HomeUncategorizedಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

- Advertisement -
- Advertisement -

ಬಹುತ್ವವನ್ನು ಪ್ರತಿಪಾದಿಸುವ ಏಳು ಬಣ್ಣಗಳ ಬಾವುಟವನ್ನು ಹಿಡಿಯುವ ಮೂಲಕ ಉಡುಪಿಯ ಸಾಮರಸ್ಯ ನಡಿಗೆಗೆ ಚಾಲನೆ ನೀಡಲಾಯಿತು.

ಇಲ್ಲಿನ ಅಜ್ಜರಕಾಡು ಹುತಾತ್ಮರ ಚೌಕದಿಂದ ಕ್ರಿಶ್ಚಿಯನ್‌ ಶಾಲೆ ಮೈದಾನದವರೆಗೆ ನಡೆಯುವ ಮೆರವಣಿಗೆಗೆ ವಿವಿಧ ಸಮುದಾಯಗಳ ಧರ್ಮಗುರುಗಳು, ವಿವಿಧ ಕ್ಷೇತ್ರದ ಗಣ್ಯರು ಬಾವುಟ ಬೀಸಿ ಚಾಲನೆ ನೀಡಿದರು.

ಬಹುತ್ವ ಕರ್ನಾಟಕ ಸಂಚಾಲಕರಾದ ವಿನಯ್‌ ಶ್ರೀನಿವಾಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, “ಉಡುಪಿ ಕನಕದಾಸರ ನಾಡು, ಹಾಜಿ ಅಬ್ದುಲ್ಲರ ನಾಡು. ಈ ನಾಡಿನಲ್ಲಿ ವಿವಿಧ ಪರಂಪರೆಗಳಿವೆ. ಸಹಬಾಳ್ವೆ ಇಲ್ಲಿನ ದಿನನಿತ್ಯದ ಭಾಗವಾಗಿದೆ. ಇಂದು ದ್ವೇಷ ಹೆಚ್ಚುತ್ತಿದೆ. ದ್ವೇಷ ಎಂಬುದು ಬೀದಿಬೀದಿಗಳಲ್ಲಿ ಹರಡುತ್ತಿದೆ. ಗೋಡೆಗಳನ್ನು ಕಟ್ಟಲಾಗುತ್ತಿದೆ. ಮಾನವೀಯತೆ ಅಪಾಯದಲ್ಲಿದೆ” ಎಂದರು.

ದ್ವೇಷವನ್ನು ಬಿತ್ತಲು ಹೊರಟವರ ಎದುರು ನಾವು ಪ್ರತಿ ಮನುಷ್ಯರಲ್ಲಿನ ಪ್ರೀತಿಯನ್ನು ಹಂಚಲು ಹೊರಟಿದ್ದೇವೆ. ಅದಕ್ಕಾಗಿ ಸಹಬಾಳ್ವೆ ಸಮಾವೇಶ ಆಯೋಜಿಸಿದ್ದೇವೆ. ಸಾವಿರಾರು ಸಂಖ್ಯೆಯ ಜನರು ಪ್ರೀತಿ ಹಂಚಲು ಬಂದಿದ್ದಾರೆ. ಎಲ್ಲ ಧರ್ಮದವರು, ಜಾತಿಯವರು ಜೊತೆಗೂಡಿದ್ದಾರೆ. ಉಡುಪಿ ಹಾಗೂ ಬೆಂಗಳೂರಿನಲ್ಲಿ ಕರಪತ್ರ ಹಂಚಲು ಹೋದಾಗ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಈ ಕೆಲಸ ಅಗತ್ಯವಿತ್ತು ಎಂದು ಬಹಳಷ್ಟು ಜನರು ತಿಳಿಸಿದರು” ಎಂದರು.

