ಬುಡಕ್ಕೆ ಯಂತ ಬಂದಿಲ್ಲ.”
“ಪೇಜಾವರಶ್ರೀ ತಾರುಣ್ಯದಲ್ಲಿ ತರುಣಿಯ ಸಂಗ ಮಾಡಿದ್ದರು ಅದರ ಫಲವಾಗಿ ಮಗಳಿದ್ದಾಳೆ ಅಂತ ದೂರಿದೆಯಲ್ಲ ಸ್ವಾಮೀಜಿ.”
“ಅದನ್ನ ಸಾಭೀತುಮಾಡಿದರೆ ಪೀಠತ್ಯಾಗ ಮಾಡುತ್ತೇನೆ.”
“ನೀವು ಮಾಡದೆಯಿದ್ರೂ ಆಯಸ್ಸು ಅವಧಿ ಎಲ್ಲ ಮುಗಿದಿದೆ, ಈಗಿನ ನಿಮ್ಮ ತ್ಯಾಗ ಒಂಥರ ಮಾಧ್ವ ಕುಲವೇ ತಲೆತಗ್ಗಿಸುವಂತದ್ದು.”
“ಮಾಧ್ವಕುಲ ತಲೆತಗ್ಗಿಸುವಂತಹ ಕೆಲಸ ನಾವು ಮಾಡಿಲ್ಲ.”
“ನೀವು ಮಾಡದೇಯಿದ್ರೂ ಮಾಡೋರಿಗೆ ಪುಸಲಾಯಿಸಿದ್ದೀರಿ.”
“ಅದನ್ನ ಸಬೀತು ಮಾಡಿದರೆ ಪೀಠತ್ಯಾಗ ಮಾಡ್ತೇನೆ.”
“ಮಾಡಬೇಡಿ ಅಲ್ಲೇ ಇರಿ, ಆದರೆ ಈ ಹಿಂದೆ ಹೆಣ್ಣಿನ ಸಂಗದ ಬಗ್ಗೆ ಪ್ರಚೋದನೆಗೊಂಡ ಸ್ವಾಮಿಯೊಬ್ಬರು ಪೀಠತ್ಯಾಗ ಮಾಡಿ ಸಂಸಾರಿಯಾಗುತ್ತೇನೆ ಅಂದಾಗ ತಾವು ಹಾಗೆ ಮಾಡಬೇಡಿ, ಪೀಠದಲ್ಲಿ ಇದ್ದುಕೊಂಡೇ ಗುಟ್ಟಾಗಿ ನಿಭಾಯಿಸಿ ಅನ್ನೋ ಮಾತನ್ನ ತಾವು ಹೇಳಿದ್ದೀರಿ.”
“ಇಲ್ಲ ನಾನು ಹಾಗೆ ಹೇಳಿಲ.್ಲ”
“ತಮ್ಮ ಮಾತನ್ನ ಮೀರಿ ಪೀಠತ್ಯಾಗ ಮಾಡಿ ಈಗ ಅಮೇರಿಕದಲ್ಲಿ ಸಂಸಾರಿಯಾಗಿರೊ ವ್ಯಕ್ತಿ, ನಮ್ಮ ಜೊತೆ ನಿಮ್ಮ ಸಂಧಾನದ ಮಾತನ್ನ ಹಂಚಿಕೊಂಡ್ರು ಇದಕ್ಕಿಂತ ಸಾಕ್ಷಿಬೇಕೆ”
“ನೋಡಿ ಇವರೆ ನಾನು ಹೇಳಿದ್ದು ಸನ್ಯಾಸಿ ಜೀವನ ಕಷ್ಟಕರವಾದದ್ದು ಅದನ್ನ ನಿಭಾಯಿಸಿ ಅಂತ ಹೇಳಿದ್ದು.”
“ಹೊಂದಾಣಿಕೆಯಿಂದ.”
“ಹಾಗಲ್ಲ ಕೃಷ್ಣಪೂಜೆ ಓದು ಧ್ಯಾನವ್ರತಗಳನ್ನ ಮಾಡಿಕೊಂಡು ನಮ್ಮ ಮನಸ್ಸನ್ನ ನಿಯಂತ್ರಣದಲ್ಲಿ ಇಟ್ಟುಕೊಂಡು ಸನ್ಯಾಸಿ ಜೀವನವನ್ನ ಸಾಗಿಸಬೇಕು.”
“ಅದು ಸರಿ ಸ್ವಾಮಿ ನೀವು ಪೂಜೆ ಮಾಡೋ ದೇವರೆ ಸ್ತ್ರೀಲೋಲ. ಮತ್ತೆ ಪೀಡಕನಾಗಿದ್ದ. ಅವನು ಕಟ್ಟಿಕೊಂಡ ಸ್ತ್ರೀಯರ ಸಂಖ್ಯೆ ಅಗಣಿತ, ಅಂತಹ ವ್ಯಕ್ತಿಯನ್ನ ಪೂಜೆ ಮಾಡೋರು ಸನ್ಯಾಸಿ ಜೀವನ ಮಾಡದು ಸುಳ್ಳಲ್ಲವ.”
“ನಾವಿದ್ದೇವಲ್ಲ.”
“ನಿಮ್ಮ ಮಠದಲ್ಲಿದ್ದವರಿಂದಲೇ ನಿಮ್ಮ ಜೀವನವೂ ಅನಾವರಣವಾಯ್ತಲ್ಲ ಸ್ವಾಮಿ.”
“ಯಂತ ಅನಾವರಣವಾಯ್ತು.”
“ಬೇರೆಯವರಿಗೆ ಗೌಪ್ಯ ಸುಖಸಂಸಾರ ಹೇಳಿಕೊಟ್ಟವರು, ಹಾಗೇ ತಾವೂ ಮಾಡುತ್ತಿರಬಹುದಲ್ಲ, ಇಂತ ಅನುಮಾನಗಳು ಈಗ ಹುಟ್ಟಿಕೊಂಡಿವೆ, ತಡವಾದರೂ ಸತ್ಯದರ್ಶನವಾಗುತ್ತಿವೆ. ಕರ್ನಾಟಕದ ಮಠಗಳ ಮಾನ ಹರಾಜಾಗ್ತಾಯಿದೆ. ಇಷ್ಟರ ನಡುವೆ ಇನ್ನೂ ಕೆಲವು ಮಠಗಳು ತಮ್ಮ ನೈತಿಕ ಜವಬ್ದಾರಿ ಬಿಟ್ಟುಕೊಟ್ಟಿಲ್ಲ. ಆದರೆ ನಿಮ್ಮ ಮಠಗಳು ಹಣ ಅಧಿಕಾರ ಸ್ತ್ರೀಶಕ್ತಿ ಮತ್ತು ಮತಾಂಧತೆಯಿಂದ ಪತನವಾಗ್ತಾಯಿವೆ. ಅದೂ ನೈತಿಕವಾಗಿ ನಿಮಗೂ ಹಿಂಗನ್ಸಲ್ಲ ಸ್ವಾಮೀಜಿ……. ಹಲೋ ಹಲೋ ಹಲೋ ಮಾತಾಡಿ ಸ್ವಾಮೀಜಿ..
ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...