Homeಕರ್ನಾಟಕಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

- Advertisement -
- Advertisement -

‘ಜೈ ಹಿಂದೂ ರಾಷ್ಟ್ರ’ ಎಂದು ಬರೆದಿರುವ, ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಚಿತ್ರದೊಂದಿಗೆ ಬ್ರಿಟಿಷರಲ್ಲಿ ಹಲವು ಬಾರಿ ಕ್ಷಮೆ ಕೇಳಿ ಖ್ಯಾತರಾದ ವಿ.ಡಿ.ಸಾವರ್ಕರ್‌ ಅವರ ಫೋಟೋವನ್ನೂ ಬಳಸಿರುವ ಪ್ಲೆಕ್ಸ್‌ಅನ್ನು ಉಡುಪಿಯ ಪ್ರಮುಖ ಸ್ಥಳದಲ್ಲಿ ಹಾಕಲಾಗಿದ್ದು, ಉಡುಪಿ ಪೊಲೀಸರು ಇದಕ್ಕೆ ರಕ್ಷಣೆ ನೀಡಿದ್ದಾರೆ.

ಬ್ಯಾನರ್‌ನ ಒಂದು ಬದಿಯಲ್ಲಿ “ಜೈ ಹಿಂದೂ ರಾಷ್ಟ್ರ” ಎಂಬ ಹೇಳಿಕೆ ಮತ್ತು ಇನ್ನೊಂದು ಬದಿಯಲ್ಲಿ “ಸ್ವಾತಂತ್ರ್ಯವು ಬ್ರಿಟಿಷರು ಅಹಿಂಸೆಗೆ ನೀಡಿದ ಭಿಕ್ಷೆಯಲ್ಲ” ಎಂಬ ಹೇಳಿಕೆಯನ್ನು ಹಾಕಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬ್ಯಾನರ್‌ನಲ್ಲಿ, “ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರನ್ನು ಸೋಲಿಸಿ ಅವರ ದುರಾಡಳಿತದಿಂದ ದೇಶವನ್ನು ಮುಕ್ತಗೊಳಿಸಿದ ಕ್ರಾಂತಿಕಾರಿ ನಾಯಕರಾದ ವೀರ್ ಸಾವರ್ಕರ್ ಮತ್ತು ಸುಭಾಷ್ ಚಂದ್ರ ಬೋಸ್ ಅವರನ್ನು ಈ 75 ನೇ ಸ್ವಾತಂತ್ರ್ಯ ದಿನದಂದು ಸ್ಮರಿಸೋಣ” ಎಂದು ಬರೆಯಲಾಗಿದೆ. ಮಹಾನ್ ಚೇತನ ಸುಭಾಷ್ ಚಂದ್ರ ಬೋಸ್‌ ಅವರ ಫೋಟೋಕ್ಕಿಂತ, ಹಿಂದುತ್ವವಾದಿ ಸಾವರ್ಕರ್‌ ಫೋಟೋವನ್ನು ದೊಡ್ಡದಾಗಿ ಬಳಸಿರುವುದನ್ನು ಪ್ಲೆಕ್ಸ್‌ನಲ್ಲಿ ಕಾಣಬಹುದು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನೀಡಿದ ದೂರಿನ ಬಳಿಕ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಉಡುಪಿ ಪಟ್ಟಣ ಪುರಸಭೆ ಸೋಮವಾರ ನಿರ್ಧರಿಸಿದೆ. ಮುಂದಿನ 15 ದಿನಗಳ ಕಾಲ ನಗರಸಭೆಯ ಮನವಿಯಂತೆ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸರು ಹಾಜರಿರುತ್ತಾರೆ ಎಂದು ಉಡುಪಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ದಿ ನ್ಯೂಸ್ ಮಿನಿಟ್‌’ ಜಾಲತಾಣ, “ಬ್ಯಾನರ್‌ನ ಸ್ಥಳಕ್ಕೆ ಭೇಟಿ ನೀಡಿದಾಗ ಬ್ರಹ್ಮಗಿರಿ ವೃತ್ತದಲ್ಲಿ ಎಂಟು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಸ್ವಾತಂತ್ರ್ಯೋತ್ಸವದ ನಿಮಿತ್ತ ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಅಳವಡಿಸಲಾಗಿದ್ದು, ಇದನ್ನು ಪ್ರಮೋದ್ ಉಚ್ಚಿಲ, ಶೈಲೇಶ್ ದೇವಾಡಿಗ ಮತ್ತು ಯೋಗೀಶ್ ಕುತ್ಪಾಡಿ ಅವರು ಅಳವಡಿಸಿದ್ದಾರೆ. ಪ್ರಮೋದ್, ಉಡುಪಿಯ ಬಲಪಂಥೀಯ ಸಂಘಟನೆ ಹಿಂದೂ ಮಹಾಸಭಾಕ್ಕೆ ಸೇರಿದವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ” ಎಂದು ವಿವರಿಸಿದೆ.

