HomeUncategorizedಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

- Advertisement -
- Advertisement -

ಬಹುತ್ವವನ್ನು ಪ್ರತಿಪಾದಿಸುವ ಏಳು ಬಣ್ಣಗಳ ಬಾವುಟವನ್ನು ಹಿಡಿಯುವ ಮೂಲಕ ಉಡುಪಿಯ ಸಾಮರಸ್ಯ ನಡಿಗೆಗೆ ಚಾಲನೆ ನೀಡಲಾಯಿತು.

ಇಲ್ಲಿನ ಅಜ್ಜರಕಾಡು ಹುತಾತ್ಮರ ಚೌಕದಿಂದ ಕ್ರಿಶ್ಚಿಯನ್‌ ಶಾಲೆ ಮೈದಾನದವರೆಗೆ ನಡೆಯುವ ಮೆರವಣಿಗೆಗೆ ವಿವಿಧ ಸಮುದಾಯಗಳ ಧರ್ಮಗುರುಗಳು, ವಿವಿಧ ಕ್ಷೇತ್ರದ ಗಣ್ಯರು ಬಾವುಟ ಬೀಸಿ ಚಾಲನೆ ನೀಡಿದರು.

ಬಹುತ್ವ ಕರ್ನಾಟಕ ಸಂಚಾಲಕರಾದ ವಿನಯ್‌ ಶ್ರೀನಿವಾಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, “ಉಡುಪಿ ಕನಕದಾಸರ ನಾಡು, ಹಾಜಿ ಅಬ್ದುಲ್ಲರ ನಾಡು. ಈ ನಾಡಿನಲ್ಲಿ ವಿವಿಧ ಪರಂಪರೆಗಳಿವೆ. ಸಹಬಾಳ್ವೆ ಇಲ್ಲಿನ ದಿನನಿತ್ಯದ ಭಾಗವಾಗಿದೆ. ಇಂದು ದ್ವೇಷ ಹೆಚ್ಚುತ್ತಿದೆ. ದ್ವೇಷ ಎಂಬುದು ಬೀದಿಬೀದಿಗಳಲ್ಲಿ ಹರಡುತ್ತಿದೆ. ಗೋಡೆಗಳನ್ನು ಕಟ್ಟಲಾಗುತ್ತಿದೆ. ಮಾನವೀಯತೆ ಅಪಾಯದಲ್ಲಿದೆ” ಎಂದರು.

ದ್ವೇಷವನ್ನು ಬಿತ್ತಲು ಹೊರಟವರ ಎದುರು ನಾವು ಪ್ರತಿ ಮನುಷ್ಯರಲ್ಲಿನ ಪ್ರೀತಿಯನ್ನು ಹಂಚಲು ಹೊರಟಿದ್ದೇವೆ. ಅದಕ್ಕಾಗಿ ಸಹಬಾಳ್ವೆ ಸಮಾವೇಶ ಆಯೋಜಿಸಿದ್ದೇವೆ. ಸಾವಿರಾರು ಸಂಖ್ಯೆಯ ಜನರು ಪ್ರೀತಿ ಹಂಚಲು ಬಂದಿದ್ದಾರೆ. ಎಲ್ಲ ಧರ್ಮದವರು, ಜಾತಿಯವರು ಜೊತೆಗೂಡಿದ್ದಾರೆ. ಉಡುಪಿ ಹಾಗೂ ಬೆಂಗಳೂರಿನಲ್ಲಿ ಕರಪತ್ರ ಹಂಚಲು ಹೋದಾಗ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಈ ಕೆಲಸ ಅಗತ್ಯವಿತ್ತು ಎಂದು ಬಹಳಷ್ಟು ಜನರು ತಿಳಿಸಿದರು” ಎಂದರು.

