Homeಕರ್ನಾಟಕಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ಹಿಜಾಬ್‌ ನಿಷೇಧ ಎತ್ತಿ ಹಿಡಿದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು, ಪೋಷಕರು ಎದುರಿಸುತ್ತಿರುವ ಆತಂಕವನ್ನು ‘ದಿ ನ್ಯೂಸ್‌ ಮಿನಿಟ್‌’ ಗ್ರೌಂಡ್ ರಿಪೋರ್ಟ್ ಮಾಡಿದೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿ ವಿಷಮಯವಾಗುತ್ತಿದೆ.

- Advertisement -
- Advertisement -

(ಹಿಜಾಬ್‌ ನಿಷೇಧ ಎತ್ತಿ ಹಿಡಿದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು, ಪೋಷಕರು ಎದುರಿಸುತ್ತಿರುವ ಆತಂಕವನ್ನು ‘ದಿ ನ್ಯೂಸ್‌ ಮಿನಿಟ್‌’ ಗ್ರೌಂಡ್ ರಿಪೋರ್ಟ್ ಮಾಡಿದೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿ ವಿಷಮಯವಾಗುತ್ತಿದೆ.)

ಮಧ್ಯಾಹ್ನ 12 ಗಂಟೆ. ತನ್ನ ಕಾಲೇಜು ಗೇಟ್‌ಗಳ ಮುಂದೆ ನಿಂತ ಅಫ್ಸಾನಾಳ ನೆತ್ತಿಯ ಮೇಲೆ ಉರಿ ಸೂರ್ಯನ ಜ್ವಾಲೆ. ಹೀಗಾಗಲೇ ತರಗತಿಯ ಮೂರನೇ ಅವಧಿ ಮುಗಿದಿದೆ. ಕಿಟಕಿಯ ಮೂಲಕ ಅಫ್ಸಾನಾ ತನ್ನ ಸಹಪಾಠಿಗಳ ಮುಖಗಳನ್ನು ನೋಡುತ್ತಾಳೆ. ಆದರೆ 20ರ ಹರೆಯದ ಅಫ್ಸಾನಾ ಪಿಯಾಜಿ ಮತ್ತು ಆಕೆಯ ನಾಲ್ವರು ಗೆಳತಿಯರು ಹೊರಗಿನಿಂದ ಮಾತ್ರ ತರಗತಿಯನ್ನು ನೋಡುವಂತಾಗಿದೆ. “ಹೊರಗೆ ಹೋಗಿ, ಕಾಲೇಜಿನಲ್ಲಿರುವ ಇತರರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ಎಂದು ಪ್ರಾಂಶುಪಾಲರು ಹೇಳಿದರು” ಎಂದು ಅಫ್ಸಾನಾ ಬೇಸರ ವ್ಯಕ್ತಪಡಿಸುತ್ತಾರೆ. ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ಕಾಲೇಜು ಅನುಮತಿಸದ ಕಾರಣ  ಅಪ್ಸಾನಾ ಒಂದು ತಿಂಗಳಿನಿಂದ ತನ್ನ ತರಗತಿಯಲ್ಲಿ ಕೂರಲು ಸಾಧ್ಯವಾಗುತ್ತಿಲ್ಲ.

ಕಳೆದ ವಾರ ಕರ್ನಾಟಕ ಹೈಕೋರ್ಟ್, ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದೆ. ಈ ನಿರ್ಧಾರದಿಂದ ಅಫ್ಸಾನಾ ಇಕ್ಕಟ್ಟಿಗೆ ಸಿಲುಕಿದ್ದಾರೆ. “ಯಾವುದಾದರೊಂದು ಪರಿಹಾರ ಇದ್ದೇ ಇರುತ್ತದೆ ಎಂದು ನಾನು ಕಾಲೇಜಿಗೆ ಬಂದಿದ್ದೇನೆ” ಎಂಬುದು ಅಫ್ಸಾನಾ ನುಡಿ. “ನಾವು ನಮ್ಮ ಸೆಮಿಸ್ಟರ್ ಪರೀಕ್ಷೆಯ ಶುಲ್ಕ (ರೂ 730) ಪಾವತಿಸಿದ್ದೇವೆ. ಈ ಶೈಕ್ಷಣಿಕ ವರ್ಷವನ್ನು ಪೂರೈಸಲು ಪ್ರಾಂಶುಪಾಲರು ನಮಗೆ ಸಹಾಯ ಮಾಡುತ್ತಾರೆ ಎಂದು ನಾನು ಭಾವಿಸಿದ್ದೇವೆ” ಎನ್ನುತ್ತಾರೆ ಅಫ್ಸಾನಾ.

