HomeUncategorizedಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

- Advertisement -
- Advertisement -

ಬಹುತ್ವವನ್ನು ಪ್ರತಿಪಾದಿಸುವ ಏಳು ಬಣ್ಣಗಳ ಬಾವುಟವನ್ನು ಹಿಡಿಯುವ ಮೂಲಕ ಉಡುಪಿಯ ಸಾಮರಸ್ಯ ನಡಿಗೆಗೆ ಚಾಲನೆ ನೀಡಲಾಯಿತು.

ಇಲ್ಲಿನ ಅಜ್ಜರಕಾಡು ಹುತಾತ್ಮರ ಚೌಕದಿಂದ ಕ್ರಿಶ್ಚಿಯನ್‌ ಶಾಲೆ ಮೈದಾನದವರೆಗೆ ನಡೆಯುವ ಮೆರವಣಿಗೆಗೆ ವಿವಿಧ ಸಮುದಾಯಗಳ ಧರ್ಮಗುರುಗಳು, ವಿವಿಧ ಕ್ಷೇತ್ರದ ಗಣ್ಯರು ಬಾವುಟ ಬೀಸಿ ಚಾಲನೆ ನೀಡಿದರು.

ಬಹುತ್ವ ಕರ್ನಾಟಕ ಸಂಚಾಲಕರಾದ ವಿನಯ್‌ ಶ್ರೀನಿವಾಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, “ಉಡುಪಿ ಕನಕದಾಸರ ನಾಡು, ಹಾಜಿ ಅಬ್ದುಲ್ಲರ ನಾಡು. ಈ ನಾಡಿನಲ್ಲಿ ವಿವಿಧ ಪರಂಪರೆಗಳಿವೆ. ಸಹಬಾಳ್ವೆ ಇಲ್ಲಿನ ದಿನನಿತ್ಯದ ಭಾಗವಾಗಿದೆ. ಇಂದು ದ್ವೇಷ ಹೆಚ್ಚುತ್ತಿದೆ. ದ್ವೇಷ ಎಂಬುದು ಬೀದಿಬೀದಿಗಳಲ್ಲಿ ಹರಡುತ್ತಿದೆ. ಗೋಡೆಗಳನ್ನು ಕಟ್ಟಲಾಗುತ್ತಿದೆ. ಮಾನವೀಯತೆ ಅಪಾಯದಲ್ಲಿದೆ” ಎಂದರು.

ದ್ವೇಷವನ್ನು ಬಿತ್ತಲು ಹೊರಟವರ ಎದುರು ನಾವು ಪ್ರತಿ ಮನುಷ್ಯರಲ್ಲಿನ ಪ್ರೀತಿಯನ್ನು ಹಂಚಲು ಹೊರಟಿದ್ದೇವೆ. ಅದಕ್ಕಾಗಿ ಸಹಬಾಳ್ವೆ ಸಮಾವೇಶ ಆಯೋಜಿಸಿದ್ದೇವೆ. ಸಾವಿರಾರು ಸಂಖ್ಯೆಯ ಜನರು ಪ್ರೀತಿ ಹಂಚಲು ಬಂದಿದ್ದಾರೆ. ಎಲ್ಲ ಧರ್ಮದವರು, ಜಾತಿಯವರು ಜೊತೆಗೂಡಿದ್ದಾರೆ. ಉಡುಪಿ ಹಾಗೂ ಬೆಂಗಳೂರಿನಲ್ಲಿ ಕರಪತ್ರ ಹಂಚಲು ಹೋದಾಗ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಈ ಕೆಲಸ ಅಗತ್ಯವಿತ್ತು ಎಂದು ಬಹಳಷ್ಟು ಜನರು ತಿಳಿಸಿದರು” ಎಂದರು.

