HomeUncategorizedಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

- Advertisement -
- Advertisement -

ಬಹುತ್ವವನ್ನು ಪ್ರತಿಪಾದಿಸುವ ಏಳು ಬಣ್ಣಗಳ ಬಾವುಟವನ್ನು ಹಿಡಿಯುವ ಮೂಲಕ ಉಡುಪಿಯ ಸಾಮರಸ್ಯ ನಡಿಗೆಗೆ ಚಾಲನೆ ನೀಡಲಾಯಿತು.

ಇಲ್ಲಿನ ಅಜ್ಜರಕಾಡು ಹುತಾತ್ಮರ ಚೌಕದಿಂದ ಕ್ರಿಶ್ಚಿಯನ್‌ ಶಾಲೆ ಮೈದಾನದವರೆಗೆ ನಡೆಯುವ ಮೆರವಣಿಗೆಗೆ ವಿವಿಧ ಸಮುದಾಯಗಳ ಧರ್ಮಗುರುಗಳು, ವಿವಿಧ ಕ್ಷೇತ್ರದ ಗಣ್ಯರು ಬಾವುಟ ಬೀಸಿ ಚಾಲನೆ ನೀಡಿದರು.

ಬಹುತ್ವ ಕರ್ನಾಟಕ ಸಂಚಾಲಕರಾದ ವಿನಯ್‌ ಶ್ರೀನಿವಾಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, “ಉಡುಪಿ ಕನಕದಾಸರ ನಾಡು, ಹಾಜಿ ಅಬ್ದುಲ್ಲರ ನಾಡು. ಈ ನಾಡಿನಲ್ಲಿ ವಿವಿಧ ಪರಂಪರೆಗಳಿವೆ. ಸಹಬಾಳ್ವೆ ಇಲ್ಲಿನ ದಿನನಿತ್ಯದ ಭಾಗವಾಗಿದೆ. ಇಂದು ದ್ವೇಷ ಹೆಚ್ಚುತ್ತಿದೆ. ದ್ವೇಷ ಎಂಬುದು ಬೀದಿಬೀದಿಗಳಲ್ಲಿ ಹರಡುತ್ತಿದೆ. ಗೋಡೆಗಳನ್ನು ಕಟ್ಟಲಾಗುತ್ತಿದೆ. ಮಾನವೀಯತೆ ಅಪಾಯದಲ್ಲಿದೆ” ಎಂದರು.

ದ್ವೇಷವನ್ನು ಬಿತ್ತಲು ಹೊರಟವರ ಎದುರು ನಾವು ಪ್ರತಿ ಮನುಷ್ಯರಲ್ಲಿನ ಪ್ರೀತಿಯನ್ನು ಹಂಚಲು ಹೊರಟಿದ್ದೇವೆ. ಅದಕ್ಕಾಗಿ ಸಹಬಾಳ್ವೆ ಸಮಾವೇಶ ಆಯೋಜಿಸಿದ್ದೇವೆ. ಸಾವಿರಾರು ಸಂಖ್ಯೆಯ ಜನರು ಪ್ರೀತಿ ಹಂಚಲು ಬಂದಿದ್ದಾರೆ. ಎಲ್ಲ ಧರ್ಮದವರು, ಜಾತಿಯವರು ಜೊತೆಗೂಡಿದ್ದಾರೆ. ಉಡುಪಿ ಹಾಗೂ ಬೆಂಗಳೂರಿನಲ್ಲಿ ಕರಪತ್ರ ಹಂಚಲು ಹೋದಾಗ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಈ ಕೆಲಸ ಅಗತ್ಯವಿತ್ತು ಎಂದು ಬಹಳಷ್ಟು ಜನರು ತಿಳಿಸಿದರು” ಎಂದರು.