ಸಹಬಾಳ್ವೆ ಎಂದರೆ ಪ್ರಜಾಪ್ರಭುತ್ವ, ಒಬ್ಬರಿಗೊಬ್ಬರು ಪ್ರೀತಿಯಿಂದ ಇರುವುದು ಸಹಬಾಳ್ವೆ. ಸಹಬಾಳ್ವೆ ಸಾಮರಸ್ಯವು ನಮ್ಮ ಸಂವಿಧಾನ ಪೀಠಿಕೆಯ ಭಾಗವಾಗಿದೆ. ನಾಡಿನಲ್ಲಿ ಆರ್ಥಿಕ, ಸಾಮಾಜಿಕ ಸಮಾನತಯೆ ಇಲ್ಲವಾಗಿದೆ. ಸಮಾನತೆ ಬರಬೇಕಾದರೆ ಸಹಬಾಳ್ವೆ ಬೇಕಿದೆ. ಪ್ರೀತಿಯಿಂದ  ದ್ವೇಷವನ್ನು ಸೋಲಿಸೋಣ. ಸೇತುವೆಯನ್ನು ಕಟ್ಟೋಣ ಎಂದು ಆಶಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಸಾಮರಸ್ಯ, ಸಹಬಾಳ್ವೆ ಸಹಜವಾಗಿ ಬರಬೇಕು. ಪ್ರಕೃತಿಯಲ್ಲಿ ಅದು ಸಹಜವಾಗಿದೆ. ಅದು ಮನುಷ್ಯರಲ್ಲಿಯೂ ಸಹಜವಾಗಬೇಕಿದೆ” ಎಂದರು.

ದಮನಿತ ಸಮುದಾಯಗಳು ಈ ದೇಶಕ್ಕೆ ಅನ್ಯಾಯ ಮಾಡಿಲ್ಲ. ಈ ನಾಡನ್ನು ಕಟ್ಟಿದ ಜನರಿವರು. ಈ ನಾಡಿಗಾಗಿ ಶ್ರಮಿಸಿದವರು. ದೇಶದ ಯಾವುದೇ ಆಂತರಿಕ ವಿಚಾರವನ್ನುಇನ್ನೊಂದು ದೇಶಕ್ಕೆ ತಿಳಿಸಿಲ್ಲ. ಇನ್ನೊಬ್ಬರನ್ನು ಕೊಲ್ಲುವ ಮನಸ್ಸು ನಮ್ಮದಲ್ಲ. ಆ ವೈದಿಕ ಪರಂಪರೆ ಇಡೀ ದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಬುದ್ಧ, ಬಸವ, ನಾರಾಯಣ ಗುರುರವರ ಭಾರತ ಮಾಯವಾಗಿ, ಪೇಶ್ವೆ ಹಾಗೂ ಬುಲ್ಡೋಜರ್‌ ಭಾರತ ಬರುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಉಡುಪಿಗೆ ಸಾವಿರಾರು ಜನರು ನದಿಗಳಾಗಿ ಬಂದಿದ್ದಾರೆ. ಕುವೆಂಪು ಅವರು ಕಂಡಂತಹ ಸರ್ವಜನ ಶಾಂತಿಯ ತೋಟ ಕದಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ,  ”ನಾವು ಮೈಮರೆತ್ತಿದ್ದೆವು. ಆದರೆ ಇವರು ಎಚ್ಚರಿಸಿದ್ದಾರೆ.  ನಮಗೆ ಎಚ್ಚರವನ್ನು ನೀಡಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಮರೆತ್ತಿದ್ದನ್ನು ನೆನಪು ಮಾಡಿದ್ದೀರಿ. ಕೂಡಿ ಬಾಳುವುದಕ್ಕೆ ಯಾವ ದೊಣ್ಣೆನಾಯಕನ ಅನುಮತಿಯೂ ಬೇಕಿಲ್ಲ.  ನಾವು ಜಗತ್ತಿನಾದ್ಯಂತ ಪ್ರೀತಿಯ ಹಸಿವನ್ನು ತಣಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ಕೂಡಿ ಬದುಕಿದ ಪರಂಪರೆಯನ್ನು ನಾವು ಮುಂದುವರಿಸುತ್ತೇವೆ. ಈ ಪರಂಪರೆಯ ಕೊಂಡಿಯನ್ನು ಮುಂದಕ್ಕೆ ತೆಗೆದುಕೊಂಡು ಹೋಗೋಣ. ಬಹುಸಂಖ್ಯಾತದ ಕೋಮುವಾದಕ್ಕೆ  ಅಲ್ಪಸಂಖ್ಯಾತ ಕೋಮುವಾದ ಉತ್ತರವಲ್ಲ. ಬೆಂಕಿಗೆ ತಣ್ಣೀರೇ ಉತ್ತರ. ಪ್ರೀತಿಗೆ ಜಯವಾಗಲಿ, ದುಡಿಯುವ ಶಕ್ತಿಗೆ ಜಯವಾಗಲಿ” ಎಂದು ಘೋಷಣೆ ಕೂಗಿದರು.

