Homeಕರ್ನಾಟಕಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

- Advertisement -
- Advertisement -

‘ಜೈ ಹಿಂದೂ ರಾಷ್ಟ್ರ’ ಎಂದು ಬರೆದಿರುವ, ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಚಿತ್ರದೊಂದಿಗೆ ಬ್ರಿಟಿಷರಲ್ಲಿ ಹಲವು ಬಾರಿ ಕ್ಷಮೆ ಕೇಳಿ ಖ್ಯಾತರಾದ ವಿ.ಡಿ.ಸಾವರ್ಕರ್‌ ಅವರ ಫೋಟೋವನ್ನೂ ಬಳಸಿರುವ ಪ್ಲೆಕ್ಸ್‌ಅನ್ನು ಉಡುಪಿಯ ಪ್ರಮುಖ ಸ್ಥಳದಲ್ಲಿ ಹಾಕಲಾಗಿದ್ದು, ಉಡುಪಿ ಪೊಲೀಸರು ಇದಕ್ಕೆ ರಕ್ಷಣೆ ನೀಡಿದ್ದಾರೆ.

ಬ್ಯಾನರ್‌ನ ಒಂದು ಬದಿಯಲ್ಲಿ “ಜೈ ಹಿಂದೂ ರಾಷ್ಟ್ರ” ಎಂಬ ಹೇಳಿಕೆ ಮತ್ತು ಇನ್ನೊಂದು ಬದಿಯಲ್ಲಿ “ಸ್ವಾತಂತ್ರ್ಯವು ಬ್ರಿಟಿಷರು ಅಹಿಂಸೆಗೆ ನೀಡಿದ ಭಿಕ್ಷೆಯಲ್ಲ” ಎಂಬ ಹೇಳಿಕೆಯನ್ನು ಹಾಕಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬ್ಯಾನರ್‌ನಲ್ಲಿ, “ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರನ್ನು ಸೋಲಿಸಿ ಅವರ ದುರಾಡಳಿತದಿಂದ ದೇಶವನ್ನು ಮುಕ್ತಗೊಳಿಸಿದ ಕ್ರಾಂತಿಕಾರಿ ನಾಯಕರಾದ ವೀರ್ ಸಾವರ್ಕರ್ ಮತ್ತು ಸುಭಾಷ್ ಚಂದ್ರ ಬೋಸ್ ಅವರನ್ನು ಈ 75 ನೇ ಸ್ವಾತಂತ್ರ್ಯ ದಿನದಂದು ಸ್ಮರಿಸೋಣ” ಎಂದು ಬರೆಯಲಾಗಿದೆ. ಮಹಾನ್ ಚೇತನ ಸುಭಾಷ್ ಚಂದ್ರ ಬೋಸ್‌ ಅವರ ಫೋಟೋಕ್ಕಿಂತ, ಹಿಂದುತ್ವವಾದಿ ಸಾವರ್ಕರ್‌ ಫೋಟೋವನ್ನು ದೊಡ್ಡದಾಗಿ ಬಳಸಿರುವುದನ್ನು ಪ್ಲೆಕ್ಸ್‌ನಲ್ಲಿ ಕಾಣಬಹುದು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನೀಡಿದ ದೂರಿನ ಬಳಿಕ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಉಡುಪಿ ಪಟ್ಟಣ ಪುರಸಭೆ ಸೋಮವಾರ ನಿರ್ಧರಿಸಿದೆ. ಮುಂದಿನ 15 ದಿನಗಳ ಕಾಲ ನಗರಸಭೆಯ ಮನವಿಯಂತೆ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸರು ಹಾಜರಿರುತ್ತಾರೆ ಎಂದು ಉಡುಪಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ದಿ ನ್ಯೂಸ್ ಮಿನಿಟ್‌’ ಜಾಲತಾಣ, “ಬ್ಯಾನರ್‌ನ ಸ್ಥಳಕ್ಕೆ ಭೇಟಿ ನೀಡಿದಾಗ ಬ್ರಹ್ಮಗಿರಿ ವೃತ್ತದಲ್ಲಿ ಎಂಟು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಸ್ವಾತಂತ್ರ್ಯೋತ್ಸವದ ನಿಮಿತ್ತ ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಅಳವಡಿಸಲಾಗಿದ್ದು, ಇದನ್ನು ಪ್ರಮೋದ್ ಉಚ್ಚಿಲ, ಶೈಲೇಶ್ ದೇವಾಡಿಗ ಮತ್ತು ಯೋಗೀಶ್ ಕುತ್ಪಾಡಿ ಅವರು ಅಳವಡಿಸಿದ್ದಾರೆ. ಪ್ರಮೋದ್, ಉಡುಪಿಯ ಬಲಪಂಥೀಯ ಸಂಘಟನೆ ಹಿಂದೂ ಮಹಾಸಭಾಕ್ಕೆ ಸೇರಿದವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ” ಎಂದು ವಿವರಿಸಿದೆ.

