Homeಕರ್ನಾಟಕಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

- Advertisement -
- Advertisement -

‘ಜೈ ಹಿಂದೂ ರಾಷ್ಟ್ರ’ ಎಂದು ಬರೆದಿರುವ, ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಚಿತ್ರದೊಂದಿಗೆ ಬ್ರಿಟಿಷರಲ್ಲಿ ಹಲವು ಬಾರಿ ಕ್ಷಮೆ ಕೇಳಿ ಖ್ಯಾತರಾದ ವಿ.ಡಿ.ಸಾವರ್ಕರ್‌ ಅವರ ಫೋಟೋವನ್ನೂ ಬಳಸಿರುವ ಪ್ಲೆಕ್ಸ್‌ಅನ್ನು ಉಡುಪಿಯ ಪ್ರಮುಖ ಸ್ಥಳದಲ್ಲಿ ಹಾಕಲಾಗಿದ್ದು, ಉಡುಪಿ ಪೊಲೀಸರು ಇದಕ್ಕೆ ರಕ್ಷಣೆ ನೀಡಿದ್ದಾರೆ.

ಬ್ಯಾನರ್‌ನ ಒಂದು ಬದಿಯಲ್ಲಿ “ಜೈ ಹಿಂದೂ ರಾಷ್ಟ್ರ” ಎಂಬ ಹೇಳಿಕೆ ಮತ್ತು ಇನ್ನೊಂದು ಬದಿಯಲ್ಲಿ “ಸ್ವಾತಂತ್ರ್ಯವು ಬ್ರಿಟಿಷರು ಅಹಿಂಸೆಗೆ ನೀಡಿದ ಭಿಕ್ಷೆಯಲ್ಲ” ಎಂಬ ಹೇಳಿಕೆಯನ್ನು ಹಾಕಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬ್ಯಾನರ್‌ನಲ್ಲಿ, “ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರನ್ನು ಸೋಲಿಸಿ ಅವರ ದುರಾಡಳಿತದಿಂದ ದೇಶವನ್ನು ಮುಕ್ತಗೊಳಿಸಿದ ಕ್ರಾಂತಿಕಾರಿ ನಾಯಕರಾದ ವೀರ್ ಸಾವರ್ಕರ್ ಮತ್ತು ಸುಭಾಷ್ ಚಂದ್ರ ಬೋಸ್ ಅವರನ್ನು ಈ 75 ನೇ ಸ್ವಾತಂತ್ರ್ಯ ದಿನದಂದು ಸ್ಮರಿಸೋಣ” ಎಂದು ಬರೆಯಲಾಗಿದೆ. ಮಹಾನ್ ಚೇತನ ಸುಭಾಷ್ ಚಂದ್ರ ಬೋಸ್‌ ಅವರ ಫೋಟೋಕ್ಕಿಂತ, ಹಿಂದುತ್ವವಾದಿ ಸಾವರ್ಕರ್‌ ಫೋಟೋವನ್ನು ದೊಡ್ಡದಾಗಿ ಬಳಸಿರುವುದನ್ನು ಪ್ಲೆಕ್ಸ್‌ನಲ್ಲಿ ಕಾಣಬಹುದು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನೀಡಿದ ದೂರಿನ ಬಳಿಕ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಉಡುಪಿ ಪಟ್ಟಣ ಪುರಸಭೆ ಸೋಮವಾರ ನಿರ್ಧರಿಸಿದೆ. ಮುಂದಿನ 15 ದಿನಗಳ ಕಾಲ ನಗರಸಭೆಯ ಮನವಿಯಂತೆ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸರು ಹಾಜರಿರುತ್ತಾರೆ ಎಂದು ಉಡುಪಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ದಿ ನ್ಯೂಸ್ ಮಿನಿಟ್‌’ ಜಾಲತಾಣ, “ಬ್ಯಾನರ್‌ನ ಸ್ಥಳಕ್ಕೆ ಭೇಟಿ ನೀಡಿದಾಗ ಬ್ರಹ್ಮಗಿರಿ ವೃತ್ತದಲ್ಲಿ ಎಂಟು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಸ್ವಾತಂತ್ರ್ಯೋತ್ಸವದ ನಿಮಿತ್ತ ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಅಳವಡಿಸಲಾಗಿದ್ದು, ಇದನ್ನು ಪ್ರಮೋದ್ ಉಚ್ಚಿಲ, ಶೈಲೇಶ್ ದೇವಾಡಿಗ ಮತ್ತು ಯೋಗೀಶ್ ಕುತ್ಪಾಡಿ ಅವರು ಅಳವಡಿಸಿದ್ದಾರೆ. ಪ್ರಮೋದ್, ಉಡುಪಿಯ ಬಲಪಂಥೀಯ ಸಂಘಟನೆ ಹಿಂದೂ ಮಹಾಸಭಾಕ್ಕೆ ಸೇರಿದವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ” ಎಂದು ವಿವರಿಸಿದೆ.

