Homeಕರ್ನಾಟಕಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

- Advertisement -
- Advertisement -

‘ಜೈ ಹಿಂದೂ ರಾಷ್ಟ್ರ’ ಎಂದು ಬರೆದಿರುವ, ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಚಿತ್ರದೊಂದಿಗೆ ಬ್ರಿಟಿಷರಲ್ಲಿ ಹಲವು ಬಾರಿ ಕ್ಷಮೆ ಕೇಳಿ ಖ್ಯಾತರಾದ ವಿ.ಡಿ.ಸಾವರ್ಕರ್‌ ಅವರ ಫೋಟೋವನ್ನೂ ಬಳಸಿರುವ ಪ್ಲೆಕ್ಸ್‌ಅನ್ನು ಉಡುಪಿಯ ಪ್ರಮುಖ ಸ್ಥಳದಲ್ಲಿ ಹಾಕಲಾಗಿದ್ದು, ಉಡುಪಿ ಪೊಲೀಸರು ಇದಕ್ಕೆ ರಕ್ಷಣೆ ನೀಡಿದ್ದಾರೆ.

ಬ್ಯಾನರ್‌ನ ಒಂದು ಬದಿಯಲ್ಲಿ “ಜೈ ಹಿಂದೂ ರಾಷ್ಟ್ರ” ಎಂಬ ಹೇಳಿಕೆ ಮತ್ತು ಇನ್ನೊಂದು ಬದಿಯಲ್ಲಿ “ಸ್ವಾತಂತ್ರ್ಯವು ಬ್ರಿಟಿಷರು ಅಹಿಂಸೆಗೆ ನೀಡಿದ ಭಿಕ್ಷೆಯಲ್ಲ” ಎಂಬ ಹೇಳಿಕೆಯನ್ನು ಹಾಕಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬ್ಯಾನರ್‌ನಲ್ಲಿ, “ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರನ್ನು ಸೋಲಿಸಿ ಅವರ ದುರಾಡಳಿತದಿಂದ ದೇಶವನ್ನು ಮುಕ್ತಗೊಳಿಸಿದ ಕ್ರಾಂತಿಕಾರಿ ನಾಯಕರಾದ ವೀರ್ ಸಾವರ್ಕರ್ ಮತ್ತು ಸುಭಾಷ್ ಚಂದ್ರ ಬೋಸ್ ಅವರನ್ನು ಈ 75 ನೇ ಸ್ವಾತಂತ್ರ್ಯ ದಿನದಂದು ಸ್ಮರಿಸೋಣ” ಎಂದು ಬರೆಯಲಾಗಿದೆ. ಮಹಾನ್ ಚೇತನ ಸುಭಾಷ್ ಚಂದ್ರ ಬೋಸ್‌ ಅವರ ಫೋಟೋಕ್ಕಿಂತ, ಹಿಂದುತ್ವವಾದಿ ಸಾವರ್ಕರ್‌ ಫೋಟೋವನ್ನು ದೊಡ್ಡದಾಗಿ ಬಳಸಿರುವುದನ್ನು ಪ್ಲೆಕ್ಸ್‌ನಲ್ಲಿ ಕಾಣಬಹುದು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನೀಡಿದ ದೂರಿನ ಬಳಿಕ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಉಡುಪಿ ಪಟ್ಟಣ ಪುರಸಭೆ ಸೋಮವಾರ ನಿರ್ಧರಿಸಿದೆ. ಮುಂದಿನ 15 ದಿನಗಳ ಕಾಲ ನಗರಸಭೆಯ ಮನವಿಯಂತೆ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸರು ಹಾಜರಿರುತ್ತಾರೆ ಎಂದು ಉಡುಪಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ದಿ ನ್ಯೂಸ್ ಮಿನಿಟ್‌’ ಜಾಲತಾಣ, “ಬ್ಯಾನರ್‌ನ ಸ್ಥಳಕ್ಕೆ ಭೇಟಿ ನೀಡಿದಾಗ ಬ್ರಹ್ಮಗಿರಿ ವೃತ್ತದಲ್ಲಿ ಎಂಟು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಸ್ವಾತಂತ್ರ್ಯೋತ್ಸವದ ನಿಮಿತ್ತ ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಅಳವಡಿಸಲಾಗಿದ್ದು, ಇದನ್ನು ಪ್ರಮೋದ್ ಉಚ್ಚಿಲ, ಶೈಲೇಶ್ ದೇವಾಡಿಗ ಮತ್ತು ಯೋಗೀಶ್ ಕುತ್ಪಾಡಿ ಅವರು ಅಳವಡಿಸಿದ್ದಾರೆ. ಪ್ರಮೋದ್, ಉಡುಪಿಯ ಬಲಪಂಥೀಯ ಸಂಘಟನೆ ಹಿಂದೂ ಮಹಾಸಭಾಕ್ಕೆ ಸೇರಿದವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ” ಎಂದು ವಿವರಿಸಿದೆ.