ಬ್ಯಾನರ್ ವಿರುದ್ಧ ಎಸ್‌ಡಿಪಿಐ ದೂರು ನೀಡಿದ್ದರೂ, ಪಟ್ಟಣದ ಪುರಸಭೆಯು ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಇರಿಸಲು ಮತ್ತು ಹೆಚ್ಚಿನ ರಕ್ಷಣೆ ನೀಡಲು ನಿರ್ಧರಿಸಿದೆ.

ಪಾಲಿಕೆ ಆಯುಕ್ತ ಉದಯಕುಮಾರ್ ಶೆಟ್ಟಿ ಮಾತನಾಡಿ, ‘ಬ್ಯಾನರ್ ಹಾಕಲು ಯಾವುದೇ ನಿರ್ಬಂಧವಿಲ್ಲ ಮತ್ತು ಅರ್ಜಿದಾರರು ಮೂರು ದಿನ ಮುಂಚಿತವಾಗಿ ಹಾಕಲು ಅನುಮತಿ ಕೋರಿದ್ದಾರೆ’ ಎಂದು ಹೇಳಿದ್ದಾರೆ.

ವಿವಾದಾತ್ಮಕ ಪ್ಲೆಕ್ಸ್‌ಗಳನ್ನು ಹಾಕಿದ ಕಾರಣ ಶಿವಮೊಗ್ಗ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿದೆ. ಆಗಸ್ಟ್ 15ರಂದು ಶಿವಮೊಗ್ಗ ಜಿಲ್ಲೆಯ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಅವರ ಪೋಸ್ಟರ್ ಹಾಕಿದ್ದರಿಂದ ಉದ್ವಿಗ್ನತೆ ಉಂಟಾಗಿತ್ತು.

ಪೋಸ್ಟರ್‌ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಪ್ರೇಮ್ ಸಿಂಗ್ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿದ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ, ಸಾವರ್ಕರ್ ಅವರ ಪೋಸ್ಟರ್‌ಗಳನ್ನು ಪ್ರದರ್ಶಿಸಿದ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದಕ್ಕಾಗಿ ಎಸ್‌ಡಿಪಿಐ ಸದಸ್ಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲೂ ಸಾವರ್ಕರ್‌ ಫೋಟೋವನ್ನು ಹಾಕಲಾಗಿತ್ತು. ದೇಶಕ್ಕಾಗಿ ಸೇವೆ ಸಲ್ಲಿಸಿದ, ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಫೋಟೋವನ್ನು ಕಡೆಗಣಿಸಿದ್ದು, ಭಾರೀ ಟೀಕೆಗೆ ಒಳಗಾಗಿತ್ತು.

ಟೀಕೆಗಳ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, “ಆರ್ ಎಸ್ ಎಸ್ ಆದರ್ಶಗಳಿಗೆ ತಲೆಬಾಗುತ್ತೇನೆ” ಎಂದಿದ್ದಾರೆ.

ದೇಶ ವಿಭಜನೆಯಲ್ಲೂ ಸಾವರ್ಕರ್ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ನಿರಂತರ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆಯುವ ಮೂಲಕ ಸಾವರ್ಕರ್‌ ಇತಿಹಾಸದಲ್ಲಿ ದಾಖಲಾಗಿದ್ದಾರೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಇತಿಹಾಸವನ್ನು ತಿರುಚುವ ಕೆಲಸಕ್ಕೆ ಕೈಹಾಕಿದೆ ಎಂಬ ಆರೋಪಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದಿಗೂ ಹಿಂದೂ ರಾಷ್ಟ್ರದ ಪ್ರತಿಪಾದಕ ಆಗಿರಲಿಲ್ಲ. ಈಗ ಅವರ ಫೋಟೊ ಜೊತೆಗೆ ಸಾವರ್ಕರ್ ಫೋಟೊ ಹಾಕುವ ಮೂಲಕ ಮನುವಾದಿಗಳು ನೇತಾಜಿಯವರಿಗೆ ಅವಮಾನ ಮಾಡಿದ್ದಾರೆ. ಇದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...