ಮೂರು ವರ್ಷಗಳ ಹಿಂದೆ ಅಫ್ಸಾನಾ ಅವರು ಉಡುಪಿಯ ಸರ್ಕಾರಿ ಅನುದಾನಿತ ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಸೇರಿದರು. ಮನೋವಿಜ್ಞಾನ, ಪತ್ರಿಕೋದ್ಯಮ ಮತ್ತು ಗ್ರಾಮೀಣಾಭಿವೃದ್ಧಿ ವಿಷಯವನ್ನು ಆಯ್ಕೆ ಮಾಡಿಕೊಂಡರು. ಅಫ್ಸಾನಾ ಈಗ ತನ್ನ ಅಂತಿಮ ಸೆಮಿಸ್ಟರ್ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಮತ್ತು ತನ್ನ ಮುಂದಿನ ವೃತ್ತಿಜೀವನದ ನಡೆಯನ್ನು ಯೋಜಿಸಬೇಕು.

ಇದನ್ನೂ ಓದಿರಿ: ಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

“ಪದವಿಯ ನಂತರ ನಾನು ಕೌಪ್‌ನ ಸರ್ಕಾರಿ ಕಾಲೇಜಿನಲ್ಲಿ ಸೋಷಿಯಲ್‌ ವರ್ಕ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಬಯಸುತ್ತೇನೆ” ಎನ್ನುವ ಅಫ್ಸಾನಾ, “ಆದರೆ ಈಗ ನನ್ನ ಕನಸು ನನಸಾಗುವ ನಂಬಿಕೆ ಇಲ್ಲ. ನಾನು ಹಿಜಾಬ್ ಅನ್ನು ಧರಿಸಲು ಬಯಸುತ್ತೇನೆ. ಏಕೆಂದರೆ ಅದು ನನ್ನ ನಂಬಿಕೆಯ ಭಾಗವಾಗಿದೆ. ಆದರೆ ನಾನು ಹಿಜಾಬ್ ಧರಿಸಿದರೆ ನನ್ನ ಅಂತಿಮ ಪರೀಕ್ಷೆಗಳನ್ನು ಬರೆಯಲು ಅವಕಾಶ ದೊರಕುವುದಿಲ್ಲ” ಎನ್ನುತ್ತಾರೆ.

ಹೈಕೋರ್ಟ್ ತೀರ್ಪಿನ ನಂತರ ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ ಉಡುಪಿಯ 232 ಪದವಿ ವಿದ್ಯಾರ್ಥಿಗಳಲ್ಲಿ ಅಫ್ಸಾನಾ ಕೂಡ ಒಬ್ಬರು ಎಂದು ಶಿಕ್ಷಣ ಇಲಾಖೆಯ ಮಾಹಿತಿಯಿಂದ ತಿಳಿದುಬರುತ್ತದೆ. ಉಡುಪಿಯ ಮುಸ್ಲಿಂ ಸಂಘಟನೆಗಳ ಒಕ್ಕೂಟವಾದ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಪ್ರಕಾರ, ಕನಿಷ್ಠ 183 ಪದವಿ ಪೂರ್ವ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗಿಲ್ಲ. ಉಡುಪಿಯ ಪ್ರಿ-ಯೂನಿವರ್ಸಿಟಿ ಕಾಲೇಜುಗಳಲ್ಲಿ ಒಟ್ಟು 12.5% ​​ (1446) ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ.