ಸಹಬಾಳ್ವೆ ಎಂದರೆ ಪ್ರಜಾಪ್ರಭುತ್ವ, ಒಬ್ಬರಿಗೊಬ್ಬರು ಪ್ರೀತಿಯಿಂದ ಇರುವುದು ಸಹಬಾಳ್ವೆ. ಸಹಬಾಳ್ವೆ ಸಾಮರಸ್ಯವು ನಮ್ಮ ಸಂವಿಧಾನ ಪೀಠಿಕೆಯ ಭಾಗವಾಗಿದೆ. ನಾಡಿನಲ್ಲಿ ಆರ್ಥಿಕ, ಸಾಮಾಜಿಕ ಸಮಾನತಯೆ ಇಲ್ಲವಾಗಿದೆ. ಸಮಾನತೆ ಬರಬೇಕಾದರೆ ಸಹಬಾಳ್ವೆ ಬೇಕಿದೆ. ಪ್ರೀತಿಯಿಂದ  ದ್ವೇಷವನ್ನು ಸೋಲಿಸೋಣ. ಸೇತುವೆಯನ್ನು ಕಟ್ಟೋಣ ಎಂದು ಆಶಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಸಾಮರಸ್ಯ, ಸಹಬಾಳ್ವೆ ಸಹಜವಾಗಿ ಬರಬೇಕು. ಪ್ರಕೃತಿಯಲ್ಲಿ ಅದು ಸಹಜವಾಗಿದೆ. ಅದು ಮನುಷ್ಯರಲ್ಲಿಯೂ ಸಹಜವಾಗಬೇಕಿದೆ” ಎಂದರು.

ದಮನಿತ ಸಮುದಾಯಗಳು ಈ ದೇಶಕ್ಕೆ ಅನ್ಯಾಯ ಮಾಡಿಲ್ಲ. ಈ ನಾಡನ್ನು ಕಟ್ಟಿದ ಜನರಿವರು. ಈ ನಾಡಿಗಾಗಿ ಶ್ರಮಿಸಿದವರು. ದೇಶದ ಯಾವುದೇ ಆಂತರಿಕ ವಿಚಾರವನ್ನುಇನ್ನೊಂದು ದೇಶಕ್ಕೆ ತಿಳಿಸಿಲ್ಲ. ಇನ್ನೊಬ್ಬರನ್ನು ಕೊಲ್ಲುವ ಮನಸ್ಸು ನಮ್ಮದಲ್ಲ. ಆ ವೈದಿಕ ಪರಂಪರೆ ಇಡೀ ದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಬುದ್ಧ, ಬಸವ, ನಾರಾಯಣ ಗುರುರವರ ಭಾರತ ಮಾಯವಾಗಿ, ಪೇಶ್ವೆ ಹಾಗೂ ಬುಲ್ಡೋಜರ್‌ ಭಾರತ ಬರುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಉಡುಪಿಗೆ ಸಾವಿರಾರು ಜನರು ನದಿಗಳಾಗಿ ಬಂದಿದ್ದಾರೆ. ಕುವೆಂಪು ಅವರು ಕಂಡಂತಹ ಸರ್ವಜನ ಶಾಂತಿಯ ತೋಟ ಕದಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ,  ”ನಾವು ಮೈಮರೆತ್ತಿದ್ದೆವು. ಆದರೆ ಇವರು ಎಚ್ಚರಿಸಿದ್ದಾರೆ.  ನಮಗೆ ಎಚ್ಚರವನ್ನು ನೀಡಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಮರೆತ್ತಿದ್ದನ್ನು ನೆನಪು ಮಾಡಿದ್ದೀರಿ. ಕೂಡಿ ಬಾಳುವುದಕ್ಕೆ ಯಾವ ದೊಣ್ಣೆನಾಯಕನ ಅನುಮತಿಯೂ ಬೇಕಿಲ್ಲ.  ನಾವು ಜಗತ್ತಿನಾದ್ಯಂತ ಪ್ರೀತಿಯ ಹಸಿವನ್ನು ತಣಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ಕೂಡಿ ಬದುಕಿದ ಪರಂಪರೆಯನ್ನು ನಾವು ಮುಂದುವರಿಸುತ್ತೇವೆ. ಈ ಪರಂಪರೆಯ ಕೊಂಡಿಯನ್ನು ಮುಂದಕ್ಕೆ ತೆಗೆದುಕೊಂಡು ಹೋಗೋಣ. ಬಹುಸಂಖ್ಯಾತದ ಕೋಮುವಾದಕ್ಕೆ  ಅಲ್ಪಸಂಖ್ಯಾತ ಕೋಮುವಾದ ಉತ್ತರವಲ್ಲ. ಬೆಂಕಿಗೆ ತಣ್ಣೀರೇ ಉತ್ತರ. ಪ್ರೀತಿಗೆ ಜಯವಾಗಲಿ, ದುಡಿಯುವ ಶಕ್ತಿಗೆ ಜಯವಾಗಲಿ” ಎಂದು ಘೋಷಣೆ ಕೂಗಿದರು.

