Homeಕರ್ನಾಟಕಉಡುಪಿ | ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ; ಆರೋಪಿಗಳಾದ ರೋಹಿತ್, ಸಂತ್ರಿ ಬಂಧನ

ಉಡುಪಿ | ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ; ಆರೋಪಿಗಳಾದ ರೋಹಿತ್, ಸಂತ್ರಿ ಬಂಧನ

- Advertisement -
- Advertisement -

ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ವಾಟ್ಸಾಪ್ ಹಾಗೂ ಫೇಸ್‌ಬುಕ್ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ ಪಡೆದಿರುವ ಕೊಚ್ಚಿನ್ ಶಿಪ್ ಯಾರ್ಡ್‌ನ ಇಬ್ಬರು ನೌಕರರನ್ನು ಉಡುಪಿ ಪೊಲೀಸರು ಗುರುವಾರ (ನವೆಂಬರ್ 20) ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯ ರೋಹಿತ್ ಮತ್ತು ಸಂತ್ರಿ ಬಂಧಿತ ಆರೋಪಿಗಳು. ಇವರು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಒಪ್ಪಂದದ ಮೇಲೆ ಕೆಲಸ ಮಾಡುತ್ತಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ಈ ಇಬ್ಬರು ಆರೋಪಿಗಳು ಕಳೆದ 18 ತಿಂಗಳಿಗೂ ಹೆಚ್ಚು ಸಮಯದಿಂದ ಶಿಪ್‌ಯಾರ್ಡ್ ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಮಾಹಿತಿಗಳಲ್ಲಿ ಭಾರತೀಯ ನೌಕಾಪಡೆಗಾಗಿ ಮತ್ತು ಖಾಸಗಿ ಗ್ರಾಹಕರಿಗಾಗಿ ನಿರ್ಮಿಸಲಾದ ಹಡಗುಗಳ ವಿವರಗಳು ಸೇರಿವೆ. ಈ ಮಾಹಿತಿಯನ್ನು ವಾಟ್ಸಾಪ್ ಮೂಲಕ ಪಾಕಿಸ್ತಾನದಲ್ಲಿರುವ ತಮ್ಮ ಹ್ಯಾಂಡ್ಲರ್‌ಗಳಿಗೆ ಕಳುಹಿಸಿ, ಬದಲಾಗಿ ಹಣ ಪಡೆದಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕೊಚ್ಚಿನ್ ಶಿಪ್‌ಯಾರ್ಡ್ ಸಿಇಒ ಔಪಚಾರಿಕ ದೂರು ದಾಖಲಿಸಿದ ನಂತರ ಆರೋಪಿಗಳ ಬಂಧನವಾಗಿದೆ. ಪೊಲೀಸರು ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳು ರವಾನಿಸಿದ ಮಾಹಿತಿಯು ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರಬಹುದು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಬಂಧಿತರ ಹಿಂದೆ ದೊಡ್ಡ ಜಾಲವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಅಧಿಕಾರಿಗಳು ಕೂಡ ತನಿಖೆಯ ಭಾಗವಾಗುವ ಸಾಧ್ಯತೆ ಇದೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ...

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

'ಉಳುವವರಿಗೆ ಭೂಮಿ' ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ...

ದುಬೈ ಏರ್‌ಶೋನಲ್ಲಿ ಭಾರತದ ತೇಜಸ್‌ ಯುದ್ಧವಿಮಾನ ಪತನ ; ಪೈಲಟ್‌ ಸಾವು

ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಶುಕ್ರವಾರ (ನವೆಂಬರ್ 21) ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುರ್ಘಟನೆ ನಡೆದಿದೆ. ದೊಡ್ಡ ಜನಸಮೂಹದ ಮುಂದೆ ವೈಮಾನಿಕ ಪ್ರದರ್ಶನ ನೀಡುತ್ತಿದ್ದಾಗ...

ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿ.ಕೆ. ಶಿವಕುಮಾರ್

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಎಲ್ಲ 140 ಮಂದಿ ಶಾಸಕರೂ ನನ್ನವರೇ. ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ'...

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 6 ಸಾವು

ಶುಕ್ರವಾರ (ನವೆಂಬರ್ 21) ಬೆಳಿಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 26 ಸೆಕೆಂಡುಗಳ ಕಾಲ ಕಂಪನ ಸಂಭವಿಸಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲೂ...

ರಾಜ್ಯಪಾಲರು ಮಸೂದೆಗಳನ್ನು ಅಂಗೀಕರಿಸಲು ಸಮಯ ಮಿತಿ ನಿಗದಿ ಮಾಡುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ: ಸ್ಟಾಲಿನ್ 

ರಾಜ್ಯ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲರಿಗೆ ಸಮಯ ಮಿತಿಯನ್ನು ನಿಗದಿಪಡಿಸಲು ಸಂವಿಧಾನದ 200ನೇ ವಿಧಿಗೆ ತಿದ್ದುಪಡಿ ತರಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಆಗ್ರಹಿಸಿದ್ದಾರೆ.  ರಾಷ್ಟ್ರಪತಿಗಳ ಉಲ್ಲೇಖಕ್ಕೆ ಉತ್ತರಿಸುವಾಗ ಸುಪ್ರೀಂ ಕೋರ್ಟ್‌ನ...

ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಕೊಲೆಯತ್ನ ಆರೋಪದ ಮೇಲೆ ಕಲಬುರಗಿಯ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅನ್ನು ಅಫಜಲಪುರ ತಾಲೂಕಿನ ಶಿರವಾಳ ಸಮೀಪ ಗುರುವಾರ (ನವೆಂಬರ್ 20) ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ನಾಟಿ ಔಷಧಿ...

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ...

ಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

ಗುಜರಾತ್‌ನ ಜಾಮ್‌ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ...

‘ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ನಾನು ನಿಜವಾಗಿಯೂ ಜಾತ್ಯತೀತ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ತಮ್ಮ ವಿದಾಯ ಭಾಷಣದಲ್ಲಿ ಹೇಳಿದ್ದಾರೆ.  ಸುಪ್ರೀಂ ಕೋರ್ಟ್‌ನ ಕೋರ್ಟ್ ನಲ್ಲಿ,  ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್...