ರೈತ ನಾಯಕ ಚಾಮರಸ ಮಾಲೀಪಾಟೀಲ್‌ ಮಾತನಾಡಿ, `ಸಮಾಜವನ್ನು ಇಬ್ಬಾಗ ಮಾಡಿ ಅಧಿಕಾರ ಹಿಡಿಯಲು ಹೊರಟಿರುವವರನ್ನು ದೇಶದಲ್ಲಿ ನೋಡುತ್ತಿದ್ದೇವೆ. ಇದು ರಾಜ್ಯದಲ್ಲಿಯೂ ನಡೆಯುತ್ತಿದೆ. ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ವ್ಯಾಪಾರಕ್ಕೆ ನಿರ್ಬಂಧ, ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಪ್ರಕರಣ ಮೊದಲಾಗಿ ಈಗ ಆಜಾನ್‌ಗೆ ಬಂದು ನಿಂತಿದೆ. ಉದ್ಯೋಗವಿಲ್ಲದೆ ಯುವಕರು ಬೀದಿ ಬೀದಿ ಅಲೆಯುತ್ತಿದ್ದಾರೆ. ಸಾಲಗಾರರಾಗಿ ಮೂರುವರೆ ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಮಾತನಾಡಿ. ಅತಿವೃಷ್ಟಿಯಿಂದ ನೊಂದ ರೈತರಿಗೆ ಪರಿಹಾರ ನೀಡಿ. ಅದನ್ನು ಬಿಟ್ಟು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದೀರಿ. ರೈತರು, ದಲಿತರು, ಮುಸ್ಲಿಮರು ಒಗ್ಗೂಡಿ ಅಹಿಸಾತ್ಮಕವಾಗಿ ಹೋರಾಟ ಮಾಡಬೇಕಾಗಿದೆ. ಈ ಫ್ಯಾಸಿಸ್ಟ್‌ ವಿರುದ್ಧ ಕೆಲಸ ಮಾಡೋಣ. ಇಡೀ ದೇಶಕ್ಕೆ ಸಂದೇಶ ಕೊಡೋಣ” ಎಂದರು.