ರೈತ ನಾಯಕ ಚಾಮರಸ ಮಾಲೀಪಾಟೀಲ್‌ ಮಾತನಾಡಿ, `ಸಮಾಜವನ್ನು ಇಬ್ಬಾಗ ಮಾಡಿ ಅಧಿಕಾರ ಹಿಡಿಯಲು ಹೊರಟಿರುವವರನ್ನು ದೇಶದಲ್ಲಿ ನೋಡುತ್ತಿದ್ದೇವೆ. ಇದು ರಾಜ್ಯದಲ್ಲಿಯೂ ನಡೆಯುತ್ತಿದೆ. ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ವ್ಯಾಪಾರಕ್ಕೆ ನಿರ್ಬಂಧ, ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಪ್ರಕರಣ ಮೊದಲಾಗಿ ಈಗ ಆಜಾನ್‌ಗೆ ಬಂದು ನಿಂತಿದೆ. ಉದ್ಯೋಗವಿಲ್ಲದೆ ಯುವಕರು ಬೀದಿ ಬೀದಿ ಅಲೆಯುತ್ತಿದ್ದಾರೆ. ಸಾಲಗಾರರಾಗಿ ಮೂರುವರೆ ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಮಾತನಾಡಿ. ಅತಿವೃಷ್ಟಿಯಿಂದ ನೊಂದ ರೈತರಿಗೆ ಪರಿಹಾರ ನೀಡಿ. ಅದನ್ನು ಬಿಟ್ಟು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದೀರಿ. ರೈತರು, ದಲಿತರು, ಮುಸ್ಲಿಮರು ಒಗ್ಗೂಡಿ ಅಹಿಸಾತ್ಮಕವಾಗಿ ಹೋರಾಟ ಮಾಡಬೇಕಾಗಿದೆ. ಈ ಫ್ಯಾಸಿಸ್ಟ್‌ ವಿರುದ್ಧ ಕೆಲಸ ಮಾಡೋಣ. ಇಡೀ ದೇಶಕ್ಕೆ ಸಂದೇಶ ಕೊಡೋಣ” ಎಂದರು.