ಸಹಬಾಳ್ವೆ ಎಂದರೆ ಪ್ರಜಾಪ್ರಭುತ್ವ, ಒಬ್ಬರಿಗೊಬ್ಬರು ಪ್ರೀತಿಯಿಂದ ಇರುವುದು ಸಹಬಾಳ್ವೆ. ಸಹಬಾಳ್ವೆ ಸಾಮರಸ್ಯವು ನಮ್ಮ ಸಂವಿಧಾನ ಪೀಠಿಕೆಯ ಭಾಗವಾಗಿದೆ. ನಾಡಿನಲ್ಲಿ ಆರ್ಥಿಕ, ಸಾಮಾಜಿಕ ಸಮಾನತಯೆ ಇಲ್ಲವಾಗಿದೆ. ಸಮಾನತೆ ಬರಬೇಕಾದರೆ ಸಹಬಾಳ್ವೆ ಬೇಕಿದೆ. ಪ್ರೀತಿಯಿಂದ  ದ್ವೇಷವನ್ನು ಸೋಲಿಸೋಣ. ಸೇತುವೆಯನ್ನು ಕಟ್ಟೋಣ ಎಂದು ಆಶಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಸಾಮರಸ್ಯ, ಸಹಬಾಳ್ವೆ ಸಹಜವಾಗಿ ಬರಬೇಕು. ಪ್ರಕೃತಿಯಲ್ಲಿ ಅದು ಸಹಜವಾಗಿದೆ. ಅದು ಮನುಷ್ಯರಲ್ಲಿಯೂ ಸಹಜವಾಗಬೇಕಿದೆ” ಎಂದರು.

ದಮನಿತ ಸಮುದಾಯಗಳು ಈ ದೇಶಕ್ಕೆ ಅನ್ಯಾಯ ಮಾಡಿಲ್ಲ. ಈ ನಾಡನ್ನು ಕಟ್ಟಿದ ಜನರಿವರು. ಈ ನಾಡಿಗಾಗಿ ಶ್ರಮಿಸಿದವರು. ದೇಶದ ಯಾವುದೇ ಆಂತರಿಕ ವಿಚಾರವನ್ನುಇನ್ನೊಂದು ದೇಶಕ್ಕೆ ತಿಳಿಸಿಲ್ಲ. ಇನ್ನೊಬ್ಬರನ್ನು ಕೊಲ್ಲುವ ಮನಸ್ಸು ನಮ್ಮದಲ್ಲ. ಆ ವೈದಿಕ ಪರಂಪರೆ ಇಡೀ ದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಬುದ್ಧ, ಬಸವ, ನಾರಾಯಣ ಗುರುರವರ ಭಾರತ ಮಾಯವಾಗಿ, ಪೇಶ್ವೆ ಹಾಗೂ ಬುಲ್ಡೋಜರ್‌ ಭಾರತ ಬರುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಉಡುಪಿಗೆ ಸಾವಿರಾರು ಜನರು ನದಿಗಳಾಗಿ ಬಂದಿದ್ದಾರೆ. ಕುವೆಂಪು ಅವರು ಕಂಡಂತಹ ಸರ್ವಜನ ಶಾಂತಿಯ ತೋಟ ಕದಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ,  ”ನಾವು ಮೈಮರೆತ್ತಿದ್ದೆವು. ಆದರೆ ಇವರು ಎಚ್ಚರಿಸಿದ್ದಾರೆ.  ನಮಗೆ ಎಚ್ಚರವನ್ನು ನೀಡಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಮರೆತ್ತಿದ್ದನ್ನು ನೆನಪು ಮಾಡಿದ್ದೀರಿ. ಕೂಡಿ ಬಾಳುವುದಕ್ಕೆ ಯಾವ ದೊಣ್ಣೆನಾಯಕನ ಅನುಮತಿಯೂ ಬೇಕಿಲ್ಲ.  ನಾವು ಜಗತ್ತಿನಾದ್ಯಂತ ಪ್ರೀತಿಯ ಹಸಿವನ್ನು ತಣಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ಕೂಡಿ ಬದುಕಿದ ಪರಂಪರೆಯನ್ನು ನಾವು ಮುಂದುವರಿಸುತ್ತೇವೆ. ಈ ಪರಂಪರೆಯ ಕೊಂಡಿಯನ್ನು ಮುಂದಕ್ಕೆ ತೆಗೆದುಕೊಂಡು ಹೋಗೋಣ. ಬಹುಸಂಖ್ಯಾತದ ಕೋಮುವಾದಕ್ಕೆ  ಅಲ್ಪಸಂಖ್ಯಾತ ಕೋಮುವಾದ ಉತ್ತರವಲ್ಲ. ಬೆಂಕಿಗೆ ತಣ್ಣೀರೇ ಉತ್ತರ. ಪ್ರೀತಿಗೆ ಜಯವಾಗಲಿ, ದುಡಿಯುವ ಶಕ್ತಿಗೆ ಜಯವಾಗಲಿ” ಎಂದು ಘೋಷಣೆ ಕೂಗಿದರು.