ಸಹಬಾಳ್ವೆ ಎಂದರೆ ಪ್ರಜಾಪ್ರಭುತ್ವ, ಒಬ್ಬರಿಗೊಬ್ಬರು ಪ್ರೀತಿಯಿಂದ ಇರುವುದು ಸಹಬಾಳ್ವೆ. ಸಹಬಾಳ್ವೆ ಸಾಮರಸ್ಯವು ನಮ್ಮ ಸಂವಿಧಾನ ಪೀಠಿಕೆಯ ಭಾಗವಾಗಿದೆ. ನಾಡಿನಲ್ಲಿ ಆರ್ಥಿಕ, ಸಾಮಾಜಿಕ ಸಮಾನತಯೆ ಇಲ್ಲವಾಗಿದೆ. ಸಮಾನತೆ ಬರಬೇಕಾದರೆ ಸಹಬಾಳ್ವೆ ಬೇಕಿದೆ. ಪ್ರೀತಿಯಿಂದ  ದ್ವೇಷವನ್ನು ಸೋಲಿಸೋಣ. ಸೇತುವೆಯನ್ನು ಕಟ್ಟೋಣ ಎಂದು ಆಶಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಸಾಮರಸ್ಯ, ಸಹಬಾಳ್ವೆ ಸಹಜವಾಗಿ ಬರಬೇಕು. ಪ್ರಕೃತಿಯಲ್ಲಿ ಅದು ಸಹಜವಾಗಿದೆ. ಅದು ಮನುಷ್ಯರಲ್ಲಿಯೂ ಸಹಜವಾಗಬೇಕಿದೆ” ಎಂದರು.

ದಮನಿತ ಸಮುದಾಯಗಳು ಈ ದೇಶಕ್ಕೆ ಅನ್ಯಾಯ ಮಾಡಿಲ್ಲ. ಈ ನಾಡನ್ನು ಕಟ್ಟಿದ ಜನರಿವರು. ಈ ನಾಡಿಗಾಗಿ ಶ್ರಮಿಸಿದವರು. ದೇಶದ ಯಾವುದೇ ಆಂತರಿಕ ವಿಚಾರವನ್ನುಇನ್ನೊಂದು ದೇಶಕ್ಕೆ ತಿಳಿಸಿಲ್ಲ. ಇನ್ನೊಬ್ಬರನ್ನು ಕೊಲ್ಲುವ ಮನಸ್ಸು ನಮ್ಮದಲ್ಲ. ಆ ವೈದಿಕ ಪರಂಪರೆ ಇಡೀ ದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಬುದ್ಧ, ಬಸವ, ನಾರಾಯಣ ಗುರುರವರ ಭಾರತ ಮಾಯವಾಗಿ, ಪೇಶ್ವೆ ಹಾಗೂ ಬುಲ್ಡೋಜರ್‌ ಭಾರತ ಬರುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಉಡುಪಿಗೆ ಸಾವಿರಾರು ಜನರು ನದಿಗಳಾಗಿ ಬಂದಿದ್ದಾರೆ. ಕುವೆಂಪು ಅವರು ಕಂಡಂತಹ ಸರ್ವಜನ ಶಾಂತಿಯ ತೋಟ ಕದಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ,  ”ನಾವು ಮೈಮರೆತ್ತಿದ್ದೆವು. ಆದರೆ ಇವರು ಎಚ್ಚರಿಸಿದ್ದಾರೆ.  ನಮಗೆ ಎಚ್ಚರವನ್ನು ನೀಡಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಮರೆತ್ತಿದ್ದನ್ನು ನೆನಪು ಮಾಡಿದ್ದೀರಿ. ಕೂಡಿ ಬಾಳುವುದಕ್ಕೆ ಯಾವ ದೊಣ್ಣೆನಾಯಕನ ಅನುಮತಿಯೂ ಬೇಕಿಲ್ಲ.  ನಾವು ಜಗತ್ತಿನಾದ್ಯಂತ ಪ್ರೀತಿಯ ಹಸಿವನ್ನು ತಣಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ಕೂಡಿ ಬದುಕಿದ ಪರಂಪರೆಯನ್ನು ನಾವು ಮುಂದುವರಿಸುತ್ತೇವೆ. ಈ ಪರಂಪರೆಯ ಕೊಂಡಿಯನ್ನು ಮುಂದಕ್ಕೆ ತೆಗೆದುಕೊಂಡು ಹೋಗೋಣ. ಬಹುಸಂಖ್ಯಾತದ ಕೋಮುವಾದಕ್ಕೆ  ಅಲ್ಪಸಂಖ್ಯಾತ ಕೋಮುವಾದ ಉತ್ತರವಲ್ಲ. ಬೆಂಕಿಗೆ ತಣ್ಣೀರೇ ಉತ್ತರ. ಪ್ರೀತಿಗೆ ಜಯವಾಗಲಿ, ದುಡಿಯುವ ಶಕ್ತಿಗೆ ಜಯವಾಗಲಿ” ಎಂದು ಘೋಷಣೆ ಕೂಗಿದರು.