ಬ್ಯಾನರ್ ವಿರುದ್ಧ ಎಸ್‌ಡಿಪಿಐ ದೂರು ನೀಡಿದ್ದರೂ, ಪಟ್ಟಣದ ಪುರಸಭೆಯು ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಇರಿಸಲು ಮತ್ತು ಹೆಚ್ಚಿನ ರಕ್ಷಣೆ ನೀಡಲು ನಿರ್ಧರಿಸಿದೆ.

ಪಾಲಿಕೆ ಆಯುಕ್ತ ಉದಯಕುಮಾರ್ ಶೆಟ್ಟಿ ಮಾತನಾಡಿ, ‘ಬ್ಯಾನರ್ ಹಾಕಲು ಯಾವುದೇ ನಿರ್ಬಂಧವಿಲ್ಲ ಮತ್ತು ಅರ್ಜಿದಾರರು ಮೂರು ದಿನ ಮುಂಚಿತವಾಗಿ ಹಾಕಲು ಅನುಮತಿ ಕೋರಿದ್ದಾರೆ’ ಎಂದು ಹೇಳಿದ್ದಾರೆ.

ವಿವಾದಾತ್ಮಕ ಪ್ಲೆಕ್ಸ್‌ಗಳನ್ನು ಹಾಕಿದ ಕಾರಣ ಶಿವಮೊಗ್ಗ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿದೆ. ಆಗಸ್ಟ್ 15ರಂದು ಶಿವಮೊಗ್ಗ ಜಿಲ್ಲೆಯ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಅವರ ಪೋಸ್ಟರ್ ಹಾಕಿದ್ದರಿಂದ ಉದ್ವಿಗ್ನತೆ ಉಂಟಾಗಿತ್ತು.

ಪೋಸ್ಟರ್‌ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಪ್ರೇಮ್ ಸಿಂಗ್ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿದ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ, ಸಾವರ್ಕರ್ ಅವರ ಪೋಸ್ಟರ್‌ಗಳನ್ನು ಪ್ರದರ್ಶಿಸಿದ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದಕ್ಕಾಗಿ ಎಸ್‌ಡಿಪಿಐ ಸದಸ್ಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲೂ ಸಾವರ್ಕರ್‌ ಫೋಟೋವನ್ನು ಹಾಕಲಾಗಿತ್ತು. ದೇಶಕ್ಕಾಗಿ ಸೇವೆ ಸಲ್ಲಿಸಿದ, ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಫೋಟೋವನ್ನು ಕಡೆಗಣಿಸಿದ್ದು, ಭಾರೀ ಟೀಕೆಗೆ ಒಳಗಾಗಿತ್ತು.

ಟೀಕೆಗಳ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, “ಆರ್ ಎಸ್ ಎಸ್ ಆದರ್ಶಗಳಿಗೆ ತಲೆಬಾಗುತ್ತೇನೆ” ಎಂದಿದ್ದಾರೆ.

ದೇಶ ವಿಭಜನೆಯಲ್ಲೂ ಸಾವರ್ಕರ್ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ನಿರಂತರ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆಯುವ ಮೂಲಕ ಸಾವರ್ಕರ್‌ ಇತಿಹಾಸದಲ್ಲಿ ದಾಖಲಾಗಿದ್ದಾರೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಇತಿಹಾಸವನ್ನು ತಿರುಚುವ ಕೆಲಸಕ್ಕೆ ಕೈಹಾಕಿದೆ ಎಂಬ ಆರೋಪಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದಿಗೂ ಹಿಂದೂ ರಾಷ್ಟ್ರದ ಪ್ರತಿಪಾದಕ ಆಗಿರಲಿಲ್ಲ. ಈಗ ಅವರ ಫೋಟೊ ಜೊತೆಗೆ ಸಾವರ್ಕರ್ ಫೋಟೊ ಹಾಕುವ ಮೂಲಕ ಮನುವಾದಿಗಳು ನೇತಾಜಿಯವರಿಗೆ ಅವಮಾನ ಮಾಡಿದ್ದಾರೆ. ಇದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...