ಬ್ಯಾನರ್ ವಿರುದ್ಧ ಎಸ್‌ಡಿಪಿಐ ದೂರು ನೀಡಿದ್ದರೂ, ಪಟ್ಟಣದ ಪುರಸಭೆಯು ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಇರಿಸಲು ಮತ್ತು ಹೆಚ್ಚಿನ ರಕ್ಷಣೆ ನೀಡಲು ನಿರ್ಧರಿಸಿದೆ.

ಪಾಲಿಕೆ ಆಯುಕ್ತ ಉದಯಕುಮಾರ್ ಶೆಟ್ಟಿ ಮಾತನಾಡಿ, ‘ಬ್ಯಾನರ್ ಹಾಕಲು ಯಾವುದೇ ನಿರ್ಬಂಧವಿಲ್ಲ ಮತ್ತು ಅರ್ಜಿದಾರರು ಮೂರು ದಿನ ಮುಂಚಿತವಾಗಿ ಹಾಕಲು ಅನುಮತಿ ಕೋರಿದ್ದಾರೆ’ ಎಂದು ಹೇಳಿದ್ದಾರೆ.

ವಿವಾದಾತ್ಮಕ ಪ್ಲೆಕ್ಸ್‌ಗಳನ್ನು ಹಾಕಿದ ಕಾರಣ ಶಿವಮೊಗ್ಗ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿದೆ. ಆಗಸ್ಟ್ 15ರಂದು ಶಿವಮೊಗ್ಗ ಜಿಲ್ಲೆಯ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಅವರ ಪೋಸ್ಟರ್ ಹಾಕಿದ್ದರಿಂದ ಉದ್ವಿಗ್ನತೆ ಉಂಟಾಗಿತ್ತು.

ಪೋಸ್ಟರ್‌ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಪ್ರೇಮ್ ಸಿಂಗ್ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿದ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ, ಸಾವರ್ಕರ್ ಅವರ ಪೋಸ್ಟರ್‌ಗಳನ್ನು ಪ್ರದರ್ಶಿಸಿದ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದಕ್ಕಾಗಿ ಎಸ್‌ಡಿಪಿಐ ಸದಸ್ಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲೂ ಸಾವರ್ಕರ್‌ ಫೋಟೋವನ್ನು ಹಾಕಲಾಗಿತ್ತು. ದೇಶಕ್ಕಾಗಿ ಸೇವೆ ಸಲ್ಲಿಸಿದ, ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಫೋಟೋವನ್ನು ಕಡೆಗಣಿಸಿದ್ದು, ಭಾರೀ ಟೀಕೆಗೆ ಒಳಗಾಗಿತ್ತು.

ಟೀಕೆಗಳ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, “ಆರ್ ಎಸ್ ಎಸ್ ಆದರ್ಶಗಳಿಗೆ ತಲೆಬಾಗುತ್ತೇನೆ” ಎಂದಿದ್ದಾರೆ.

ದೇಶ ವಿಭಜನೆಯಲ್ಲೂ ಸಾವರ್ಕರ್ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ನಿರಂತರ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆಯುವ ಮೂಲಕ ಸಾವರ್ಕರ್‌ ಇತಿಹಾಸದಲ್ಲಿ ದಾಖಲಾಗಿದ್ದಾರೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಇತಿಹಾಸವನ್ನು ತಿರುಚುವ ಕೆಲಸಕ್ಕೆ ಕೈಹಾಕಿದೆ ಎಂಬ ಆರೋಪಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದಿಗೂ ಹಿಂದೂ ರಾಷ್ಟ್ರದ ಪ್ರತಿಪಾದಕ ಆಗಿರಲಿಲ್ಲ. ಈಗ ಅವರ ಫೋಟೊ ಜೊತೆಗೆ ಸಾವರ್ಕರ್ ಫೋಟೊ ಹಾಕುವ ಮೂಲಕ ಮನುವಾದಿಗಳು ನೇತಾಜಿಯವರಿಗೆ ಅವಮಾನ ಮಾಡಿದ್ದಾರೆ. ಇದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...