ರೈತ ನಾಯಕ ಚಾಮರಸ ಮಾಲೀಪಾಟೀಲ್‌ ಮಾತನಾಡಿ, `ಸಮಾಜವನ್ನು ಇಬ್ಬಾಗ ಮಾಡಿ ಅಧಿಕಾರ ಹಿಡಿಯಲು ಹೊರಟಿರುವವರನ್ನು ದೇಶದಲ್ಲಿ ನೋಡುತ್ತಿದ್ದೇವೆ. ಇದು ರಾಜ್ಯದಲ್ಲಿಯೂ ನಡೆಯುತ್ತಿದೆ. ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ವ್ಯಾಪಾರಕ್ಕೆ ನಿರ್ಬಂಧ, ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಪ್ರಕರಣ ಮೊದಲಾಗಿ ಈಗ ಆಜಾನ್‌ಗೆ ಬಂದು ನಿಂತಿದೆ. ಉದ್ಯೋಗವಿಲ್ಲದೆ ಯುವಕರು ಬೀದಿ ಬೀದಿ ಅಲೆಯುತ್ತಿದ್ದಾರೆ. ಸಾಲಗಾರರಾಗಿ ಮೂರುವರೆ ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಮಾತನಾಡಿ. ಅತಿವೃಷ್ಟಿಯಿಂದ ನೊಂದ ರೈತರಿಗೆ ಪರಿಹಾರ ನೀಡಿ. ಅದನ್ನು ಬಿಟ್ಟು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದೀರಿ. ರೈತರು, ದಲಿತರು, ಮುಸ್ಲಿಮರು ಒಗ್ಗೂಡಿ ಅಹಿಸಾತ್ಮಕವಾಗಿ ಹೋರಾಟ ಮಾಡಬೇಕಾಗಿದೆ. ಈ ಫ್ಯಾಸಿಸ್ಟ್‌ ವಿರುದ್ಧ ಕೆಲಸ ಮಾಡೋಣ. ಇಡೀ ದೇಶಕ್ಕೆ ಸಂದೇಶ ಕೊಡೋಣ” ಎಂದರು.

