HomeUncategorizedಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ ಆರಂಭ

- Advertisement -
- Advertisement -

ಬಹುತ್ವವನ್ನು ಪ್ರತಿಪಾದಿಸುವ ಏಳು ಬಣ್ಣಗಳ ಬಾವುಟವನ್ನು ಹಿಡಿಯುವ ಮೂಲಕ ಉಡುಪಿಯ ಸಾಮರಸ್ಯ ನಡಿಗೆಗೆ ಚಾಲನೆ ನೀಡಲಾಯಿತು.

ಇಲ್ಲಿನ ಅಜ್ಜರಕಾಡು ಹುತಾತ್ಮರ ಚೌಕದಿಂದ ಕ್ರಿಶ್ಚಿಯನ್‌ ಶಾಲೆ ಮೈದಾನದವರೆಗೆ ನಡೆಯುವ ಮೆರವಣಿಗೆಗೆ ವಿವಿಧ ಸಮುದಾಯಗಳ ಧರ್ಮಗುರುಗಳು, ವಿವಿಧ ಕ್ಷೇತ್ರದ ಗಣ್ಯರು ಬಾವುಟ ಬೀಸಿ ಚಾಲನೆ ನೀಡಿದರು.

ಬಹುತ್ವ ಕರ್ನಾಟಕ ಸಂಚಾಲಕರಾದ ವಿನಯ್‌ ಶ್ರೀನಿವಾಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, “ಉಡುಪಿ ಕನಕದಾಸರ ನಾಡು, ಹಾಜಿ ಅಬ್ದುಲ್ಲರ ನಾಡು. ಈ ನಾಡಿನಲ್ಲಿ ವಿವಿಧ ಪರಂಪರೆಗಳಿವೆ. ಸಹಬಾಳ್ವೆ ಇಲ್ಲಿನ ದಿನನಿತ್ಯದ ಭಾಗವಾಗಿದೆ. ಇಂದು ದ್ವೇಷ ಹೆಚ್ಚುತ್ತಿದೆ. ದ್ವೇಷ ಎಂಬುದು ಬೀದಿಬೀದಿಗಳಲ್ಲಿ ಹರಡುತ್ತಿದೆ. ಗೋಡೆಗಳನ್ನು ಕಟ್ಟಲಾಗುತ್ತಿದೆ. ಮಾನವೀಯತೆ ಅಪಾಯದಲ್ಲಿದೆ” ಎಂದರು.

ದ್ವೇಷವನ್ನು ಬಿತ್ತಲು ಹೊರಟವರ ಎದುರು ನಾವು ಪ್ರತಿ ಮನುಷ್ಯರಲ್ಲಿನ ಪ್ರೀತಿಯನ್ನು ಹಂಚಲು ಹೊರಟಿದ್ದೇವೆ. ಅದಕ್ಕಾಗಿ ಸಹಬಾಳ್ವೆ ಸಮಾವೇಶ ಆಯೋಜಿಸಿದ್ದೇವೆ. ಸಾವಿರಾರು ಸಂಖ್ಯೆಯ ಜನರು ಪ್ರೀತಿ ಹಂಚಲು ಬಂದಿದ್ದಾರೆ. ಎಲ್ಲ ಧರ್ಮದವರು, ಜಾತಿಯವರು ಜೊತೆಗೂಡಿದ್ದಾರೆ. ಉಡುಪಿ ಹಾಗೂ ಬೆಂಗಳೂರಿನಲ್ಲಿ ಕರಪತ್ರ ಹಂಚಲು ಹೋದಾಗ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಈ ಕೆಲಸ ಅಗತ್ಯವಿತ್ತು ಎಂದು ಬಹಳಷ್ಟು ಜನರು ತಿಳಿಸಿದರು” ಎಂದರು.

