HomeUncategorizedಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

- Advertisement -
- Advertisement -

ಬಹುತ್ವವನ್ನು ಪ್ರತಿಪಾದಿಸುವ ಏಳು ಬಣ್ಣಗಳ ಬಾವುಟವನ್ನು ಹಿಡಿಯುವ ಮೂಲಕ ಉಡುಪಿಯ ಸಾಮರಸ್ಯ ನಡಿಗೆಗೆ ಚಾಲನೆ ನೀಡಲಾಯಿತು.

ಇಲ್ಲಿನ ಅಜ್ಜರಕಾಡು ಹುತಾತ್ಮರ ಚೌಕದಿಂದ ಕ್ರಿಶ್ಚಿಯನ್‌ ಶಾಲೆ ಮೈದಾನದವರೆಗೆ ನಡೆಯುವ ಮೆರವಣಿಗೆಗೆ ವಿವಿಧ ಸಮುದಾಯಗಳ ಧರ್ಮಗುರುಗಳು, ವಿವಿಧ ಕ್ಷೇತ್ರದ ಗಣ್ಯರು ಬಾವುಟ ಬೀಸಿ ಚಾಲನೆ ನೀಡಿದರು.

ಬಹುತ್ವ ಕರ್ನಾಟಕ ಸಂಚಾಲಕರಾದ ವಿನಯ್‌ ಶ್ರೀನಿವಾಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, “ಉಡುಪಿ ಕನಕದಾಸರ ನಾಡು, ಹಾಜಿ ಅಬ್ದುಲ್ಲರ ನಾಡು. ಈ ನಾಡಿನಲ್ಲಿ ವಿವಿಧ ಪರಂಪರೆಗಳಿವೆ. ಸಹಬಾಳ್ವೆ ಇಲ್ಲಿನ ದಿನನಿತ್ಯದ ಭಾಗವಾಗಿದೆ. ಇಂದು ದ್ವೇಷ ಹೆಚ್ಚುತ್ತಿದೆ. ದ್ವೇಷ ಎಂಬುದು ಬೀದಿಬೀದಿಗಳಲ್ಲಿ ಹರಡುತ್ತಿದೆ. ಗೋಡೆಗಳನ್ನು ಕಟ್ಟಲಾಗುತ್ತಿದೆ. ಮಾನವೀಯತೆ ಅಪಾಯದಲ್ಲಿದೆ” ಎಂದರು.

ದ್ವೇಷವನ್ನು ಬಿತ್ತಲು ಹೊರಟವರ ಎದುರು ನಾವು ಪ್ರತಿ ಮನುಷ್ಯರಲ್ಲಿನ ಪ್ರೀತಿಯನ್ನು ಹಂಚಲು ಹೊರಟಿದ್ದೇವೆ. ಅದಕ್ಕಾಗಿ ಸಹಬಾಳ್ವೆ ಸಮಾವೇಶ ಆಯೋಜಿಸಿದ್ದೇವೆ. ಸಾವಿರಾರು ಸಂಖ್ಯೆಯ ಜನರು ಪ್ರೀತಿ ಹಂಚಲು ಬಂದಿದ್ದಾರೆ. ಎಲ್ಲ ಧರ್ಮದವರು, ಜಾತಿಯವರು ಜೊತೆಗೂಡಿದ್ದಾರೆ. ಉಡುಪಿ ಹಾಗೂ ಬೆಂಗಳೂರಿನಲ್ಲಿ ಕರಪತ್ರ ಹಂಚಲು ಹೋದಾಗ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಈ ಕೆಲಸ ಅಗತ್ಯವಿತ್ತು ಎಂದು ಬಹಳಷ್ಟು ಜನರು ತಿಳಿಸಿದರು” ಎಂದರು.