ರೈತ ನಾಯಕ ಚಾಮರಸ ಮಾಲೀಪಾಟೀಲ್‌ ಮಾತನಾಡಿ, `ಸಮಾಜವನ್ನು ಇಬ್ಬಾಗ ಮಾಡಿ ಅಧಿಕಾರ ಹಿಡಿಯಲು ಹೊರಟಿರುವವರನ್ನು ದೇಶದಲ್ಲಿ ನೋಡುತ್ತಿದ್ದೇವೆ. ಇದು ರಾಜ್ಯದಲ್ಲಿಯೂ ನಡೆಯುತ್ತಿದೆ. ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ವ್ಯಾಪಾರಕ್ಕೆ ನಿರ್ಬಂಧ, ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಪ್ರಕರಣ ಮೊದಲಾಗಿ ಈಗ ಆಜಾನ್‌ಗೆ ಬಂದು ನಿಂತಿದೆ. ಉದ್ಯೋಗವಿಲ್ಲದೆ ಯುವಕರು ಬೀದಿ ಬೀದಿ ಅಲೆಯುತ್ತಿದ್ದಾರೆ. ಸಾಲಗಾರರಾಗಿ ಮೂರುವರೆ ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಮಾತನಾಡಿ. ಅತಿವೃಷ್ಟಿಯಿಂದ ನೊಂದ ರೈತರಿಗೆ ಪರಿಹಾರ ನೀಡಿ. ಅದನ್ನು ಬಿಟ್ಟು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದೀರಿ. ರೈತರು, ದಲಿತರು, ಮುಸ್ಲಿಮರು ಒಗ್ಗೂಡಿ ಅಹಿಸಾತ್ಮಕವಾಗಿ ಹೋರಾಟ ಮಾಡಬೇಕಾಗಿದೆ. ಈ ಫ್ಯಾಸಿಸ್ಟ್‌ ವಿರುದ್ಧ ಕೆಲಸ ಮಾಡೋಣ. ಇಡೀ ದೇಶಕ್ಕೆ ಸಂದೇಶ ಕೊಡೋಣ” ಎಂದರು.