ಕೆಲವು ವಿದ್ಯಾರ್ಥಿಗಳು, ತಮ್ಮ ಕಾಲೇಜನ್ನು ತೊರೆಯುವ ಆತಂಕದಲ್ಲಿದ್ದಾರೆ. ನ್ಯಾಯಾಲಯವು ಹಿಜಾಬ್ ಮೇಲಿನ ನಿಷೇಧವನ್ನು ಎತ್ತಿಹಿಡಿದ ನಂತರ ಹಿಜಾಬ್ ಅನ್ನು ತೆಗೆದು ತಮ್ಮ ಪರೀಕ್ಷೆಗಳನ್ನು ಬರೆಯಲು ಕೆಲವರು ಯೋಚಿಸುತ್ತಿದ್ದಾರೆ. “ನಾನು ಮೂರನೇ ವರ್ಷದ ವಿದ್ಯಾರ್ಥಿ. ಹಿಜಾಬ್‌ ತೆಗೆಯದಿದ್ದರೆ ಮೂರು ವರ್ಷಗಳ ನನ್ನ ಕೋರ್ಸ್ ವ್ಯರ್ಥವಾಗಬಹುದು” ಎಂದು ಹೆಸರು ಹೇಳಲು ಇಚ್ಛಿಸದ ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಹೇಳುತ್ತಾರೆ. ಈ ವಿದ್ಯಾರ್ಥಿಯ ಪಕ್ಕದಲ್ಲಿದ್ದ ವಿದ್ಯಾರ್ಥಿನಿ, ಗೆಳತಿ 20 ವರ್ಷದ ಅಫ್ರಾ ಅಜ್ಮಲ್ ಅಸ್ಸಾದಿ ಕಾಲೇಜಿನಿಂದ ಹೊರಗುಳಿಯಲು ಮುಂದಾಗಿದ್ದಾರೆ. “ನಾವು ತರಗತಿಯಲ್ಲಿ ಒಂದೇ ಬೆಂಚ್ ಮೇಲೆ ಕುಳಿತು ನಮ್ಮ ಬಿಡುವಿನ ವೇಳೆಯನ್ನು ಒಟ್ಟಿಗೆ ಕಳೆಯುತ್ತಿದ್ದೆವು. ಆದರೆ ಹಿಜಾಬ್‌ ವಿಚಾರದಲ್ಲಿ ನಾನು ರಾಜಿಯಾಗಲಾರೆ. ನಾನು ಬದಲಿ ಕಾಲೇಜು ಅಥವಾ ಆನ್‌ಲೈನ್ ಕೋರ್ಸ್‌ಗಾಗಿ ಹುಡುಕಾಟ ನಡೆಸಿದ್ದೇನೆ” ಎನ್ನುತ್ತಾರೆ ಅಫ್ರಾ.

ಇದನ್ನೂ ಓದಿರಿ: ಹಿಜಾಬ್‌ ತೀರ್ಪಿನಲ್ಲಿ ಅಗತ್ಯ ಸಂಗತಿಗಳನ್ನು ಬದಿಗಿಟ್ಟ ಹೈಕೋರ್ಟ್: ವಿದ್ಯಾರ್ಥಿ ಸಂಘಟನೆಗಳ ಆಕ್ಷೇಪ