ಸಹಬಾಳ್ವೆ ಎಂದರೆ ಪ್ರಜಾಪ್ರಭುತ್ವ, ಒಬ್ಬರಿಗೊಬ್ಬರು ಪ್ರೀತಿಯಿಂದ ಇರುವುದು ಸಹಬಾಳ್ವೆ. ಸಹಬಾಳ್ವೆ ಸಾಮರಸ್ಯವು ನಮ್ಮ ಸಂವಿಧಾನ ಪೀಠಿಕೆಯ ಭಾಗವಾಗಿದೆ. ನಾಡಿನಲ್ಲಿ ಆರ್ಥಿಕ, ಸಾಮಾಜಿಕ ಸಮಾನತಯೆ ಇಲ್ಲವಾಗಿದೆ. ಸಮಾನತೆ ಬರಬೇಕಾದರೆ ಸಹಬಾಳ್ವೆ ಬೇಕಿದೆ. ಪ್ರೀತಿಯಿಂದ  ದ್ವೇಷವನ್ನು ಸೋಲಿಸೋಣ. ಸೇತುವೆಯನ್ನು ಕಟ್ಟೋಣ ಎಂದು ಆಶಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಸಾಮರಸ್ಯ, ಸಹಬಾಳ್ವೆ ಸಹಜವಾಗಿ ಬರಬೇಕು. ಪ್ರಕೃತಿಯಲ್ಲಿ ಅದು ಸಹಜವಾಗಿದೆ. ಅದು ಮನುಷ್ಯರಲ್ಲಿಯೂ ಸಹಜವಾಗಬೇಕಿದೆ” ಎಂದರು.

ದಮನಿತ ಸಮುದಾಯಗಳು ಈ ದೇಶಕ್ಕೆ ಅನ್ಯಾಯ ಮಾಡಿಲ್ಲ. ಈ ನಾಡನ್ನು ಕಟ್ಟಿದ ಜನರಿವರು. ಈ ನಾಡಿಗಾಗಿ ಶ್ರಮಿಸಿದವರು. ದೇಶದ ಯಾವುದೇ ಆಂತರಿಕ ವಿಚಾರವನ್ನುಇನ್ನೊಂದು ದೇಶಕ್ಕೆ ತಿಳಿಸಿಲ್ಲ. ಇನ್ನೊಬ್ಬರನ್ನು ಕೊಲ್ಲುವ ಮನಸ್ಸು ನಮ್ಮದಲ್ಲ. ಆ ವೈದಿಕ ಪರಂಪರೆ ಇಡೀ ದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಬುದ್ಧ, ಬಸವ, ನಾರಾಯಣ ಗುರುರವರ ಭಾರತ ಮಾಯವಾಗಿ, ಪೇಶ್ವೆ ಹಾಗೂ ಬುಲ್ಡೋಜರ್‌ ಭಾರತ ಬರುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಉಡುಪಿಗೆ ಸಾವಿರಾರು ಜನರು ನದಿಗಳಾಗಿ ಬಂದಿದ್ದಾರೆ. ಕುವೆಂಪು ಅವರು ಕಂಡಂತಹ ಸರ್ವಜನ ಶಾಂತಿಯ ತೋಟ ಕದಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ,  ”ನಾವು ಮೈಮರೆತ್ತಿದ್ದೆವು. ಆದರೆ ಇವರು ಎಚ್ಚರಿಸಿದ್ದಾರೆ.  ನಮಗೆ ಎಚ್ಚರವನ್ನು ನೀಡಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಮರೆತ್ತಿದ್ದನ್ನು ನೆನಪು ಮಾಡಿದ್ದೀರಿ. ಕೂಡಿ ಬಾಳುವುದಕ್ಕೆ ಯಾವ ದೊಣ್ಣೆನಾಯಕನ ಅನುಮತಿಯೂ ಬೇಕಿಲ್ಲ.  ನಾವು ಜಗತ್ತಿನಾದ್ಯಂತ ಪ್ರೀತಿಯ ಹಸಿವನ್ನು ತಣಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ಕೂಡಿ ಬದುಕಿದ ಪರಂಪರೆಯನ್ನು ನಾವು ಮುಂದುವರಿಸುತ್ತೇವೆ. ಈ ಪರಂಪರೆಯ ಕೊಂಡಿಯನ್ನು ಮುಂದಕ್ಕೆ ತೆಗೆದುಕೊಂಡು ಹೋಗೋಣ. ಬಹುಸಂಖ್ಯಾತದ ಕೋಮುವಾದಕ್ಕೆ  ಅಲ್ಪಸಂಖ್ಯಾತ ಕೋಮುವಾದ ಉತ್ತರವಲ್ಲ. ಬೆಂಕಿಗೆ ತಣ್ಣೀರೇ ಉತ್ತರ. ಪ್ರೀತಿಗೆ ಜಯವಾಗಲಿ, ದುಡಿಯುವ ಶಕ್ತಿಗೆ ಜಯವಾಗಲಿ” ಎಂದು ಘೋಷಣೆ ಕೂಗಿದರು.