`ಅನುಪಮ’ ಮಾಸಪತ್ರಿಕೆಯ ಉಪಸಂಪಾದಕಿ ಸಬೀಹ ಫಾತಿಮ ಮಾತನಾಡಿ, “ಮಾನವೀಯ ಸಂದೇಶವನ್ನು ಕಳುಹಿಸಬೇಕಾಗಿದೆ. ದ್ವೇಷಭಕ್ತರ ಎಲ್ಲ ಸುಳ್ಳುಗಳನ್ನು ಸೋಲಿಸಲು ಸಾಧ್ಯವಿದೆ. ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಸೆಟೆದು ನಿಲ್ಲಬೇಕು. ಈ ನೆಲದಲ್ಲಿರುವ ಎಲ್ಲ ಮನುಷ್ಯರನ್ನು ಮನುಷ್ಯರೆಂದು ಸಾರಬೇಕಾಗಿದೆ. ನಮ್ಮ ಊರಿನ ಗಲ್ಲಿಗಲ್ಲಿಗೂ ಈ ಸಂದೇಶವನ್ನು ಕಳುಹಿಸೋಣ” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೋಹನ್‌ ರಾಜ್‌ ಮಾತನಾಡಿ, “ಇದು ನಮ್ಮ ದೇಶ. ನಮ್ಮನ್ನು ದೇಶ ಬಿಟ್ಟು ಹೋಗಿ ಎನ್ನುತ್ತಿದ್ದಾರೆ. ಮಧ್ಯ ಏಷಿಯಾದಿಂದ ಬಂದವರು ವಾಪಸ್‌ ಹೋಗಬಹುದು. ನೀವು ನಕಲಿ ದೇಶಭಕ್ತರು. ನಾವು ಶಾಂತಿಯನ್ನು ಪಾಲಿಸೋರು. ನಾವೇನಾದರೂ ತಿರುಗಿ ಬಿದ್ದರೆ ನೀವ್ಯಾರು ಎದುರಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಸಂವಿಧಾನ ರಚನಾ ಸಭೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರವೇಶಿಸಲು ಕಾರಣರಾದವರು ಮುಸ್ಲಿಮರು. ಅಂಬೇಡ್ಕರ್‌ ಅವರನ್ನು ಗೆಲ್ಲಿಸಿ ಕಳುಹಿಸಿದರು. ಮುಸ್ಲಿಮರೆಂದರೆ ಮಾಜಿ ದಲಿತರು. ನಾವು ನಿಮ್ಮ ರಕ್ತ ಹಂಚಿಕೊಂಡು ಹುಟ್ಟಿದ್ದೇವೆ. ನಿಮ್ಮೊಂದಿಗೆ ಇರುತ್ತೇವೆ” ಎಂದು ಅಭಯ ನೀಡಿದರು.

ರೈತ ಮುಖಂಡ ಎಚ್‌.ಆರ್‌.ಬಸವರಾಜಪ್ಪ ಮಾತನಾಡಿ, “ರಾಮಸೇನೆ, ಬಜರಂಗದವಳದವರೇ ನಿಮ್ಮ ಮಕ್ಕಳನ್ನು ಜಟ್ಕಾ ಕಟ್‌ಗೆ ಕಳುಹಿಸಿ. ಬಡ ಮಕ್ಕಳನ್ನು  ವಿದ್ಯಾಭ್ಯಾಸದಿಂದ ವಂಚಿಸುತ್ತಿದ್ದೀರಿ. ನಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾಗಿದೆ” ಎಂದು ಹೇಳಿದರು.

ಯುವ ಹೋರಾಟಗಾರ್ತಿ ನಜ್ಮಾ ಮಾತನಾಡಿ- ಯಾವ ಧರ್ಮವೂ ಯಾರನ್ನೂ ದ್ವೇಷಿಸಲು ಹೇಳಿಲ್ಲ. ಧರ್ಮದ ರಕ್ಷಣೆ ಹೆಸರಲ್ಲಿ, ಧರ್ಮದ ಗುತ್ತಿಗೆ ಪಡೆದವರು ಮನುಷ್ಯ ಮನುಷ್ಯರ ನಡುವೆ ಕಂದಕವನ್ನು ಉಂಟು ಮಾಡುತ್ತಿದ್ದಾರೆ. ಧರ್ಮವನ್ನು ನಿಜವಾಗಿ ಅನುಸರಿಸುವವರು ಪ್ರೀತಿಯನ್ನು ಹಂಚುತ್ತಾರೆ” ಎಂದರು.

ನಂತರ ಬೃಹತ್‌ ಮೆರವಣಿಗೆ ಆರಂಭವಾಯಿತು. ಇದಕ್ಕೂ ಮೊದಲು ಬಾಗಲಕೋಟೆಯಿಂದ ಪಾದಯಾತ್ರೆ ಆರಂಭಿಸಿ ಉಡುಪಿಗೆ ಬಂದ ಎಸ್‌.ಕೆ.ನಾಗರಾಜ್‌ ತಂಡವನ್ನು ಅಭಿನಂದಿಸಲಾಯಿತು.

(ಕಾರ್ಯಕ್ರಮದ ಅಪ್‌ಡೇಟ್ ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Jai Bharath….. Jai Bharath..
    … Jai Bharath…… Helona…. Jai Hind nalli Hindu maathra ide…. Jai Bharath nalli Hindu Muslim Christian Dalith Sikh….
    et… Yellavu ide

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...