ಸಹಬಾಳ್ವೆ ಎಂದರೆ ಪ್ರಜಾಪ್ರಭುತ್ವ, ಒಬ್ಬರಿಗೊಬ್ಬರು ಪ್ರೀತಿಯಿಂದ ಇರುವುದು ಸಹಬಾಳ್ವೆ. ಸಹಬಾಳ್ವೆ ಸಾಮರಸ್ಯವು ನಮ್ಮ ಸಂವಿಧಾನ ಪೀಠಿಕೆಯ ಭಾಗವಾಗಿದೆ. ನಾಡಿನಲ್ಲಿ ಆರ್ಥಿಕ, ಸಾಮಾಜಿಕ ಸಮಾನತಯೆ ಇಲ್ಲವಾಗಿದೆ. ಸಮಾನತೆ ಬರಬೇಕಾದರೆ ಸಹಬಾಳ್ವೆ ಬೇಕಿದೆ. ಪ್ರೀತಿಯಿಂದ  ದ್ವೇಷವನ್ನು ಸೋಲಿಸೋಣ. ಸೇತುವೆಯನ್ನು ಕಟ್ಟೋಣ ಎಂದು ಆಶಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಸಾಮರಸ್ಯ, ಸಹಬಾಳ್ವೆ ಸಹಜವಾಗಿ ಬರಬೇಕು. ಪ್ರಕೃತಿಯಲ್ಲಿ ಅದು ಸಹಜವಾಗಿದೆ. ಅದು ಮನುಷ್ಯರಲ್ಲಿಯೂ ಸಹಜವಾಗಬೇಕಿದೆ” ಎಂದರು.

ದಮನಿತ ಸಮುದಾಯಗಳು ಈ ದೇಶಕ್ಕೆ ಅನ್ಯಾಯ ಮಾಡಿಲ್ಲ. ಈ ನಾಡನ್ನು ಕಟ್ಟಿದ ಜನರಿವರು. ಈ ನಾಡಿಗಾಗಿ ಶ್ರಮಿಸಿದವರು. ದೇಶದ ಯಾವುದೇ ಆಂತರಿಕ ವಿಚಾರವನ್ನುಇನ್ನೊಂದು ದೇಶಕ್ಕೆ ತಿಳಿಸಿಲ್ಲ. ಇನ್ನೊಬ್ಬರನ್ನು ಕೊಲ್ಲುವ ಮನಸ್ಸು ನಮ್ಮದಲ್ಲ. ಆ ವೈದಿಕ ಪರಂಪರೆ ಇಡೀ ದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಬುದ್ಧ, ಬಸವ, ನಾರಾಯಣ ಗುರುರವರ ಭಾರತ ಮಾಯವಾಗಿ, ಪೇಶ್ವೆ ಹಾಗೂ ಬುಲ್ಡೋಜರ್‌ ಭಾರತ ಬರುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಉಡುಪಿಗೆ ಸಾವಿರಾರು ಜನರು ನದಿಗಳಾಗಿ ಬಂದಿದ್ದಾರೆ. ಕುವೆಂಪು ಅವರು ಕಂಡಂತಹ ಸರ್ವಜನ ಶಾಂತಿಯ ತೋಟ ಕದಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಹೋರಾಟಗಾರ್ತಿ ಕೆ. ನೀಲಾ ಮಾತನಾಡಿ,  ”ನಾವು ಮೈಮರೆತ್ತಿದ್ದೆವು. ಆದರೆ ಇವರು ಎಚ್ಚರಿಸಿದ್ದಾರೆ.  ನಮಗೆ ಎಚ್ಚರವನ್ನು ನೀಡಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಮರೆತ್ತಿದ್ದನ್ನು ನೆನಪು ಮಾಡಿದ್ದೀರಿ. ಕೂಡಿ ಬಾಳುವುದಕ್ಕೆ ಯಾವ ದೊಣ್ಣೆನಾಯಕನ ಅನುಮತಿಯೂ ಬೇಕಿಲ್ಲ.  ನಾವು ಜಗತ್ತಿನಾದ್ಯಂತ ಪ್ರೀತಿಯ ಹಸಿವನ್ನು ತಣಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ಕೂಡಿ ಬದುಕಿದ ಪರಂಪರೆಯನ್ನು ನಾವು ಮುಂದುವರಿಸುತ್ತೇವೆ. ಈ ಪರಂಪರೆಯ ಕೊಂಡಿಯನ್ನು ಮುಂದಕ್ಕೆ ತೆಗೆದುಕೊಂಡು ಹೋಗೋಣ. ಬಹುಸಂಖ್ಯಾತದ ಕೋಮುವಾದಕ್ಕೆ  ಅಲ್ಪಸಂಖ್ಯಾತ ಕೋಮುವಾದ ಉತ್ತರವಲ್ಲ. ಬೆಂಕಿಗೆ ತಣ್ಣೀರೇ ಉತ್ತರ. ಪ್ರೀತಿಗೆ ಜಯವಾಗಲಿ, ದುಡಿಯುವ ಶಕ್ತಿಗೆ ಜಯವಾಗಲಿ” ಎಂದು ಘೋಷಣೆ ಕೂಗಿದರು.