ರೈತ ನಾಯಕ ಚಾಮರಸ ಮಾಲೀಪಾಟೀಲ್‌ ಮಾತನಾಡಿ, `ಸಮಾಜವನ್ನು ಇಬ್ಬಾಗ ಮಾಡಿ ಅಧಿಕಾರ ಹಿಡಿಯಲು ಹೊರಟಿರುವವರನ್ನು ದೇಶದಲ್ಲಿ ನೋಡುತ್ತಿದ್ದೇವೆ. ಇದು ರಾಜ್ಯದಲ್ಲಿಯೂ ನಡೆಯುತ್ತಿದೆ. ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ವ್ಯಾಪಾರಕ್ಕೆ ನಿರ್ಬಂಧ, ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಪ್ರಕರಣ ಮೊದಲಾಗಿ ಈಗ ಆಜಾನ್‌ಗೆ ಬಂದು ನಿಂತಿದೆ. ಉದ್ಯೋಗವಿಲ್ಲದೆ ಯುವಕರು ಬೀದಿ ಬೀದಿ ಅಲೆಯುತ್ತಿದ್ದಾರೆ. ಸಾಲಗಾರರಾಗಿ ಮೂರುವರೆ ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಮಾತನಾಡಿ. ಅತಿವೃಷ್ಟಿಯಿಂದ ನೊಂದ ರೈತರಿಗೆ ಪರಿಹಾರ ನೀಡಿ. ಅದನ್ನು ಬಿಟ್ಟು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದೀರಿ. ರೈತರು, ದಲಿತರು, ಮುಸ್ಲಿಮರು ಒಗ್ಗೂಡಿ ಅಹಿಸಾತ್ಮಕವಾಗಿ ಹೋರಾಟ ಮಾಡಬೇಕಾಗಿದೆ. ಈ ಫ್ಯಾಸಿಸ್ಟ್‌ ವಿರುದ್ಧ ಕೆಲಸ ಮಾಡೋಣ. ಇಡೀ ದೇಶಕ್ಕೆ ಸಂದೇಶ ಕೊಡೋಣ” ಎಂದರು.