`ಅನುಪಮ’ ಮಾಸಪತ್ರಿಕೆಯ ಉಪಸಂಪಾದಕಿ ಸಬೀಹ ಫಾತಿಮ ಮಾತನಾಡಿ, “ಮಾನವೀಯ ಸಂದೇಶವನ್ನು ಕಳುಹಿಸಬೇಕಾಗಿದೆ. ದ್ವೇಷಭಕ್ತರ ಎಲ್ಲ ಸುಳ್ಳುಗಳನ್ನು ಸೋಲಿಸಲು ಸಾಧ್ಯವಿದೆ. ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಸೆಟೆದು ನಿಲ್ಲಬೇಕು. ಈ ನೆಲದಲ್ಲಿರುವ ಎಲ್ಲ ಮನುಷ್ಯರನ್ನು ಮನುಷ್ಯರೆಂದು ಸಾರಬೇಕಾಗಿದೆ. ನಮ್ಮ ಊರಿನ ಗಲ್ಲಿಗಲ್ಲಿಗೂ ಈ ಸಂದೇಶವನ್ನು ಕಳುಹಿಸೋಣ” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೋಹನ್‌ ರಾಜ್‌ ಮಾತನಾಡಿ, “ಇದು ನಮ್ಮ ದೇಶ. ನಮ್ಮನ್ನು ದೇಶ ಬಿಟ್ಟು ಹೋಗಿ ಎನ್ನುತ್ತಿದ್ದಾರೆ. ಮಧ್ಯ ಏಷಿಯಾದಿಂದ ಬಂದವರು ವಾಪಸ್‌ ಹೋಗಬಹುದು. ನೀವು ನಕಲಿ ದೇಶಭಕ್ತರು. ನಾವು ಶಾಂತಿಯನ್ನು ಪಾಲಿಸೋರು. ನಾವೇನಾದರೂ ತಿರುಗಿ ಬಿದ್ದರೆ ನೀವ್ಯಾರು ಎದುರಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಸಂವಿಧಾನ ರಚನಾ ಸಭೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರವೇಶಿಸಲು ಕಾರಣರಾದವರು ಮುಸ್ಲಿಮರು. ಅಂಬೇಡ್ಕರ್‌ ಅವರನ್ನು ಗೆಲ್ಲಿಸಿ ಕಳುಹಿಸಿದರು. ಮುಸ್ಲಿಮರೆಂದರೆ ಮಾಜಿ ದಲಿತರು. ನಾವು ನಿಮ್ಮ ರಕ್ತ ಹಂಚಿಕೊಂಡು ಹುಟ್ಟಿದ್ದೇವೆ. ನಿಮ್ಮೊಂದಿಗೆ ಇರುತ್ತೇವೆ” ಎಂದು ಅಭಯ ನೀಡಿದರು.

ರೈತ ಮುಖಂಡ ಎಚ್‌.ಆರ್‌.ಬಸವರಾಜಪ್ಪ ಮಾತನಾಡಿ, “ರಾಮಸೇನೆ, ಬಜರಂಗದವಳದವರೇ ನಿಮ್ಮ ಮಕ್ಕಳನ್ನು ಜಟ್ಕಾ ಕಟ್‌ಗೆ ಕಳುಹಿಸಿ. ಬಡ ಮಕ್ಕಳನ್ನು  ವಿದ್ಯಾಭ್ಯಾಸದಿಂದ ವಂಚಿಸುತ್ತಿದ್ದೀರಿ. ನಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾಗಿದೆ” ಎಂದು ಹೇಳಿದರು.

ಯುವ ಹೋರಾಟಗಾರ್ತಿ ನಜ್ಮಾ ಮಾತನಾಡಿ- ಯಾವ ಧರ್ಮವೂ ಯಾರನ್ನೂ ದ್ವೇಷಿಸಲು ಹೇಳಿಲ್ಲ. ಧರ್ಮದ ರಕ್ಷಣೆ ಹೆಸರಲ್ಲಿ, ಧರ್ಮದ ಗುತ್ತಿಗೆ ಪಡೆದವರು ಮನುಷ್ಯ ಮನುಷ್ಯರ ನಡುವೆ ಕಂದಕವನ್ನು ಉಂಟು ಮಾಡುತ್ತಿದ್ದಾರೆ. ಧರ್ಮವನ್ನು ನಿಜವಾಗಿ ಅನುಸರಿಸುವವರು ಪ್ರೀತಿಯನ್ನು ಹಂಚುತ್ತಾರೆ” ಎಂದರು.

ನಂತರ ಬೃಹತ್‌ ಮೆರವಣಿಗೆ ಆರಂಭವಾಯಿತು. ಇದಕ್ಕೂ ಮೊದಲು ಬಾಗಲಕೋಟೆಯಿಂದ ಪಾದಯಾತ್ರೆ ಆರಂಭಿಸಿ ಉಡುಪಿಗೆ ಬಂದ ಎಸ್‌.ಕೆ.ನಾಗರಾಜ್‌ ತಂಡವನ್ನು ಅಭಿನಂದಿಸಲಾಯಿತು.

(ಕಾರ್ಯಕ್ರಮದ ಅಪ್‌ಡೇಟ್ ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Jai Bharath….. Jai Bharath..
    … Jai Bharath…… Helona…. Jai Hind nalli Hindu maathra ide…. Jai Bharath nalli Hindu Muslim Christian Dalith Sikh….
    et… Yellavu ide

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...