ರೈತ ನಾಯಕ ಚಾಮರಸ ಮಾಲೀಪಾಟೀಲ್‌ ಮಾತನಾಡಿ, `ಸಮಾಜವನ್ನು ಇಬ್ಬಾಗ ಮಾಡಿ ಅಧಿಕಾರ ಹಿಡಿಯಲು ಹೊರಟಿರುವವರನ್ನು ದೇಶದಲ್ಲಿ ನೋಡುತ್ತಿದ್ದೇವೆ. ಇದು ರಾಜ್ಯದಲ್ಲಿಯೂ ನಡೆಯುತ್ತಿದೆ. ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ವ್ಯಾಪಾರಕ್ಕೆ ನಿರ್ಬಂಧ, ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಪ್ರಕರಣ ಮೊದಲಾಗಿ ಈಗ ಆಜಾನ್‌ಗೆ ಬಂದು ನಿಂತಿದೆ. ಉದ್ಯೋಗವಿಲ್ಲದೆ ಯುವಕರು ಬೀದಿ ಬೀದಿ ಅಲೆಯುತ್ತಿದ್ದಾರೆ. ಸಾಲಗಾರರಾಗಿ ಮೂರುವರೆ ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಮಾತನಾಡಿ. ಅತಿವೃಷ್ಟಿಯಿಂದ ನೊಂದ ರೈತರಿಗೆ ಪರಿಹಾರ ನೀಡಿ. ಅದನ್ನು ಬಿಟ್ಟು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದೀರಿ. ರೈತರು, ದಲಿತರು, ಮುಸ್ಲಿಮರು ಒಗ್ಗೂಡಿ ಅಹಿಸಾತ್ಮಕವಾಗಿ ಹೋರಾಟ ಮಾಡಬೇಕಾಗಿದೆ. ಈ ಫ್ಯಾಸಿಸ್ಟ್‌ ವಿರುದ್ಧ ಕೆಲಸ ಮಾಡೋಣ. ಇಡೀ ದೇಶಕ್ಕೆ ಸಂದೇಶ ಕೊಡೋಣ” ಎಂದರು.