`ಅನುಪಮ’ ಮಾಸಪತ್ರಿಕೆಯ ಉಪಸಂಪಾದಕಿ ಸಬೀಹ ಫಾತಿಮ ಮಾತನಾಡಿ, “ಮಾನವೀಯ ಸಂದೇಶವನ್ನು ಕಳುಹಿಸಬೇಕಾಗಿದೆ. ದ್ವೇಷಭಕ್ತರ ಎಲ್ಲ ಸುಳ್ಳುಗಳನ್ನು ಸೋಲಿಸಲು ಸಾಧ್ಯವಿದೆ. ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಸೆಟೆದು ನಿಲ್ಲಬೇಕು. ಈ ನೆಲದಲ್ಲಿರುವ ಎಲ್ಲ ಮನುಷ್ಯರನ್ನು ಮನುಷ್ಯರೆಂದು ಸಾರಬೇಕಾಗಿದೆ. ನಮ್ಮ ಊರಿನ ಗಲ್ಲಿಗಲ್ಲಿಗೂ ಈ ಸಂದೇಶವನ್ನು ಕಳುಹಿಸೋಣ” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೋಹನ್‌ ರಾಜ್‌ ಮಾತನಾಡಿ, “ಇದು ನಮ್ಮ ದೇಶ. ನಮ್ಮನ್ನು ದೇಶ ಬಿಟ್ಟು ಹೋಗಿ ಎನ್ನುತ್ತಿದ್ದಾರೆ. ಮಧ್ಯ ಏಷಿಯಾದಿಂದ ಬಂದವರು ವಾಪಸ್‌ ಹೋಗಬಹುದು. ನೀವು ನಕಲಿ ದೇಶಭಕ್ತರು. ನಾವು ಶಾಂತಿಯನ್ನು ಪಾಲಿಸೋರು. ನಾವೇನಾದರೂ ತಿರುಗಿ ಬಿದ್ದರೆ ನೀವ್ಯಾರು ಎದುರಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಸಂವಿಧಾನ ರಚನಾ ಸಭೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರವೇಶಿಸಲು ಕಾರಣರಾದವರು ಮುಸ್ಲಿಮರು. ಅಂಬೇಡ್ಕರ್‌ ಅವರನ್ನು ಗೆಲ್ಲಿಸಿ ಕಳುಹಿಸಿದರು. ಮುಸ್ಲಿಮರೆಂದರೆ ಮಾಜಿ ದಲಿತರು. ನಾವು ನಿಮ್ಮ ರಕ್ತ ಹಂಚಿಕೊಂಡು ಹುಟ್ಟಿದ್ದೇವೆ. ನಿಮ್ಮೊಂದಿಗೆ ಇರುತ್ತೇವೆ” ಎಂದು ಅಭಯ ನೀಡಿದರು.

ರೈತ ಮುಖಂಡ ಎಚ್‌.ಆರ್‌.ಬಸವರಾಜಪ್ಪ ಮಾತನಾಡಿ, “ರಾಮಸೇನೆ, ಬಜರಂಗದವಳದವರೇ ನಿಮ್ಮ ಮಕ್ಕಳನ್ನು ಜಟ್ಕಾ ಕಟ್‌ಗೆ ಕಳುಹಿಸಿ. ಬಡ ಮಕ್ಕಳನ್ನು  ವಿದ್ಯಾಭ್ಯಾಸದಿಂದ ವಂಚಿಸುತ್ತಿದ್ದೀರಿ. ನಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾಗಿದೆ” ಎಂದು ಹೇಳಿದರು.

ಯುವ ಹೋರಾಟಗಾರ್ತಿ ನಜ್ಮಾ ಮಾತನಾಡಿ- ಯಾವ ಧರ್ಮವೂ ಯಾರನ್ನೂ ದ್ವೇಷಿಸಲು ಹೇಳಿಲ್ಲ. ಧರ್ಮದ ರಕ್ಷಣೆ ಹೆಸರಲ್ಲಿ, ಧರ್ಮದ ಗುತ್ತಿಗೆ ಪಡೆದವರು ಮನುಷ್ಯ ಮನುಷ್ಯರ ನಡುವೆ ಕಂದಕವನ್ನು ಉಂಟು ಮಾಡುತ್ತಿದ್ದಾರೆ. ಧರ್ಮವನ್ನು ನಿಜವಾಗಿ ಅನುಸರಿಸುವವರು ಪ್ರೀತಿಯನ್ನು ಹಂಚುತ್ತಾರೆ” ಎಂದರು.

ನಂತರ ಬೃಹತ್‌ ಮೆರವಣಿಗೆ ಆರಂಭವಾಯಿತು. ಇದಕ್ಕೂ ಮೊದಲು ಬಾಗಲಕೋಟೆಯಿಂದ ಪಾದಯಾತ್ರೆ ಆರಂಭಿಸಿ ಉಡುಪಿಗೆ ಬಂದ ಎಸ್‌.ಕೆ.ನಾಗರಾಜ್‌ ತಂಡವನ್ನು ಅಭಿನಂದಿಸಲಾಯಿತು.

(ಕಾರ್ಯಕ್ರಮದ ಅಪ್‌ಡೇಟ್ ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Jai Bharath….. Jai Bharath..
    … Jai Bharath…… Helona…. Jai Hind nalli Hindu maathra ide…. Jai Bharath nalli Hindu Muslim Christian Dalith Sikh….
    et… Yellavu ide

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...