ಹಿಜಾಬ್ ನಿಷೇಧದಿಂದಾಗಿ ಉಡುಪಿಯ ಪೋಷಕರು ತಮ್ಮ ಮಕ್ಕಳನ್ನು ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡಿಸಲು ಮುಂದಾಗಿದ್ದಾರೆ. ಶಿಕ್ಷಣದ ಸಲುವಾಗಿ ಕುಟುಂಬಗಳು ಬೇರೆ ಊರಿಗೆ ವಲಸೆ ಹೋಗಲು ಯೋಜಿಸುತ್ತಿವೆ. ಉಡುಪಿಯ ಮಹಾತ್ಮಗಾಂಧಿ ಸ್ಮಾರಕ (ಎಂಜಿಎಂ) ಕಾಲೇಜಿನಲ್ಲಿ ಓದುತ್ತಿರುವ ಬಿಎಸ್‌ಸಿ ವಿದ್ಯಾರ್ಥಿಯ ಪೋಷಕರಾದ ಮೊಹಮ್ಮದ್ ಅಲಿ, “ಹಿಜಾಬ್‌ಗೆ ಅನುಮತಿ ಇರುವ ಕಾಲೇಜಿನಲ್ಲಿ ನಮ್ಮ ಮಗಳ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡಲು ನಾವು ಮಂಗಳೂರಿಗೆ ತೆರಳುವ ಬಗ್ಗೆ ಯೋಚಿಸುತ್ತಿದ್ದೇವೆ” ಎನ್ನುತ್ತಾರೆ.

“ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ ದಿನದಂದು ನಾನು ಟಿವಿ ವೀಕ್ಷಿಸಲು ಹೆದರುತ್ತಿದ್ದೆ. ಆದರೆ ನಾನು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಅನುಸರಿಸುತ್ತಿದ್ದೆ. ಹಿಂದೆ ಯಾವುದೇ ಸಮಸ್ಯೆಯಿಲ್ಲದ ನಮ್ಮಂತಹ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಲಾಗುವುದು ಎಂದು ನಾವು ಆಶಿಸುತ್ತಿದ್ದೆವು” ಎಂದು ವಿದ್ಯಾರ್ಥಿನಿ ಹೇಳುತ್ತಾರೆ.

ಕಾಲೇಜಿನ 58 ವಿದ್ಯಾರ್ಥಿಗಳು ತಮ್ಮ ಕಾಲೇಜು ಪ್ರಾಂಶುಪಾಲರನ್ನು ಭೇಟಿ ಮಾಡಿ ಪರೀಕ್ಷೆಗಾಗಿ ಅನುಮತಿ ಕೋರಿದ್ದಾರೆ. ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. “ನಮ್ಮನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದರೆ ಮತ್ತು ಮಹಿಳಾ ಶಿಕ್ಷಕಿಯನ್ನು ಇನ್ವಿಜಿಲೇಟರ್ ಆಗಿ ನೇಮಿಸಿದರೆ ನಾವು ಹಿಜಾಬ್ ತೆಗೆದುಹಾಕುವುದಾಗಿ ಹೇಳಿದೆವು. ಈ ವಿನಂತಿಯನ್ನೂ ನಿರಾಕರಿಸಲಾಗಿದೆ” ಎಂದು ಅವರು ಹೇಳುತ್ತಾರೆ.

“ಹಿಜಾಬ್ ಇಲ್ಲದೆ ತರಗತಿಗೆ ಹೋಗುವುದನ್ನು ನಾನು ಊಹಿಸಲು ಸಾಧ್ಯವಿಲ್ಲ” ಎನ್ನುವ ವಿದ್ಯಾರ್ಥಿನಿ ಕುರಾನ್‌ನ ಇಂಗ್ಲಿಷ್ ಅನುವಾದದಲ್ಲಿನ ಎರಡು ಪದ್ಯಗಳನ್ನು ತೋರಿಸುತ್ತಾಳೆ. “ಹಿಜಾಬ್ ಅನ್ನು ಕುರಾನ್‌ನಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ನಮ್ಮ ನಂಬಿಕೆಯ ಅಗತ್ಯ ಭಾಗವೆಂದು ನಾನು ಪರಿಗಣಿಸುತ್ತೇನೆ” ಎನ್ನುತ್ತಾಳೆ ವಿದ್ಯಾರ್ಥಿನಿ.