`ಅನುಪಮ’ ಮಾಸಪತ್ರಿಕೆಯ ಉಪಸಂಪಾದಕಿ ಸಬೀಹ ಫಾತಿಮ ಮಾತನಾಡಿ, “ಮಾನವೀಯ ಸಂದೇಶವನ್ನು ಕಳುಹಿಸಬೇಕಾಗಿದೆ. ದ್ವೇಷಭಕ್ತರ ಎಲ್ಲ ಸುಳ್ಳುಗಳನ್ನು ಸೋಲಿಸಲು ಸಾಧ್ಯವಿದೆ. ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಸೆಟೆದು ನಿಲ್ಲಬೇಕು. ಈ ನೆಲದಲ್ಲಿರುವ ಎಲ್ಲ ಮನುಷ್ಯರನ್ನು ಮನುಷ್ಯರೆಂದು ಸಾರಬೇಕಾಗಿದೆ. ನಮ್ಮ ಊರಿನ ಗಲ್ಲಿಗಲ್ಲಿಗೂ ಈ ಸಂದೇಶವನ್ನು ಕಳುಹಿಸೋಣ” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೋಹನ್‌ ರಾಜ್‌ ಮಾತನಾಡಿ, “ಇದು ನಮ್ಮ ದೇಶ. ನಮ್ಮನ್ನು ದೇಶ ಬಿಟ್ಟು ಹೋಗಿ ಎನ್ನುತ್ತಿದ್ದಾರೆ. ಮಧ್ಯ ಏಷಿಯಾದಿಂದ ಬಂದವರು ವಾಪಸ್‌ ಹೋಗಬಹುದು. ನೀವು ನಕಲಿ ದೇಶಭಕ್ತರು. ನಾವು ಶಾಂತಿಯನ್ನು ಪಾಲಿಸೋರು. ನಾವೇನಾದರೂ ತಿರುಗಿ ಬಿದ್ದರೆ ನೀವ್ಯಾರು ಎದುರಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಸಂವಿಧಾನ ರಚನಾ ಸಭೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರವೇಶಿಸಲು ಕಾರಣರಾದವರು ಮುಸ್ಲಿಮರು. ಅಂಬೇಡ್ಕರ್‌ ಅವರನ್ನು ಗೆಲ್ಲಿಸಿ ಕಳುಹಿಸಿದರು. ಮುಸ್ಲಿಮರೆಂದರೆ ಮಾಜಿ ದಲಿತರು. ನಾವು ನಿಮ್ಮ ರಕ್ತ ಹಂಚಿಕೊಂಡು ಹುಟ್ಟಿದ್ದೇವೆ. ನಿಮ್ಮೊಂದಿಗೆ ಇರುತ್ತೇವೆ” ಎಂದು ಅಭಯ ನೀಡಿದರು.

ರೈತ ಮುಖಂಡ ಎಚ್‌.ಆರ್‌.ಬಸವರಾಜಪ್ಪ ಮಾತನಾಡಿ, “ರಾಮಸೇನೆ, ಬಜರಂಗದವಳದವರೇ ನಿಮ್ಮ ಮಕ್ಕಳನ್ನು ಜಟ್ಕಾ ಕಟ್‌ಗೆ ಕಳುಹಿಸಿ. ಬಡ ಮಕ್ಕಳನ್ನು  ವಿದ್ಯಾಭ್ಯಾಸದಿಂದ ವಂಚಿಸುತ್ತಿದ್ದೀರಿ. ನಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾಗಿದೆ” ಎಂದು ಹೇಳಿದರು.

ಯುವ ಹೋರಾಟಗಾರ್ತಿ ನಜ್ಮಾ ಮಾತನಾಡಿ- ಯಾವ ಧರ್ಮವೂ ಯಾರನ್ನೂ ದ್ವೇಷಿಸಲು ಹೇಳಿಲ್ಲ. ಧರ್ಮದ ರಕ್ಷಣೆ ಹೆಸರಲ್ಲಿ, ಧರ್ಮದ ಗುತ್ತಿಗೆ ಪಡೆದವರು ಮನುಷ್ಯ ಮನುಷ್ಯರ ನಡುವೆ ಕಂದಕವನ್ನು ಉಂಟು ಮಾಡುತ್ತಿದ್ದಾರೆ. ಧರ್ಮವನ್ನು ನಿಜವಾಗಿ ಅನುಸರಿಸುವವರು ಪ್ರೀತಿಯನ್ನು ಹಂಚುತ್ತಾರೆ” ಎಂದರು.

ನಂತರ ಬೃಹತ್‌ ಮೆರವಣಿಗೆ ಆರಂಭವಾಯಿತು. ಇದಕ್ಕೂ ಮೊದಲು ಬಾಗಲಕೋಟೆಯಿಂದ ಪಾದಯಾತ್ರೆ ಆರಂಭಿಸಿ ಉಡುಪಿಗೆ ಬಂದ ಎಸ್‌.ಕೆ.ನಾಗರಾಜ್‌ ತಂಡವನ್ನು ಅಭಿನಂದಿಸಲಾಯಿತು.

(ಕಾರ್ಯಕ್ರಮದ ಅಪ್‌ಡೇಟ್ ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Jai Bharath….. Jai Bharath..
    … Jai Bharath…… Helona…. Jai Hind nalli Hindu maathra ide…. Jai Bharath nalli Hindu Muslim Christian Dalith Sikh….
    et… Yellavu ide

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...