`ಅನುಪಮ’ ಮಾಸಪತ್ರಿಕೆಯ ಉಪಸಂಪಾದಕಿ ಸಬೀಹ ಫಾತಿಮ ಮಾತನಾಡಿ, “ಮಾನವೀಯ ಸಂದೇಶವನ್ನು ಕಳುಹಿಸಬೇಕಾಗಿದೆ. ದ್ವೇಷಭಕ್ತರ ಎಲ್ಲ ಸುಳ್ಳುಗಳನ್ನು ಸೋಲಿಸಲು ಸಾಧ್ಯವಿದೆ. ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಸೆಟೆದು ನಿಲ್ಲಬೇಕು. ಈ ನೆಲದಲ್ಲಿರುವ ಎಲ್ಲ ಮನುಷ್ಯರನ್ನು ಮನುಷ್ಯರೆಂದು ಸಾರಬೇಕಾಗಿದೆ. ನಮ್ಮ ಊರಿನ ಗಲ್ಲಿಗಲ್ಲಿಗೂ ಈ ಸಂದೇಶವನ್ನು ಕಳುಹಿಸೋಣ” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೋಹನ್‌ ರಾಜ್‌ ಮಾತನಾಡಿ, “ಇದು ನಮ್ಮ ದೇಶ. ನಮ್ಮನ್ನು ದೇಶ ಬಿಟ್ಟು ಹೋಗಿ ಎನ್ನುತ್ತಿದ್ದಾರೆ. ಮಧ್ಯ ಏಷಿಯಾದಿಂದ ಬಂದವರು ವಾಪಸ್‌ ಹೋಗಬಹುದು. ನೀವು ನಕಲಿ ದೇಶಭಕ್ತರು. ನಾವು ಶಾಂತಿಯನ್ನು ಪಾಲಿಸೋರು. ನಾವೇನಾದರೂ ತಿರುಗಿ ಬಿದ್ದರೆ ನೀವ್ಯಾರು ಎದುರಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಸಂವಿಧಾನ ರಚನಾ ಸಭೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರವೇಶಿಸಲು ಕಾರಣರಾದವರು ಮುಸ್ಲಿಮರು. ಅಂಬೇಡ್ಕರ್‌ ಅವರನ್ನು ಗೆಲ್ಲಿಸಿ ಕಳುಹಿಸಿದರು. ಮುಸ್ಲಿಮರೆಂದರೆ ಮಾಜಿ ದಲಿತರು. ನಾವು ನಿಮ್ಮ ರಕ್ತ ಹಂಚಿಕೊಂಡು ಹುಟ್ಟಿದ್ದೇವೆ. ನಿಮ್ಮೊಂದಿಗೆ ಇರುತ್ತೇವೆ” ಎಂದು ಅಭಯ ನೀಡಿದರು.

ರೈತ ಮುಖಂಡ ಎಚ್‌.ಆರ್‌.ಬಸವರಾಜಪ್ಪ ಮಾತನಾಡಿ, “ರಾಮಸೇನೆ, ಬಜರಂಗದವಳದವರೇ ನಿಮ್ಮ ಮಕ್ಕಳನ್ನು ಜಟ್ಕಾ ಕಟ್‌ಗೆ ಕಳುಹಿಸಿ. ಬಡ ಮಕ್ಕಳನ್ನು  ವಿದ್ಯಾಭ್ಯಾಸದಿಂದ ವಂಚಿಸುತ್ತಿದ್ದೀರಿ. ನಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾಗಿದೆ” ಎಂದು ಹೇಳಿದರು.

ಯುವ ಹೋರಾಟಗಾರ್ತಿ ನಜ್ಮಾ ಮಾತನಾಡಿ- ಯಾವ ಧರ್ಮವೂ ಯಾರನ್ನೂ ದ್ವೇಷಿಸಲು ಹೇಳಿಲ್ಲ. ಧರ್ಮದ ರಕ್ಷಣೆ ಹೆಸರಲ್ಲಿ, ಧರ್ಮದ ಗುತ್ತಿಗೆ ಪಡೆದವರು ಮನುಷ್ಯ ಮನುಷ್ಯರ ನಡುವೆ ಕಂದಕವನ್ನು ಉಂಟು ಮಾಡುತ್ತಿದ್ದಾರೆ. ಧರ್ಮವನ್ನು ನಿಜವಾಗಿ ಅನುಸರಿಸುವವರು ಪ್ರೀತಿಯನ್ನು ಹಂಚುತ್ತಾರೆ” ಎಂದರು.

ನಂತರ ಬೃಹತ್‌ ಮೆರವಣಿಗೆ ಆರಂಭವಾಯಿತು. ಇದಕ್ಕೂ ಮೊದಲು ಬಾಗಲಕೋಟೆಯಿಂದ ಪಾದಯಾತ್ರೆ ಆರಂಭಿಸಿ ಉಡುಪಿಗೆ ಬಂದ ಎಸ್‌.ಕೆ.ನಾಗರಾಜ್‌ ತಂಡವನ್ನು ಅಭಿನಂದಿಸಲಾಯಿತು.

(ಕಾರ್ಯಕ್ರಮದ ಅಪ್‌ಡೇಟ್ ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Jai Bharath….. Jai Bharath..
    … Jai Bharath…… Helona…. Jai Hind nalli Hindu maathra ide…. Jai Bharath nalli Hindu Muslim Christian Dalith Sikh….
    et… Yellavu ide

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....