ಬ್ಯಾನರ್ ವಿರುದ್ಧ ಎಸ್‌ಡಿಪಿಐ ದೂರು ನೀಡಿದ್ದರೂ, ಪಟ್ಟಣದ ಪುರಸಭೆಯು ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಇರಿಸಲು ಮತ್ತು ಹೆಚ್ಚಿನ ರಕ್ಷಣೆ ನೀಡಲು ನಿರ್ಧರಿಸಿದೆ.

ಪಾಲಿಕೆ ಆಯುಕ್ತ ಉದಯಕುಮಾರ್ ಶೆಟ್ಟಿ ಮಾತನಾಡಿ, ‘ಬ್ಯಾನರ್ ಹಾಕಲು ಯಾವುದೇ ನಿರ್ಬಂಧವಿಲ್ಲ ಮತ್ತು ಅರ್ಜಿದಾರರು ಮೂರು ದಿನ ಮುಂಚಿತವಾಗಿ ಹಾಕಲು ಅನುಮತಿ ಕೋರಿದ್ದಾರೆ’ ಎಂದು ಹೇಳಿದ್ದಾರೆ.

ವಿವಾದಾತ್ಮಕ ಪ್ಲೆಕ್ಸ್‌ಗಳನ್ನು ಹಾಕಿದ ಕಾರಣ ಶಿವಮೊಗ್ಗ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿದೆ. ಆಗಸ್ಟ್ 15ರಂದು ಶಿವಮೊಗ್ಗ ಜಿಲ್ಲೆಯ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಅವರ ಪೋಸ್ಟರ್ ಹಾಕಿದ್ದರಿಂದ ಉದ್ವಿಗ್ನತೆ ಉಂಟಾಗಿತ್ತು.

ಪೋಸ್ಟರ್‌ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಪ್ರೇಮ್ ಸಿಂಗ್ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿದ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ, ಸಾವರ್ಕರ್ ಅವರ ಪೋಸ್ಟರ್‌ಗಳನ್ನು ಪ್ರದರ್ಶಿಸಿದ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದಕ್ಕಾಗಿ ಎಸ್‌ಡಿಪಿಐ ಸದಸ್ಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲೂ ಸಾವರ್ಕರ್‌ ಫೋಟೋವನ್ನು ಹಾಕಲಾಗಿತ್ತು. ದೇಶಕ್ಕಾಗಿ ಸೇವೆ ಸಲ್ಲಿಸಿದ, ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಫೋಟೋವನ್ನು ಕಡೆಗಣಿಸಿದ್ದು, ಭಾರೀ ಟೀಕೆಗೆ ಒಳಗಾಗಿತ್ತು.

ಟೀಕೆಗಳ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, “ಆರ್ ಎಸ್ ಎಸ್ ಆದರ್ಶಗಳಿಗೆ ತಲೆಬಾಗುತ್ತೇನೆ” ಎಂದಿದ್ದಾರೆ.

ದೇಶ ವಿಭಜನೆಯಲ್ಲೂ ಸಾವರ್ಕರ್ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ನಿರಂತರ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆಯುವ ಮೂಲಕ ಸಾವರ್ಕರ್‌ ಇತಿಹಾಸದಲ್ಲಿ ದಾಖಲಾಗಿದ್ದಾರೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಇತಿಹಾಸವನ್ನು ತಿರುಚುವ ಕೆಲಸಕ್ಕೆ ಕೈಹಾಕಿದೆ ಎಂಬ ಆರೋಪಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದಿಗೂ ಹಿಂದೂ ರಾಷ್ಟ್ರದ ಪ್ರತಿಪಾದಕ ಆಗಿರಲಿಲ್ಲ. ಈಗ ಅವರ ಫೋಟೊ ಜೊತೆಗೆ ಸಾವರ್ಕರ್ ಫೋಟೊ ಹಾಕುವ ಮೂಲಕ ಮನುವಾದಿಗಳು ನೇತಾಜಿಯವರಿಗೆ ಅವಮಾನ ಮಾಡಿದ್ದಾರೆ. ಇದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...