ಇದನ್ನೂ ಓದಿರಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ಆದರೆ ಹಿಜಾಬ್ ಅನ್ನು ಅನುಮತಿಸುವ ಖಾಸಗಿ ಸಂಸ್ಥೆಗಳಿಗೆ ಹೋಗುವುದು ಅಫ್ಸಾನಾ ಅವರಂತಹ ವಿದ್ಯಾರ್ಥಿಗಳಿಗೆ ಒಂದು ಆಯ್ಕೆ ಮಾತ್ರವಲ್ಲ; ಹಿಜಾಬ್ ನಿಷೇಧದ ಜಾರಿಯು ಅವರ ಶಿಕ್ಷಣದ ಅಂತ್ಯವನ್ನು ಸೂಚಿಸುತ್ತದೆ. ಅಫ್ಸಾನಾ ಪೋಷಕರು ದೂರವಾದ್ದರಿಂದ, ಆಕೆಯ ಶಿಕ್ಷಣಕ್ಕೆಂದು ಸರ್ಕಾರಿ ಅನುದಾನಿತ ಕಾಲೇಜಿಗೆ 3,000 ರೂ.ಗಳ ಸಾಧಾರಣ ಕಾಲೇಜು ಶುಲ್ಕವನ್ನು ಆಕೆಯ ಚಿಕ್ಕಪ್ಪ ಪಾವತಿಸಿದರು.

ಕುಂದಾಪುರ, ಬೈಂದೂರು ಸೇರಿದಂತೆ ಉಡುಪಿ ಜಿಲ್ಲೆಯಾದ್ಯಂತ ಕಾಲೇಜುಗಳಲ್ಲೂ ಇದೇ ಸ್ಥಿತಿ ಇದೆ. ಎರಡೂ ಪಟ್ಟಣಗಳಲ್ಲಿ ಕಳೆದ ವಾರ ಹಲವಾರು ಮುಸ್ಲಿಂ ಹುಡುಗಿಯರು ತಮ್ಮ ತರಗತಿಗಳು ಅಥವಾ ಪರೀಕ್ಷೆಗಳಿಂದ ದೂರ ಉಳಿದಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲರು ಹೇಳುತ್ತಾರೆ. ಉದಾಹರಣೆಗೆ ಕುಂದಾಪುರದ ಆರ್‌ಎನ್ ಶೆಟ್ಟಿ ಸಂಯುಕ್ತ ಪಿಯು ಕಾಲೇಜಿನಲ್ಲಿ ಕಳೆದ ವಾರ 56 ಮುಸ್ಲಿಂ ಬಾಲಕಿಯರ ಪೈಕಿ ಕೇವಲ ಒಬ್ಬ ವಿದ್ಯಾರ್ಥಿನಿ ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು. ಅದೇ ರೀತಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 16 ಮುಸ್ಲಿಂ ಬಾಲಕಿಯರಲ್ಲಿ ಒಬ್ಬರು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು.

2011ರ ಜನಗಣತಿಯ ಪ್ರಕಾರ 11.7 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ ಕೇವಲ 8.22% ಮುಸ್ಲಿಮರಿದ್ದಾರೆ. ನೆರೆಯ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ, ಮುಸ್ಲಿಂ ಜನಸಂಖ್ಯೆಯು ಉಡುಪಿಗಿಂತ ಸುಮಾರು ಎರಡು ಪಟ್ಟು ಹೆಚ್ಚು (24%). ಉಡುಪಿಗಿಂತ ಮುಸ್ಲಿಮರ ಜನಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲೂ ಇದೇ ಸಮಸ್ಯೆಗಳು ಎದುರಾಗುತ್ತಿವೆ ಎಂದು ಮುಸ್ಲಿಂ ಸಂಘಟನೆಗಳು ಹೇಳುತ್ತಿವೆ.

“ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಮುಸ್ಲಿಂ ವಿದ್ಯಾರ್ಥಿಗಳಿಂದ ಆನ್‌ಲೈನ್ ತರಗತಿಗಾಗಿ ಮನವಿಗಳು ಬಂದಿವೆ” ಎಂದು ಹಿಜಾಬ್ ನಿಷೇಧ ಜಾರಿಯಿಂದ ಪರಿಣಾಮ ಎದುರಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ದಾಖಲಿಸುತ್ತಿರುವ ಉಡುಪಿಯ ಮುಸ್ಲಿಂ ಒಕ್ಕೂಟ ಹೇಳಿದೆ. “ಉಡುಪಿ ಕೇಂದ್ರ ಬಿಂದುವಾಗಿದೆ. ಏಕೆಂದರೆ ಇಲ್ಲಿ ಸಮಸ್ಯೆ ಪ್ರಾರಂಭವಾಯಿತು. ಆದರೆ ಎಲ್ಲಾ ನೆರೆಯ ಜಿಲ್ಲೆಗಳು ಸೇರಿದಂತೆ ಇತರ ಹಲವು ಜಿಲ್ಲೆಗಳಿಂದ ಆನ್‌ಲೈನ್ ತರಗತಿಗಳಿಗಾಗಿ ನಾವು ಕೋರಿಕೆಗಳನ್ನು ಸ್ವೀಕರಿಸಿದ್ದೇವೆ ” ಎಂದು ಒಕೂಟದ ಸದಸ್ಯ ಹಸನ್ ಮಾವೇದ್ ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸರ್ಕಾರಿ ಪದವಿಪೂರ್ವ ಕಾಲೇಜೊಂದರಲ್ಲಿ 231 ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಪೂರ್ವಸಿದ್ಧತಾ ಪರೀಕ್ಷೆಯಿಂದ ಹೊರಗುಳಿದ್ದಾರೆ. ಹೋರಾಟ ನಿರತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮುಸ್ಲಿಂ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದ್ದಾರೆ.

ತಮ್ಮ ಹೆಣ್ಣು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿತರಾಗಿರುವ ನೂರಾರು ಕುಟುಂಬಗಳಿಗೆ ವಿಷಮಯ ಪರಿಸ್ಥಿತಿ ಎಂದು ಒಕ್ಕೂಟ ಹೇಳಿದೆ. “ತೀರ್ಪು ಪ್ರಕಟವಾದಾಗಿನಿಂದ, ನಾವು ಪ್ರೀ ಯೂನಿವರ್ಸಿಟಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಏರ್ಪಡಿಸಿದ್ದೇವೆ. ಭವಿಷ್ಯದ ಬಗ್ಗೆ ಆತಂಕಿತರಾಗಿರುವ ಪೋಷಕರು ಕರೆಗಳನ್ನು ಮಾಡುತ್ತಲೇ ಇದ್ದಾರೆ” ಎನ್ನುತ್ತಾರೆ ಹಸನ್.

ವರದಿ ಕೃಪೆ: ದಿ ನ್ಯೂಸ್‌ ಮಿನಿಟ್‌ (ಪ್ರಜ್ವಲ್ ಭಟ್‌)


ಇದನ್ನೂ ಓದಿರಿ: ಹಿಜಾಬ್ ಕುರಿತ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡುವಂತೆ ಮಹಿಳಾ ಸಂಘಟನೆಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೊದಲು ನಿಮ್ಮಗಳ ಮನಸ್ಥಿತಿ ಬದಲಾಯಿಸಿ ಕೊಳ್ಳದಿದ್ದರೆ ನಿಮ್ಮ ನ್ಯೂಸ್ ಜೊತೆಗೆ ನಿಮ್ಮನ್ನು ಹೊರಹಾಕುವ ಸಮಯ ಬರಲಿದೆ ಸಾರ್ವಜನಿಕವಾಗಿ

  2. ಇದೊಂದು ದೇಶದ್ರೋಹಿ ಚಾನೆಲ್ ಅಂತ ಕಾಣುತ್ತಿದೆ ಇದನ್ನು ಮೊದಲು ಬ್ಯಾನ್ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...