`ಅನುಪಮ’ ಮಾಸಪತ್ರಿಕೆಯ ಉಪಸಂಪಾದಕಿ ಸಬೀಹ ಫಾತಿಮ ಮಾತನಾಡಿ, “ಮಾನವೀಯ ಸಂದೇಶವನ್ನು ಕಳುಹಿಸಬೇಕಾಗಿದೆ. ದ್ವೇಷಭಕ್ತರ ಎಲ್ಲ ಸುಳ್ಳುಗಳನ್ನು ಸೋಲಿಸಲು ಸಾಧ್ಯವಿದೆ. ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಸೆಟೆದು ನಿಲ್ಲಬೇಕು. ಈ ನೆಲದಲ್ಲಿರುವ ಎಲ್ಲ ಮನುಷ್ಯರನ್ನು ಮನುಷ್ಯರೆಂದು ಸಾರಬೇಕಾಗಿದೆ. ನಮ್ಮ ಊರಿನ ಗಲ್ಲಿಗಲ್ಲಿಗೂ ಈ ಸಂದೇಶವನ್ನು ಕಳುಹಿಸೋಣ” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೋಹನ್‌ ರಾಜ್‌ ಮಾತನಾಡಿ, “ಇದು ನಮ್ಮ ದೇಶ. ನಮ್ಮನ್ನು ದೇಶ ಬಿಟ್ಟು ಹೋಗಿ ಎನ್ನುತ್ತಿದ್ದಾರೆ. ಮಧ್ಯ ಏಷಿಯಾದಿಂದ ಬಂದವರು ವಾಪಸ್‌ ಹೋಗಬಹುದು. ನೀವು ನಕಲಿ ದೇಶಭಕ್ತರು. ನಾವು ಶಾಂತಿಯನ್ನು ಪಾಲಿಸೋರು. ನಾವೇನಾದರೂ ತಿರುಗಿ ಬಿದ್ದರೆ ನೀವ್ಯಾರು ಎದುರಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಸಂವಿಧಾನ ರಚನಾ ಸಭೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಪ್ರವೇಶಿಸಲು ಕಾರಣರಾದವರು ಮುಸ್ಲಿಮರು. ಅಂಬೇಡ್ಕರ್‌ ಅವರನ್ನು ಗೆಲ್ಲಿಸಿ ಕಳುಹಿಸಿದರು. ಮುಸ್ಲಿಮರೆಂದರೆ ಮಾಜಿ ದಲಿತರು. ನಾವು ನಿಮ್ಮ ರಕ್ತ ಹಂಚಿಕೊಂಡು ಹುಟ್ಟಿದ್ದೇವೆ. ನಿಮ್ಮೊಂದಿಗೆ ಇರುತ್ತೇವೆ” ಎಂದು ಅಭಯ ನೀಡಿದರು.

ರೈತ ಮುಖಂಡ ಎಚ್‌.ಆರ್‌.ಬಸವರಾಜಪ್ಪ ಮಾತನಾಡಿ, “ರಾಮಸೇನೆ, ಬಜರಂಗದವಳದವರೇ ನಿಮ್ಮ ಮಕ್ಕಳನ್ನು ಜಟ್ಕಾ ಕಟ್‌ಗೆ ಕಳುಹಿಸಿ. ಬಡ ಮಕ್ಕಳನ್ನು  ವಿದ್ಯಾಭ್ಯಾಸದಿಂದ ವಂಚಿಸುತ್ತಿದ್ದೀರಿ. ನಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾಗಿದೆ” ಎಂದು ಹೇಳಿದರು.

ಯುವ ಹೋರಾಟಗಾರ್ತಿ ನಜ್ಮಾ ಮಾತನಾಡಿ- ಯಾವ ಧರ್ಮವೂ ಯಾರನ್ನೂ ದ್ವೇಷಿಸಲು ಹೇಳಿಲ್ಲ. ಧರ್ಮದ ರಕ್ಷಣೆ ಹೆಸರಲ್ಲಿ, ಧರ್ಮದ ಗುತ್ತಿಗೆ ಪಡೆದವರು ಮನುಷ್ಯ ಮನುಷ್ಯರ ನಡುವೆ ಕಂದಕವನ್ನು ಉಂಟು ಮಾಡುತ್ತಿದ್ದಾರೆ. ಧರ್ಮವನ್ನು ನಿಜವಾಗಿ ಅನುಸರಿಸುವವರು ಪ್ರೀತಿಯನ್ನು ಹಂಚುತ್ತಾರೆ” ಎಂದರು.

ನಂತರ ಬೃಹತ್‌ ಮೆರವಣಿಗೆ ಆರಂಭವಾಯಿತು. ಇದಕ್ಕೂ ಮೊದಲು ಬಾಗಲಕೋಟೆಯಿಂದ ಪಾದಯಾತ್ರೆ ಆರಂಭಿಸಿ ಉಡುಪಿಗೆ ಬಂದ ಎಸ್‌.ಕೆ.ನಾಗರಾಜ್‌ ತಂಡವನ್ನು ಅಭಿನಂದಿಸಲಾಯಿತು.

(ಕಾರ್ಯಕ್ರಮದ ಅಪ್‌ಡೇಟ್ ನಿರೀಕ್ಷಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Jai Bharath….. Jai Bharath..
    … Jai Bharath…… Helona…. Jai Hind nalli Hindu maathra ide…. Jai Bharath nalli Hindu Muslim Christian Dalith Sikh….
    et… Yellavu ide

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...